TOP STORIES:

ಮಂಗಳೂರಿನಲ್ಲೊಬ್ಬ ಸೋನು ಸೂದ್: ಪನಾಮ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ


ಮಂಗಳೂರು: ದೇಶದಲ್ಲಿ ಕೋವಿಡ್ -೧೯ ರ ಅಲೆ ತಾಂಡವ ವಾಡುವ ಸಂಧರ್ಭದಲ್ಲಿ ಮಂಗಳೂರಿನಲ್ಲೊಬ್ಬ ಯುವ ನಾಯಕ ಮತ್ತು ಉದ್ಯಮಿ ಸಂಕಷ್ಟದಲ್ಲಿರುವ ಸಹಸ್ರಾರು ಮಂದಿಗೆ ತಮ್ಮ ಕೈಲಾಗುವಷ್ಟು ಸಹಾಯ ಹಸ್ತ ನೀಡುತ್ತಾ ಬಡವರ ಪಾಲಿಗೆ ಕಣ್ಮಣಿ ಯಾಗುತ್ತ “ಮಂಗಳೂರಿನಲ್ಲೊಬ್ಬ ಸೋನು ಸೂದ” ಆಗುತ್ತಿದ್ದಾರೆ.ಅವರೇ ಪನಾಮ ನೇಚರ್ ಫ್ರೆಶ್ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ ಯವರು.
ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ವಿವೇಕ್ ರಾಜ್ ಪೂಜಾರಿ ಯವರು ಈ ಬಾರಿ ಇಷ್ಟರತನಕ 16೦೦೦ ಮಂದಿಗೆ ಊಟ, ಸುಮಾರು 4350 ಕುಟುಂಬ ದವರಿಗೆ ಮತ್ತು ದಿನಗೂಲಿ ನೌಕರರಿಗೆ ಕಿಟ್ ಗಳನ್ನೂ ನೀಡಿದ್ದು , ಜೊತೆಗೆ ಹಲವು ಬಡ ಕುಟುಂಬ ಗಳ ಆಸ್ಪತ್ರೆ ಚಿಕಿತ್ಸೆಯ ವೆಚ್ಚ ವನ್ನು ಸಹ ಪನಾಮ ಕಂಪೆನಿ ವತಿಯಿಂದ ಬರಿಸಿದ್ದೇನೆ .ಪ್ರಸಕ್ತ ತಮ್ಮ ಕಡೆಯಿಂದ ನೀಡುವ ಕಿಟ್ ಒಂದು ಕುಟುಂಬಕ್ಕೆ 15 ದಿನಗಳ ಕಾಲ ಉಪಯೋಗಕ್ಕೆ ಬರಲಿದೆ. ಇದು ಹಲವು ಕುಟುಂಬಗಳಿಗೆ ಸಹಾಯವಾಗಲಿದೆ.

ಕಳೆದ ಲೊಕ್ಡೌನ್ ಸಂಧರ್ಭ ಸುಮಾರು ೧೪೦೦೦ ಮಂದಿಗೆ ಬೀದಿ ಬದಿ ಊಟ, ೨೦೦೦ ಮಂದಿಗೆ ಕಿಟ್ ,12 ಮಂದಿಗೆ ಮಾರಲು ತಳ್ಳುಗಾಡಿಯಲ್ಲಿ ಗಾಡಿ ತುಂಬಾ ತರಕಾರಿ , ಮತ್ತು ೫೦ ದೊಡ್ಡ ದೊಡ್ಡ ಕೊಡೆಗಳನ್ನು ಉಚಿತವಾಗಿ ಸಹ ನೀಡಿದ್ದಾರೆ. ಜೊತೆ ತಮ್ಮ ಊರಿಗೆ ಹೋಗಲು ಸಂಕಷ್ಟ ದಲ್ಲಿದ್ದಾಗ ಆರ್ಥಿಕ ಸಹಾಯ ಮಾಡಿದ್ದಾರೆ.

ಇದೆ ಸಂಧರ್ಭ ಸರ್ಕಾರ ಈ ಬಾರಿಯ ಲೊಕ್ಡೌನ್ ಸಂಧರ್ಭ ಮಾಡಿದ ವ್ಯವಸ್ಥೆಗಳು ಸಂಪೂರ್ಣ ವಿಫಲ ವಾಗಿದ್ದು, ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ ೬ ರಿಂದ -೧೦ರ ತನಕ ಲಾಕ್ ಡೌನ್ ಓಪನ್ ಮಾಡಿದ್ದಾರೆ.

ಜೊತೆಗೆ ವಸ್ತುಗಳನ್ನು ಖರೀದಿಸಲು ವಾಹನಗಳನ್ನು ಉಪಯೋಗಿಸುವಂತಿಲ್ಲ. ಜನರು 3-4 ಕಿಮೀ ನಡೆದುಕೊಂಡು ಬಂದು ವಾಪಾಸ್ ಹೋಗುವಾಗ 12 ಗಂಟೆ ಆಗುತ್ತೆ.ಕೆಲಸಗಾರರಿಗೆ ಸಂಚಾರಕ್ಕೆ ಬೇರೆ ವ್ಯವಸ್ಥೆ ಇಲ್ಲ. ಜೊತೆಗೆ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿದ್ದರಿಂದ ಜನರ ಸಮಸ್ಯೆಗಳು ಇನ್ನಷ್ಟು ಬಿಗಡಾಯಿಸಿವೆ.

ಈ ಬಾರಿ ಸರಕಾರ ಸಾರ್ವಜನಿಕರನ್ನು ಕಳೆದ ಬಾರಿಗಿಂತ ಜಾಸ್ತಿ ನೆಗ್ಲೆಕ್ಟ್ ಮಾಡಿದೆ. ಸರಕಾರ ಬ್ಯಾಂಕ್ಗಳನ್ನೂ ಮದ್ಯಾಹ್ನ 2 ಗಂಟೆಯ ತನಕ ಓಪನ್ ಇಟ್ಟಿದ್ದಾರೆ. ಆದರೆ ಸಾರ್ವಜನಿಕರು ೧೦ ಗಂಟೆ ಮೇಲೆ ರಸ್ತೆ ಯಲ್ಲಿ ತಿರುಗುವಂತಿಲ್ಲ. ಆದರೆ ಇದರಿಂದ ಸಾರ್ವಜನಿಕರಿಗೆ ಉಪಯೋಗಕ್ಕಿಂತ ತೊಂದರೆ ಆಗಿದೆ.

ಸರ್ಕಾರಕ್ಕೆ ತೆರಿಗೆ ಕಟ್ಟುವ ಉದ್ದಿಮೆದಾರರಿಗೂ ಇದರಿಂದ ಯಾವುದೇ ಉಪಯೋಗವಿಲ್ಲ ಎಂದು ಸರ್ಕಾರದ ಧೋರಣೆ ಬಗ್ಗೆ ಖೇದ ವ್ಯಕ್ತ ಪಡಿಸಿದರು.
ಮುಂದೆ ಮಾತನಾಡುತ್ತ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ರೈತರು ತಾವು ಬೆಳೆದ ಬೆಳೆದ ತರಕಾರಿ, ಹಣ್ಣುಗಳನ್ನು ಖರೀದಿಸಲು ಯಾರು ಮುಂದೆ ಬರದೇ ಇರುವುದರಿಂದ ತಮ್ಮ ಬೆಳೆಗಳನ್ನು ಬೀದಿಗೆಸುರಿಯುವುದನ್ನು ನೋಡಿದ್ದೇನೆ. ಇನ್ನು ಮುಂದಕ್ಕೆ ರೈತರು ತಾವು ಬೆಳೆದ ಬೆಳೆದ ತರಕಾರಿ, ಹಣ್ಣುಗಳನ್ನು ನಮ್ಮ ಸಂಸ್ಥೆಯ ಸಿಬ್ಬಂದಿಗಳಿಗೆ, ಅವರ ಸ್ಥಳಗಳಿಗೆ ಫಾರ್ಮ ಗಳಿಗೆ ಬಂದು ನಮ್ಮ ಪನಾಮ ಕಂಪೆನಿ ಖರೀದಿ ಮಾಡಲಿದೆ ಎಂದರು .

ಇನ್ನೂ ಮುಂದೆ ಜನಜೀವನ ಸರಿಯಾಗಲು ಬಹಳ ಸಮಯ ಹಿಡಿಯಲಿದೆ. ಹೀಗಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗಲು ಮುಂಜಾಗ್ರತಾ ಕ್ರಮವಾಗಿ ರೂ 50 ಲಕ್ಷ ವನ್ನು ಇಟ್ಟಿದ್ದೇನೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ: ವಿವೇಕ್ ರಾಜ್ ಪನಾಮ ಸಿಇಓ, ರಜಾಕ್ ಉಪಸ್ಥಿತರಿದ್ದರು.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »