TOP STORIES:

FOLLOW US

ಭಾರತ ಭೂಪಟದಲ್ಲಿ ಪಾಕಿಸ್ತಾನ, ಚೀನಾ ಕಾಣಿಸುವುದಿಲ್ಲ, ಆದರೆ ಶ್ರೀಲಂಕಾ ಏಕೆ ಕಾಣಿಸುತ್ತದೆ?


ನವದೆಹಲಿ: ಭಾರತದ ಭೂಪಟ ನೋಡಿದಾಗ ಶ್ರೀಲಂಕಾ ಅದರಲ್ಲಿ ಕಾಣಿಸುತ್ತದೆ. ಆದರೆ, ಯಾವುದೇ ನೆರೆ ಹೊರೆಯ ದೇಶಗಳು ಕಾಣಿಸುವುದಿಲ್ಲ. ಹಾಗೆಂದ ಮಾತ್ರಕ್ಕೆ ಶ್ರೀಲಂಕಾದೊಂದಿಗೆ ನಾವು ಉತ್ತಮ ಬಾಂಧವ್ಯ ಹೊಂದಿದ್ದೇವೆ ಎಂದುಕೊಂಡರೆ ತಪ್ಪಾಗುತ್ತದೆ.

ಇದರ ಹಿಂದೆ ಪ್ರಮುಖ ಕಾರಣವಿದೆ.

ಭಾರತ ಭೂಪಟದಲ್ಲಿ ಶ್ರೀಲಂಕಾ ಕಾಣಿಸಿಕೊಂಡಿರುವುದರ ಹಿಂದೆ ಕಡಲ ಕಾನೂನು ಕಾರಣವಾಗಿದೆ. ಇದನ್ನು ಸಾಗರ ಕಾನೂನು ಎಂದು ಕರೆಯಲಾಗುತ್ತದೆ. ವಿಶ್ವಸಂಸ್ಥೆ ಸ್ಥಾಪನೆ ನಂತರ ಈ ಕಾನೂನು ಅಸ್ತಿತ್ವಕ್ಕೆ ಬಂದಿದೆ. ಈ ಕಾಯ್ದೆ ಜಾರಿಗೆ ತರಲು ಸಾಗರ ಕಾನೂನಿನ ಮೇಲಿನ ವಿಶ್ವಸಂಸ್ಥೆ ಸಮಾವೇಶವನ್ನು (UNCLOC-1) ಮೊದಲ ಬಾರಿಗೆ 1956ರಲ್ಲಿ ನಡೆಸಲಾಯಿತು. 1958 ರಿಂದ ಈ ಕಾನೂನು ಜಾರಿಯಲ್ಲಿದೆ.

UNCLOC-1ರಲ್ಲಿ ಕಡಲಿಗೆ ಸಂಬಂಧಿಸಿದ ಗಡಿಗಳು, ಒಪ್ಪಂದಗಳಿಗೆ ಸಂಬಂಧಿಸಿದಂತೆ ಒಮ್ಮತಕ್ಕೆ ಬರಲಾಗಿದೆ. ನಂತರ 1982 ರವರೆಗೆ ಮೂರು ಸಮ್ಮೇಳನಗಳು ನಡೆದಿವೆ. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಮುದ್ರಕ್ಕೆ ಸಂಬಂಧಿಸಿದ ಕಾಯ್ದೆಗಳನ್ನು ಗುರುತಿಸುವ ಪ್ರಕ್ರಿಯೆ ನಡೆದಿದೆ.

ಸಾಗರ ಕಾನೂನು ಎಂದರೆ ಏನು?

ಈ ಕಾಯ್ದೆಯನ್ನು ಜಾರಿಗೆ ತಂದಾಗ, ಭಾರತದ ನಕ್ಷೆಯಲ್ಲಿ ಬೇಸ್ ಲೈನ್ ನಿಂದ 200 ನಾಟಿಕಲ್ ಮೈಲಿ ದೂರದಲ್ಲಿರುವ ಪ್ರದೇಶವನ್ನು ಅಂದರೆ, ಆ ದೇಶದ ಬೇಸ್ ಲೈನ್ ತೋರಿಸುವುದು ಕಡ್ಡಾಯವೆಂದು ನಿರ್ಧರಿಸಲಾಗಿದೆ. ಅಂದರೆ ಒಂದು ದೇಶ ಕರಾವಳಿಯಲ್ಲಿದ್ದರೆ ಅಥವಾ ಅದರ ಭಾಗ ಸಮುದ್ರಕ್ಕೆ ಸಂಪರ್ಕ ಹೊಂದಿದ್ದರೆ, ಆ ದೇಶದ ಗಡಿ ಸುತ್ತಲಿನ ಪ್ರದೇಶವನ್ನು ಸಹ ಆ ದೇಶದ ನಕ್ಷೆಯಲ್ಲಿ ತೋರಿಸಲಾಗುತ್ತದೆ. ಭಾರತದ ಭೂಪಟದಲ್ಲಿ ಶ್ರೀಲಂಕಾವನ್ನು ತೋರಿಸಲು ಇದೇ ಕಾರಣ. ಏಕೆಂದರೆ ಶ್ರೀಲಂಕಾ ಭಾರತದಿಂದ 200 ನಾಟಿಕಲ್ ಮೈಲುಗಳ ಅಂತರದಲ್ಲಿದೆ. ಭಾರತದ ಗಡಿಯ 200 ನಾಟಿಕಲ್ ಮೈಲುಗಳೊಳಗಿನ ದೂರದಲ್ಲಿದೆ. ಅದಕ್ಕಾಗಿಯೇ ಶ್ರೀಲಂಕಾ ಭಾರತದ ಭೂಪಟದಲ್ಲಿ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »