TOP STORIES:

ಭಾರತ ಭೂಪಟದಲ್ಲಿ ಪಾಕಿಸ್ತಾನ, ಚೀನಾ ಕಾಣಿಸುವುದಿಲ್ಲ, ಆದರೆ ಶ್ರೀಲಂಕಾ ಏಕೆ ಕಾಣಿಸುತ್ತದೆ?


ನವದೆಹಲಿ: ಭಾರತದ ಭೂಪಟ ನೋಡಿದಾಗ ಶ್ರೀಲಂಕಾ ಅದರಲ್ಲಿ ಕಾಣಿಸುತ್ತದೆ. ಆದರೆ, ಯಾವುದೇ ನೆರೆ ಹೊರೆಯ ದೇಶಗಳು ಕಾಣಿಸುವುದಿಲ್ಲ. ಹಾಗೆಂದ ಮಾತ್ರಕ್ಕೆ ಶ್ರೀಲಂಕಾದೊಂದಿಗೆ ನಾವು ಉತ್ತಮ ಬಾಂಧವ್ಯ ಹೊಂದಿದ್ದೇವೆ ಎಂದುಕೊಂಡರೆ ತಪ್ಪಾಗುತ್ತದೆ.

ಇದರ ಹಿಂದೆ ಪ್ರಮುಖ ಕಾರಣವಿದೆ.

ಭಾರತ ಭೂಪಟದಲ್ಲಿ ಶ್ರೀಲಂಕಾ ಕಾಣಿಸಿಕೊಂಡಿರುವುದರ ಹಿಂದೆ ಕಡಲ ಕಾನೂನು ಕಾರಣವಾಗಿದೆ. ಇದನ್ನು ಸಾಗರ ಕಾನೂನು ಎಂದು ಕರೆಯಲಾಗುತ್ತದೆ. ವಿಶ್ವಸಂಸ್ಥೆ ಸ್ಥಾಪನೆ ನಂತರ ಈ ಕಾನೂನು ಅಸ್ತಿತ್ವಕ್ಕೆ ಬಂದಿದೆ. ಈ ಕಾಯ್ದೆ ಜಾರಿಗೆ ತರಲು ಸಾಗರ ಕಾನೂನಿನ ಮೇಲಿನ ವಿಶ್ವಸಂಸ್ಥೆ ಸಮಾವೇಶವನ್ನು (UNCLOC-1) ಮೊದಲ ಬಾರಿಗೆ 1956ರಲ್ಲಿ ನಡೆಸಲಾಯಿತು. 1958 ರಿಂದ ಈ ಕಾನೂನು ಜಾರಿಯಲ್ಲಿದೆ.

UNCLOC-1ರಲ್ಲಿ ಕಡಲಿಗೆ ಸಂಬಂಧಿಸಿದ ಗಡಿಗಳು, ಒಪ್ಪಂದಗಳಿಗೆ ಸಂಬಂಧಿಸಿದಂತೆ ಒಮ್ಮತಕ್ಕೆ ಬರಲಾಗಿದೆ. ನಂತರ 1982 ರವರೆಗೆ ಮೂರು ಸಮ್ಮೇಳನಗಳು ನಡೆದಿವೆ. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಮುದ್ರಕ್ಕೆ ಸಂಬಂಧಿಸಿದ ಕಾಯ್ದೆಗಳನ್ನು ಗುರುತಿಸುವ ಪ್ರಕ್ರಿಯೆ ನಡೆದಿದೆ.

ಸಾಗರ ಕಾನೂನು ಎಂದರೆ ಏನು?

ಈ ಕಾಯ್ದೆಯನ್ನು ಜಾರಿಗೆ ತಂದಾಗ, ಭಾರತದ ನಕ್ಷೆಯಲ್ಲಿ ಬೇಸ್ ಲೈನ್ ನಿಂದ 200 ನಾಟಿಕಲ್ ಮೈಲಿ ದೂರದಲ್ಲಿರುವ ಪ್ರದೇಶವನ್ನು ಅಂದರೆ, ಆ ದೇಶದ ಬೇಸ್ ಲೈನ್ ತೋರಿಸುವುದು ಕಡ್ಡಾಯವೆಂದು ನಿರ್ಧರಿಸಲಾಗಿದೆ. ಅಂದರೆ ಒಂದು ದೇಶ ಕರಾವಳಿಯಲ್ಲಿದ್ದರೆ ಅಥವಾ ಅದರ ಭಾಗ ಸಮುದ್ರಕ್ಕೆ ಸಂಪರ್ಕ ಹೊಂದಿದ್ದರೆ, ಆ ದೇಶದ ಗಡಿ ಸುತ್ತಲಿನ ಪ್ರದೇಶವನ್ನು ಸಹ ಆ ದೇಶದ ನಕ್ಷೆಯಲ್ಲಿ ತೋರಿಸಲಾಗುತ್ತದೆ. ಭಾರತದ ಭೂಪಟದಲ್ಲಿ ಶ್ರೀಲಂಕಾವನ್ನು ತೋರಿಸಲು ಇದೇ ಕಾರಣ. ಏಕೆಂದರೆ ಶ್ರೀಲಂಕಾ ಭಾರತದಿಂದ 200 ನಾಟಿಕಲ್ ಮೈಲುಗಳ ಅಂತರದಲ್ಲಿದೆ. ಭಾರತದ ಗಡಿಯ 200 ನಾಟಿಕಲ್ ಮೈಲುಗಳೊಳಗಿನ ದೂರದಲ್ಲಿದೆ. ಅದಕ್ಕಾಗಿಯೇ ಶ್ರೀಲಂಕಾ ಭಾರತದ ಭೂಪಟದಲ್ಲಿ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »