TOP STORIES:

FOLLOW US

ಮಂಗಳೂರಿನಲ್ಲೊಬ್ಬ ಸೋನು ಸೂದ್: ಪನಾಮ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ


ಮಂಗಳೂರು: ದೇಶದಲ್ಲಿ ಕೋವಿಡ್ -೧೯ ರ ಅಲೆ ತಾಂಡವ ವಾಡುವ ಸಂಧರ್ಭದಲ್ಲಿ ಮಂಗಳೂರಿನಲ್ಲೊಬ್ಬ ಯುವ ನಾಯಕ ಮತ್ತು ಉದ್ಯಮಿ ಸಂಕಷ್ಟದಲ್ಲಿರುವ ಸಹಸ್ರಾರು ಮಂದಿಗೆ ತಮ್ಮ ಕೈಲಾಗುವಷ್ಟು ಸಹಾಯ ಹಸ್ತ ನೀಡುತ್ತಾ ಬಡವರ ಪಾಲಿಗೆ ಕಣ್ಮಣಿ ಯಾಗುತ್ತ “ಮಂಗಳೂರಿನಲ್ಲೊಬ್ಬ ಸೋನು ಸೂದ” ಆಗುತ್ತಿದ್ದಾರೆ.ಅವರೇ ಪನಾಮ ನೇಚರ್ ಫ್ರೆಶ್ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ ಯವರು.
ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ವಿವೇಕ್ ರಾಜ್ ಪೂಜಾರಿ ಯವರು ಈ ಬಾರಿ ಇಷ್ಟರತನಕ 16೦೦೦ ಮಂದಿಗೆ ಊಟ, ಸುಮಾರು 4350 ಕುಟುಂಬ ದವರಿಗೆ ಮತ್ತು ದಿನಗೂಲಿ ನೌಕರರಿಗೆ ಕಿಟ್ ಗಳನ್ನೂ ನೀಡಿದ್ದು , ಜೊತೆಗೆ ಹಲವು ಬಡ ಕುಟುಂಬ ಗಳ ಆಸ್ಪತ್ರೆ ಚಿಕಿತ್ಸೆಯ ವೆಚ್ಚ ವನ್ನು ಸಹ ಪನಾಮ ಕಂಪೆನಿ ವತಿಯಿಂದ ಬರಿಸಿದ್ದೇನೆ .ಪ್ರಸಕ್ತ ತಮ್ಮ ಕಡೆಯಿಂದ ನೀಡುವ ಕಿಟ್ ಒಂದು ಕುಟುಂಬಕ್ಕೆ 15 ದಿನಗಳ ಕಾಲ ಉಪಯೋಗಕ್ಕೆ ಬರಲಿದೆ. ಇದು ಹಲವು ಕುಟುಂಬಗಳಿಗೆ ಸಹಾಯವಾಗಲಿದೆ.

ಕಳೆದ ಲೊಕ್ಡೌನ್ ಸಂಧರ್ಭ ಸುಮಾರು ೧೪೦೦೦ ಮಂದಿಗೆ ಬೀದಿ ಬದಿ ಊಟ, ೨೦೦೦ ಮಂದಿಗೆ ಕಿಟ್ ,12 ಮಂದಿಗೆ ಮಾರಲು ತಳ್ಳುಗಾಡಿಯಲ್ಲಿ ಗಾಡಿ ತುಂಬಾ ತರಕಾರಿ , ಮತ್ತು ೫೦ ದೊಡ್ಡ ದೊಡ್ಡ ಕೊಡೆಗಳನ್ನು ಉಚಿತವಾಗಿ ಸಹ ನೀಡಿದ್ದಾರೆ. ಜೊತೆ ತಮ್ಮ ಊರಿಗೆ ಹೋಗಲು ಸಂಕಷ್ಟ ದಲ್ಲಿದ್ದಾಗ ಆರ್ಥಿಕ ಸಹಾಯ ಮಾಡಿದ್ದಾರೆ.

ಇದೆ ಸಂಧರ್ಭ ಸರ್ಕಾರ ಈ ಬಾರಿಯ ಲೊಕ್ಡೌನ್ ಸಂಧರ್ಭ ಮಾಡಿದ ವ್ಯವಸ್ಥೆಗಳು ಸಂಪೂರ್ಣ ವಿಫಲ ವಾಗಿದ್ದು, ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ ೬ ರಿಂದ -೧೦ರ ತನಕ ಲಾಕ್ ಡೌನ್ ಓಪನ್ ಮಾಡಿದ್ದಾರೆ.

ಜೊತೆಗೆ ವಸ್ತುಗಳನ್ನು ಖರೀದಿಸಲು ವಾಹನಗಳನ್ನು ಉಪಯೋಗಿಸುವಂತಿಲ್ಲ. ಜನರು 3-4 ಕಿಮೀ ನಡೆದುಕೊಂಡು ಬಂದು ವಾಪಾಸ್ ಹೋಗುವಾಗ 12 ಗಂಟೆ ಆಗುತ್ತೆ.ಕೆಲಸಗಾರರಿಗೆ ಸಂಚಾರಕ್ಕೆ ಬೇರೆ ವ್ಯವಸ್ಥೆ ಇಲ್ಲ. ಜೊತೆಗೆ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿದ್ದರಿಂದ ಜನರ ಸಮಸ್ಯೆಗಳು ಇನ್ನಷ್ಟು ಬಿಗಡಾಯಿಸಿವೆ.

ಈ ಬಾರಿ ಸರಕಾರ ಸಾರ್ವಜನಿಕರನ್ನು ಕಳೆದ ಬಾರಿಗಿಂತ ಜಾಸ್ತಿ ನೆಗ್ಲೆಕ್ಟ್ ಮಾಡಿದೆ. ಸರಕಾರ ಬ್ಯಾಂಕ್ಗಳನ್ನೂ ಮದ್ಯಾಹ್ನ 2 ಗಂಟೆಯ ತನಕ ಓಪನ್ ಇಟ್ಟಿದ್ದಾರೆ. ಆದರೆ ಸಾರ್ವಜನಿಕರು ೧೦ ಗಂಟೆ ಮೇಲೆ ರಸ್ತೆ ಯಲ್ಲಿ ತಿರುಗುವಂತಿಲ್ಲ. ಆದರೆ ಇದರಿಂದ ಸಾರ್ವಜನಿಕರಿಗೆ ಉಪಯೋಗಕ್ಕಿಂತ ತೊಂದರೆ ಆಗಿದೆ.

ಸರ್ಕಾರಕ್ಕೆ ತೆರಿಗೆ ಕಟ್ಟುವ ಉದ್ದಿಮೆದಾರರಿಗೂ ಇದರಿಂದ ಯಾವುದೇ ಉಪಯೋಗವಿಲ್ಲ ಎಂದು ಸರ್ಕಾರದ ಧೋರಣೆ ಬಗ್ಗೆ ಖೇದ ವ್ಯಕ್ತ ಪಡಿಸಿದರು.
ಮುಂದೆ ಮಾತನಾಡುತ್ತ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ರೈತರು ತಾವು ಬೆಳೆದ ಬೆಳೆದ ತರಕಾರಿ, ಹಣ್ಣುಗಳನ್ನು ಖರೀದಿಸಲು ಯಾರು ಮುಂದೆ ಬರದೇ ಇರುವುದರಿಂದ ತಮ್ಮ ಬೆಳೆಗಳನ್ನು ಬೀದಿಗೆಸುರಿಯುವುದನ್ನು ನೋಡಿದ್ದೇನೆ. ಇನ್ನು ಮುಂದಕ್ಕೆ ರೈತರು ತಾವು ಬೆಳೆದ ಬೆಳೆದ ತರಕಾರಿ, ಹಣ್ಣುಗಳನ್ನು ನಮ್ಮ ಸಂಸ್ಥೆಯ ಸಿಬ್ಬಂದಿಗಳಿಗೆ, ಅವರ ಸ್ಥಳಗಳಿಗೆ ಫಾರ್ಮ ಗಳಿಗೆ ಬಂದು ನಮ್ಮ ಪನಾಮ ಕಂಪೆನಿ ಖರೀದಿ ಮಾಡಲಿದೆ ಎಂದರು .

ಇನ್ನೂ ಮುಂದೆ ಜನಜೀವನ ಸರಿಯಾಗಲು ಬಹಳ ಸಮಯ ಹಿಡಿಯಲಿದೆ. ಹೀಗಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗಲು ಮುಂಜಾಗ್ರತಾ ಕ್ರಮವಾಗಿ ರೂ 50 ಲಕ್ಷ ವನ್ನು ಇಟ್ಟಿದ್ದೇನೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ: ವಿವೇಕ್ ರಾಜ್ ಪನಾಮ ಸಿಇಓ, ರಜಾಕ್ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »