TOP STORIES:

ಬ್ರಹ್ಮ ಶ್ರೀ ನಾರಾಯಣ ಗುರು ಸಬ್ದ ಚಿತ್ರ ನಿರಾಕರಣೆ ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಖಂಡಣೆ


ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸಬ್ದ ಚಿತ್ರವನ್ನು ಕೇಂದ್ರ ಗಣರಾಜ್ಯೋತ್ಸವದ ಆಯ್ಕೆ ಸಮಿತಿ ನಿರಾಕರಿಸಿದ್ದನ್ನು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಖಂಡಿಸುತ್ತದೆ, ಎಂದು ಎಸ್ ಎನ್ ಜಿ ಯ ರಾಜ್ಯಾಧ್ಯಕ್ಷರಾದ ಸತ್ಯಜಿತ್‌ ಸುರತ್ಕಲ್ ಆಕ್ಷೇಪ ವ್ಯಕ್ತಪಡಿಸಿದರು.

“ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿ ಎಂಬ ಸಂದೇಶವನ್ನು ಸಾರಿದ ಸಂತ, ಮಾನವತಾವಾದಿ, ಸಮಾಜ ಸುಧಾರಕ, ಹಿಂದುಳಿದ ವರ್ಗಗಳ ಶೋಷಿತ ವರ್ಗಗಳ ತುಳಿತಕ್ಕೆ ಒಳಗಾದ ಸಮುದಾಯದವರನ್ನು ಮೇಲೆತ್ತಿದವರು, ಅವರ ಬದುಕಿನಲ್ಲಿ ಆಶಾಕಿರಣವನ್ನು ಮೂಡಿಸಿದವರು ಹಾಗೂ ಅಕ್ಷರ ಬ್ರಹ್ಮ ಎಂದೆ ಜನಮಾನಸದಲ್ಲಿ ಮನೆಮಾತಾಗಿರುವ, ಬ್ರಹ್ಮರ್ಷಿ ನಾರಾಯಣ ಗುರುಗಳು ಕೇರಳದ ಮೂಲಕ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮುಂತಾದ, ಸರ್ವ ಧರ್ಮಗಳ ಜನರು ಸಹ ಬಾಳ್ವೆಗಳ ಮೂಲಕ ಒಂದೇ ಜಾತಿ, ಒಂದೇ ಧರ್ಮ, ಒಬ್ಬನೇ ದೇವರು, ‘ಮನುಷ್ಯ ಕುಲಂ ತಾನೊಂದೇ ವಲಂ’ ಎನ್ನುವ ಆದಿಕಪಿ ಪಂಪನ ಮಾತುಗಳನ್ನು ತಮ್ಮ ಧಾರ್ಮಿಕ ತತ್ವಾದರ್ಶಗಳ ಮೂಲಕ ನನಸು ಮಾಡಿದ ಭಾರತೀಯ ದಾರ್ಷನಿಕರಾದ ಅಂಬೇಡ್ಕರ್‌, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ, ರವೀಂದ್ರನಾಥ ಠಾಗೂರ್ ಇವರುಗಳು ಬ್ರಹ್ಮರ್ಷಿ ನಾರಾಯಣ ಗುರುಗಳ ಪ್ರಭಾವಕ್ಕೆ ಒಳಗಾಗಿ ಪ್ರೇರೆಪಣೆಯನ್ನು ಪಡೆದ ಮಹನೀಯರು, ಇಂತಹ ಮನುಕುಲದ ದಿವ್ಯ ಜ್ಯೋತಿಯೊಂದರ ಸ್ಥಬ್ದ ಚಿತ್ರವೊಂದನ್ನು ಕೇರಳದ ಸರ್ಕಾರವು ದೆಹಲಿಯಲ್ಲಿ ನಡೆಯಲಿರುವ ಜನವರಿ 26 ರ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಕೇರಳ ರಾಜ್ಯದ ಹೆಮ್ಮೆಯ ಪ್ರತೀಕವಾಗಿ ಕಳಿಸಿರುವುದನ್ನು ಕೇಂದ್ರ ಆಯ್ಕೆ ಸಮಿತಿ ತಿರಸ್ಕರಿಸಿರುವುದು ಅತ್ಯಂತ ನೋವಿನ ವಿಚಾರವಾಗಿದೆ, ಸ್ತ್ರೀ ಸಮಾನತೆ ಪ್ರತಿಪಾದಿಸಿ ಜಾತಿ, ಮತ ಭೇದಗಳನ್ನು ದಿಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನ. ಅಂತವರ ಮೂರ್ತಿ ಇದ್ದ ಸ್ಥಬ್ಧ ಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳುವಳಿಕೆ ಇಲ್ಲದ ಅಜ್ಞಾನದ ಪರಮಾವಧಿ, ಆಯ್ಕೆ ಸಮಿತಿಯಲ್ಲಿ ಇಂತಹ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ಕೆಲವು ಮೂಲಗಳ ಪ್ರಕಾರ, ಗುರುಗಳ ಶಿಲ್ಪದ ಬದಲು ಶಂಕರಾಚಾರ್ಯರ ಪ್ರತಿಮೆ ಇಡಬಹುದು ಎಂಬ ಮಾಹಿತಿ ಇದ್ದು ಅದನ್ನು ಖಂಡಿಸುತ್ತೇವೆ . ಕೇವಲ ಶಂಕರಾಚಾರ್ಯರ ಶಿಲ್ಪ ಇಡುತ್ತಿದ್ದರೆ ಆ ಬಗ್ಗೆ ಯಾವುದೇ ಆಕ್ಷೇಪ ಇರುತ್ತಿರಲಿಲ್ಲ ಎಂದರು.

ಸಮಾನತೆಯ ಸಮಾಜದ ಕನಸು ಕಾಣುವ ಪ್ರತಿಯೊಬ್ಬ ಭಾರತೀಯರು ಖಂಡಿಸಬೇಕಿದೆ. ಇದು ಹಿಂದುಳಿದ ಶೋಷಿತ ದಲಿತ ಗುರುಗಳಿಗೆ ಮತ್ತು ಸಮಾಜಕ್ಕೆ ಮಾಡಿದ ಅವಮಾನವಾಗಿದ್ದು ಬ್ರಹ್ಮರ್ಷಿ ನಾರಾಯಣ ಗುರುಗಳ ಮೂರ್ತಿ ಇರುವ ಸ್ಥಬ್ಧ ಚಿತ್ರವನ್ನು ಗಣರಾಜ್ಯೋತ್ಸವದ ಮೆರವಣಿಗೆಯ ಸಮಿತಿಯು ಅಂಗೀಕಾರ ಮಾಡದೇ ಗುರುಗಳಿಗೆ ಗೌರವವನ್ನು ನೀಡಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಅಚ್ಚುತ ಅಮೀನ್ ಕಲ್ಮಾಡಿ, ರಾಜ್ಯ ಉಪಾಧ್ಯಕ್ಷರು, ರಾಜು ಪೂಜಾರಿ ಉಳ್ಳೂರು, ಗೌರವ ಅಧ್ಯಕ್ಷರು, ಜಗನ್ನಾಥ್ ಕೋಟೆ, ಉಡುಪಿ ಜಿಲ್ಲಾ ಅಧ್ಯಕ್ಷರು, ಶಶಿಧರ ಎಮ್. ಅಮೀನ್, ವಡಭಾಂಡೇಶ್ವರ, ತಾಲೂಕು ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.


Related Posts

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್


Read More »

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »