TOP STORIES:

FOLLOW US

ಮಂಗಳೂರಿನಲ್ಲೊಬ್ಬ ಸೋನು ಸೂದ್: ಪನಾಮ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ


ಮಂಗಳೂರು: ದೇಶದಲ್ಲಿ ಕೋವಿಡ್ -೧೯ ರ ಅಲೆ ತಾಂಡವ ವಾಡುವ ಸಂಧರ್ಭದಲ್ಲಿ ಮಂಗಳೂರಿನಲ್ಲೊಬ್ಬ ಯುವ ನಾಯಕ ಮತ್ತು ಉದ್ಯಮಿ ಸಂಕಷ್ಟದಲ್ಲಿರುವ ಸಹಸ್ರಾರು ಮಂದಿಗೆ ತಮ್ಮ ಕೈಲಾಗುವಷ್ಟು ಸಹಾಯ ಹಸ್ತ ನೀಡುತ್ತಾ ಬಡವರ ಪಾಲಿಗೆ ಕಣ್ಮಣಿ ಯಾಗುತ್ತ “ಮಂಗಳೂರಿನಲ್ಲೊಬ್ಬ ಸೋನು ಸೂದ” ಆಗುತ್ತಿದ್ದಾರೆ.ಅವರೇ ಪನಾಮ ನೇಚರ್ ಫ್ರೆಶ್ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ ಯವರು.
ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ವಿವೇಕ್ ರಾಜ್ ಪೂಜಾರಿ ಯವರು ಈ ಬಾರಿ ಇಷ್ಟರತನಕ 16೦೦೦ ಮಂದಿಗೆ ಊಟ, ಸುಮಾರು 4350 ಕುಟುಂಬ ದವರಿಗೆ ಮತ್ತು ದಿನಗೂಲಿ ನೌಕರರಿಗೆ ಕಿಟ್ ಗಳನ್ನೂ ನೀಡಿದ್ದು , ಜೊತೆಗೆ ಹಲವು ಬಡ ಕುಟುಂಬ ಗಳ ಆಸ್ಪತ್ರೆ ಚಿಕಿತ್ಸೆಯ ವೆಚ್ಚ ವನ್ನು ಸಹ ಪನಾಮ ಕಂಪೆನಿ ವತಿಯಿಂದ ಬರಿಸಿದ್ದೇನೆ .ಪ್ರಸಕ್ತ ತಮ್ಮ ಕಡೆಯಿಂದ ನೀಡುವ ಕಿಟ್ ಒಂದು ಕುಟುಂಬಕ್ಕೆ 15 ದಿನಗಳ ಕಾಲ ಉಪಯೋಗಕ್ಕೆ ಬರಲಿದೆ. ಇದು ಹಲವು ಕುಟುಂಬಗಳಿಗೆ ಸಹಾಯವಾಗಲಿದೆ.

ಕಳೆದ ಲೊಕ್ಡೌನ್ ಸಂಧರ್ಭ ಸುಮಾರು ೧೪೦೦೦ ಮಂದಿಗೆ ಬೀದಿ ಬದಿ ಊಟ, ೨೦೦೦ ಮಂದಿಗೆ ಕಿಟ್ ,12 ಮಂದಿಗೆ ಮಾರಲು ತಳ್ಳುಗಾಡಿಯಲ್ಲಿ ಗಾಡಿ ತುಂಬಾ ತರಕಾರಿ , ಮತ್ತು ೫೦ ದೊಡ್ಡ ದೊಡ್ಡ ಕೊಡೆಗಳನ್ನು ಉಚಿತವಾಗಿ ಸಹ ನೀಡಿದ್ದಾರೆ. ಜೊತೆ ತಮ್ಮ ಊರಿಗೆ ಹೋಗಲು ಸಂಕಷ್ಟ ದಲ್ಲಿದ್ದಾಗ ಆರ್ಥಿಕ ಸಹಾಯ ಮಾಡಿದ್ದಾರೆ.

ಇದೆ ಸಂಧರ್ಭ ಸರ್ಕಾರ ಈ ಬಾರಿಯ ಲೊಕ್ಡೌನ್ ಸಂಧರ್ಭ ಮಾಡಿದ ವ್ಯವಸ್ಥೆಗಳು ಸಂಪೂರ್ಣ ವಿಫಲ ವಾಗಿದ್ದು, ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ ೬ ರಿಂದ -೧೦ರ ತನಕ ಲಾಕ್ ಡೌನ್ ಓಪನ್ ಮಾಡಿದ್ದಾರೆ.

ಜೊತೆಗೆ ವಸ್ತುಗಳನ್ನು ಖರೀದಿಸಲು ವಾಹನಗಳನ್ನು ಉಪಯೋಗಿಸುವಂತಿಲ್ಲ. ಜನರು 3-4 ಕಿಮೀ ನಡೆದುಕೊಂಡು ಬಂದು ವಾಪಾಸ್ ಹೋಗುವಾಗ 12 ಗಂಟೆ ಆಗುತ್ತೆ.ಕೆಲಸಗಾರರಿಗೆ ಸಂಚಾರಕ್ಕೆ ಬೇರೆ ವ್ಯವಸ್ಥೆ ಇಲ್ಲ. ಜೊತೆಗೆ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿದ್ದರಿಂದ ಜನರ ಸಮಸ್ಯೆಗಳು ಇನ್ನಷ್ಟು ಬಿಗಡಾಯಿಸಿವೆ.

ಈ ಬಾರಿ ಸರಕಾರ ಸಾರ್ವಜನಿಕರನ್ನು ಕಳೆದ ಬಾರಿಗಿಂತ ಜಾಸ್ತಿ ನೆಗ್ಲೆಕ್ಟ್ ಮಾಡಿದೆ. ಸರಕಾರ ಬ್ಯಾಂಕ್ಗಳನ್ನೂ ಮದ್ಯಾಹ್ನ 2 ಗಂಟೆಯ ತನಕ ಓಪನ್ ಇಟ್ಟಿದ್ದಾರೆ. ಆದರೆ ಸಾರ್ವಜನಿಕರು ೧೦ ಗಂಟೆ ಮೇಲೆ ರಸ್ತೆ ಯಲ್ಲಿ ತಿರುಗುವಂತಿಲ್ಲ. ಆದರೆ ಇದರಿಂದ ಸಾರ್ವಜನಿಕರಿಗೆ ಉಪಯೋಗಕ್ಕಿಂತ ತೊಂದರೆ ಆಗಿದೆ.

ಸರ್ಕಾರಕ್ಕೆ ತೆರಿಗೆ ಕಟ್ಟುವ ಉದ್ದಿಮೆದಾರರಿಗೂ ಇದರಿಂದ ಯಾವುದೇ ಉಪಯೋಗವಿಲ್ಲ ಎಂದು ಸರ್ಕಾರದ ಧೋರಣೆ ಬಗ್ಗೆ ಖೇದ ವ್ಯಕ್ತ ಪಡಿಸಿದರು.
ಮುಂದೆ ಮಾತನಾಡುತ್ತ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ರೈತರು ತಾವು ಬೆಳೆದ ಬೆಳೆದ ತರಕಾರಿ, ಹಣ್ಣುಗಳನ್ನು ಖರೀದಿಸಲು ಯಾರು ಮುಂದೆ ಬರದೇ ಇರುವುದರಿಂದ ತಮ್ಮ ಬೆಳೆಗಳನ್ನು ಬೀದಿಗೆಸುರಿಯುವುದನ್ನು ನೋಡಿದ್ದೇನೆ. ಇನ್ನು ಮುಂದಕ್ಕೆ ರೈತರು ತಾವು ಬೆಳೆದ ಬೆಳೆದ ತರಕಾರಿ, ಹಣ್ಣುಗಳನ್ನು ನಮ್ಮ ಸಂಸ್ಥೆಯ ಸಿಬ್ಬಂದಿಗಳಿಗೆ, ಅವರ ಸ್ಥಳಗಳಿಗೆ ಫಾರ್ಮ ಗಳಿಗೆ ಬಂದು ನಮ್ಮ ಪನಾಮ ಕಂಪೆನಿ ಖರೀದಿ ಮಾಡಲಿದೆ ಎಂದರು .

ಇನ್ನೂ ಮುಂದೆ ಜನಜೀವನ ಸರಿಯಾಗಲು ಬಹಳ ಸಮಯ ಹಿಡಿಯಲಿದೆ. ಹೀಗಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗಲು ಮುಂಜಾಗ್ರತಾ ಕ್ರಮವಾಗಿ ರೂ 50 ಲಕ್ಷ ವನ್ನು ಇಟ್ಟಿದ್ದೇನೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ: ವಿವೇಕ್ ರಾಜ್ ಪನಾಮ ಸಿಇಓ, ರಜಾಕ್ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »