TOP STORIES:

ಮಂಗಳೂರಿನಲ್ಲೊಬ್ಬ ಸೋನು ಸೂದ್: ಪನಾಮ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ


ಮಂಗಳೂರು: ದೇಶದಲ್ಲಿ ಕೋವಿಡ್ -೧೯ ರ ಅಲೆ ತಾಂಡವ ವಾಡುವ ಸಂಧರ್ಭದಲ್ಲಿ ಮಂಗಳೂರಿನಲ್ಲೊಬ್ಬ ಯುವ ನಾಯಕ ಮತ್ತು ಉದ್ಯಮಿ ಸಂಕಷ್ಟದಲ್ಲಿರುವ ಸಹಸ್ರಾರು ಮಂದಿಗೆ ತಮ್ಮ ಕೈಲಾಗುವಷ್ಟು ಸಹಾಯ ಹಸ್ತ ನೀಡುತ್ತಾ ಬಡವರ ಪಾಲಿಗೆ ಕಣ್ಮಣಿ ಯಾಗುತ್ತ “ಮಂಗಳೂರಿನಲ್ಲೊಬ್ಬ ಸೋನು ಸೂದ” ಆಗುತ್ತಿದ್ದಾರೆ.ಅವರೇ ಪನಾಮ ನೇಚರ್ ಫ್ರೆಶ್ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ ಯವರು.
ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ವಿವೇಕ್ ರಾಜ್ ಪೂಜಾರಿ ಯವರು ಈ ಬಾರಿ ಇಷ್ಟರತನಕ 16೦೦೦ ಮಂದಿಗೆ ಊಟ, ಸುಮಾರು 4350 ಕುಟುಂಬ ದವರಿಗೆ ಮತ್ತು ದಿನಗೂಲಿ ನೌಕರರಿಗೆ ಕಿಟ್ ಗಳನ್ನೂ ನೀಡಿದ್ದು , ಜೊತೆಗೆ ಹಲವು ಬಡ ಕುಟುಂಬ ಗಳ ಆಸ್ಪತ್ರೆ ಚಿಕಿತ್ಸೆಯ ವೆಚ್ಚ ವನ್ನು ಸಹ ಪನಾಮ ಕಂಪೆನಿ ವತಿಯಿಂದ ಬರಿಸಿದ್ದೇನೆ .ಪ್ರಸಕ್ತ ತಮ್ಮ ಕಡೆಯಿಂದ ನೀಡುವ ಕಿಟ್ ಒಂದು ಕುಟುಂಬಕ್ಕೆ 15 ದಿನಗಳ ಕಾಲ ಉಪಯೋಗಕ್ಕೆ ಬರಲಿದೆ. ಇದು ಹಲವು ಕುಟುಂಬಗಳಿಗೆ ಸಹಾಯವಾಗಲಿದೆ.

ಕಳೆದ ಲೊಕ್ಡೌನ್ ಸಂಧರ್ಭ ಸುಮಾರು ೧೪೦೦೦ ಮಂದಿಗೆ ಬೀದಿ ಬದಿ ಊಟ, ೨೦೦೦ ಮಂದಿಗೆ ಕಿಟ್ ,12 ಮಂದಿಗೆ ಮಾರಲು ತಳ್ಳುಗಾಡಿಯಲ್ಲಿ ಗಾಡಿ ತುಂಬಾ ತರಕಾರಿ , ಮತ್ತು ೫೦ ದೊಡ್ಡ ದೊಡ್ಡ ಕೊಡೆಗಳನ್ನು ಉಚಿತವಾಗಿ ಸಹ ನೀಡಿದ್ದಾರೆ. ಜೊತೆ ತಮ್ಮ ಊರಿಗೆ ಹೋಗಲು ಸಂಕಷ್ಟ ದಲ್ಲಿದ್ದಾಗ ಆರ್ಥಿಕ ಸಹಾಯ ಮಾಡಿದ್ದಾರೆ.

ಇದೆ ಸಂಧರ್ಭ ಸರ್ಕಾರ ಈ ಬಾರಿಯ ಲೊಕ್ಡೌನ್ ಸಂಧರ್ಭ ಮಾಡಿದ ವ್ಯವಸ್ಥೆಗಳು ಸಂಪೂರ್ಣ ವಿಫಲ ವಾಗಿದ್ದು, ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ ೬ ರಿಂದ -೧೦ರ ತನಕ ಲಾಕ್ ಡೌನ್ ಓಪನ್ ಮಾಡಿದ್ದಾರೆ.

ಜೊತೆಗೆ ವಸ್ತುಗಳನ್ನು ಖರೀದಿಸಲು ವಾಹನಗಳನ್ನು ಉಪಯೋಗಿಸುವಂತಿಲ್ಲ. ಜನರು 3-4 ಕಿಮೀ ನಡೆದುಕೊಂಡು ಬಂದು ವಾಪಾಸ್ ಹೋಗುವಾಗ 12 ಗಂಟೆ ಆಗುತ್ತೆ.ಕೆಲಸಗಾರರಿಗೆ ಸಂಚಾರಕ್ಕೆ ಬೇರೆ ವ್ಯವಸ್ಥೆ ಇಲ್ಲ. ಜೊತೆಗೆ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿದ್ದರಿಂದ ಜನರ ಸಮಸ್ಯೆಗಳು ಇನ್ನಷ್ಟು ಬಿಗಡಾಯಿಸಿವೆ.

ಈ ಬಾರಿ ಸರಕಾರ ಸಾರ್ವಜನಿಕರನ್ನು ಕಳೆದ ಬಾರಿಗಿಂತ ಜಾಸ್ತಿ ನೆಗ್ಲೆಕ್ಟ್ ಮಾಡಿದೆ. ಸರಕಾರ ಬ್ಯಾಂಕ್ಗಳನ್ನೂ ಮದ್ಯಾಹ್ನ 2 ಗಂಟೆಯ ತನಕ ಓಪನ್ ಇಟ್ಟಿದ್ದಾರೆ. ಆದರೆ ಸಾರ್ವಜನಿಕರು ೧೦ ಗಂಟೆ ಮೇಲೆ ರಸ್ತೆ ಯಲ್ಲಿ ತಿರುಗುವಂತಿಲ್ಲ. ಆದರೆ ಇದರಿಂದ ಸಾರ್ವಜನಿಕರಿಗೆ ಉಪಯೋಗಕ್ಕಿಂತ ತೊಂದರೆ ಆಗಿದೆ.

ಸರ್ಕಾರಕ್ಕೆ ತೆರಿಗೆ ಕಟ್ಟುವ ಉದ್ದಿಮೆದಾರರಿಗೂ ಇದರಿಂದ ಯಾವುದೇ ಉಪಯೋಗವಿಲ್ಲ ಎಂದು ಸರ್ಕಾರದ ಧೋರಣೆ ಬಗ್ಗೆ ಖೇದ ವ್ಯಕ್ತ ಪಡಿಸಿದರು.
ಮುಂದೆ ಮಾತನಾಡುತ್ತ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ರೈತರು ತಾವು ಬೆಳೆದ ಬೆಳೆದ ತರಕಾರಿ, ಹಣ್ಣುಗಳನ್ನು ಖರೀದಿಸಲು ಯಾರು ಮುಂದೆ ಬರದೇ ಇರುವುದರಿಂದ ತಮ್ಮ ಬೆಳೆಗಳನ್ನು ಬೀದಿಗೆಸುರಿಯುವುದನ್ನು ನೋಡಿದ್ದೇನೆ. ಇನ್ನು ಮುಂದಕ್ಕೆ ರೈತರು ತಾವು ಬೆಳೆದ ಬೆಳೆದ ತರಕಾರಿ, ಹಣ್ಣುಗಳನ್ನು ನಮ್ಮ ಸಂಸ್ಥೆಯ ಸಿಬ್ಬಂದಿಗಳಿಗೆ, ಅವರ ಸ್ಥಳಗಳಿಗೆ ಫಾರ್ಮ ಗಳಿಗೆ ಬಂದು ನಮ್ಮ ಪನಾಮ ಕಂಪೆನಿ ಖರೀದಿ ಮಾಡಲಿದೆ ಎಂದರು .

ಇನ್ನೂ ಮುಂದೆ ಜನಜೀವನ ಸರಿಯಾಗಲು ಬಹಳ ಸಮಯ ಹಿಡಿಯಲಿದೆ. ಹೀಗಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗಲು ಮುಂಜಾಗ್ರತಾ ಕ್ರಮವಾಗಿ ರೂ 50 ಲಕ್ಷ ವನ್ನು ಇಟ್ಟಿದ್ದೇನೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ: ವಿವೇಕ್ ರಾಜ್ ಪನಾಮ ಸಿಇಓ, ರಜಾಕ್ ಉಪಸ್ಥಿತರಿದ್ದರು.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »