TOP STORIES:

ಮಂಗಳೂರಿನಲ್ಲೊಬ್ಬ ಸೋನು ಸೂದ್: ಪನಾಮ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ


ಮಂಗಳೂರು: ದೇಶದಲ್ಲಿ ಕೋವಿಡ್ -೧೯ ರ ಅಲೆ ತಾಂಡವ ವಾಡುವ ಸಂಧರ್ಭದಲ್ಲಿ ಮಂಗಳೂರಿನಲ್ಲೊಬ್ಬ ಯುವ ನಾಯಕ ಮತ್ತು ಉದ್ಯಮಿ ಸಂಕಷ್ಟದಲ್ಲಿರುವ ಸಹಸ್ರಾರು ಮಂದಿಗೆ ತಮ್ಮ ಕೈಲಾಗುವಷ್ಟು ಸಹಾಯ ಹಸ್ತ ನೀಡುತ್ತಾ ಬಡವರ ಪಾಲಿಗೆ ಕಣ್ಮಣಿ ಯಾಗುತ್ತ “ಮಂಗಳೂರಿನಲ್ಲೊಬ್ಬ ಸೋನು ಸೂದ” ಆಗುತ್ತಿದ್ದಾರೆ.ಅವರೇ ಪನಾಮ ನೇಚರ್ ಫ್ರೆಶ್ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ ಯವರು.
ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ವಿವೇಕ್ ರಾಜ್ ಪೂಜಾರಿ ಯವರು ಈ ಬಾರಿ ಇಷ್ಟರತನಕ 16೦೦೦ ಮಂದಿಗೆ ಊಟ, ಸುಮಾರು 4350 ಕುಟುಂಬ ದವರಿಗೆ ಮತ್ತು ದಿನಗೂಲಿ ನೌಕರರಿಗೆ ಕಿಟ್ ಗಳನ್ನೂ ನೀಡಿದ್ದು , ಜೊತೆಗೆ ಹಲವು ಬಡ ಕುಟುಂಬ ಗಳ ಆಸ್ಪತ್ರೆ ಚಿಕಿತ್ಸೆಯ ವೆಚ್ಚ ವನ್ನು ಸಹ ಪನಾಮ ಕಂಪೆನಿ ವತಿಯಿಂದ ಬರಿಸಿದ್ದೇನೆ .ಪ್ರಸಕ್ತ ತಮ್ಮ ಕಡೆಯಿಂದ ನೀಡುವ ಕಿಟ್ ಒಂದು ಕುಟುಂಬಕ್ಕೆ 15 ದಿನಗಳ ಕಾಲ ಉಪಯೋಗಕ್ಕೆ ಬರಲಿದೆ. ಇದು ಹಲವು ಕುಟುಂಬಗಳಿಗೆ ಸಹಾಯವಾಗಲಿದೆ.

ಕಳೆದ ಲೊಕ್ಡೌನ್ ಸಂಧರ್ಭ ಸುಮಾರು ೧೪೦೦೦ ಮಂದಿಗೆ ಬೀದಿ ಬದಿ ಊಟ, ೨೦೦೦ ಮಂದಿಗೆ ಕಿಟ್ ,12 ಮಂದಿಗೆ ಮಾರಲು ತಳ್ಳುಗಾಡಿಯಲ್ಲಿ ಗಾಡಿ ತುಂಬಾ ತರಕಾರಿ , ಮತ್ತು ೫೦ ದೊಡ್ಡ ದೊಡ್ಡ ಕೊಡೆಗಳನ್ನು ಉಚಿತವಾಗಿ ಸಹ ನೀಡಿದ್ದಾರೆ. ಜೊತೆ ತಮ್ಮ ಊರಿಗೆ ಹೋಗಲು ಸಂಕಷ್ಟ ದಲ್ಲಿದ್ದಾಗ ಆರ್ಥಿಕ ಸಹಾಯ ಮಾಡಿದ್ದಾರೆ.

ಇದೆ ಸಂಧರ್ಭ ಸರ್ಕಾರ ಈ ಬಾರಿಯ ಲೊಕ್ಡೌನ್ ಸಂಧರ್ಭ ಮಾಡಿದ ವ್ಯವಸ್ಥೆಗಳು ಸಂಪೂರ್ಣ ವಿಫಲ ವಾಗಿದ್ದು, ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ ೬ ರಿಂದ -೧೦ರ ತನಕ ಲಾಕ್ ಡೌನ್ ಓಪನ್ ಮಾಡಿದ್ದಾರೆ.

ಜೊತೆಗೆ ವಸ್ತುಗಳನ್ನು ಖರೀದಿಸಲು ವಾಹನಗಳನ್ನು ಉಪಯೋಗಿಸುವಂತಿಲ್ಲ. ಜನರು 3-4 ಕಿಮೀ ನಡೆದುಕೊಂಡು ಬಂದು ವಾಪಾಸ್ ಹೋಗುವಾಗ 12 ಗಂಟೆ ಆಗುತ್ತೆ.ಕೆಲಸಗಾರರಿಗೆ ಸಂಚಾರಕ್ಕೆ ಬೇರೆ ವ್ಯವಸ್ಥೆ ಇಲ್ಲ. ಜೊತೆಗೆ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿದ್ದರಿಂದ ಜನರ ಸಮಸ್ಯೆಗಳು ಇನ್ನಷ್ಟು ಬಿಗಡಾಯಿಸಿವೆ.

ಈ ಬಾರಿ ಸರಕಾರ ಸಾರ್ವಜನಿಕರನ್ನು ಕಳೆದ ಬಾರಿಗಿಂತ ಜಾಸ್ತಿ ನೆಗ್ಲೆಕ್ಟ್ ಮಾಡಿದೆ. ಸರಕಾರ ಬ್ಯಾಂಕ್ಗಳನ್ನೂ ಮದ್ಯಾಹ್ನ 2 ಗಂಟೆಯ ತನಕ ಓಪನ್ ಇಟ್ಟಿದ್ದಾರೆ. ಆದರೆ ಸಾರ್ವಜನಿಕರು ೧೦ ಗಂಟೆ ಮೇಲೆ ರಸ್ತೆ ಯಲ್ಲಿ ತಿರುಗುವಂತಿಲ್ಲ. ಆದರೆ ಇದರಿಂದ ಸಾರ್ವಜನಿಕರಿಗೆ ಉಪಯೋಗಕ್ಕಿಂತ ತೊಂದರೆ ಆಗಿದೆ.

ಸರ್ಕಾರಕ್ಕೆ ತೆರಿಗೆ ಕಟ್ಟುವ ಉದ್ದಿಮೆದಾರರಿಗೂ ಇದರಿಂದ ಯಾವುದೇ ಉಪಯೋಗವಿಲ್ಲ ಎಂದು ಸರ್ಕಾರದ ಧೋರಣೆ ಬಗ್ಗೆ ಖೇದ ವ್ಯಕ್ತ ಪಡಿಸಿದರು.
ಮುಂದೆ ಮಾತನಾಡುತ್ತ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ರೈತರು ತಾವು ಬೆಳೆದ ಬೆಳೆದ ತರಕಾರಿ, ಹಣ್ಣುಗಳನ್ನು ಖರೀದಿಸಲು ಯಾರು ಮುಂದೆ ಬರದೇ ಇರುವುದರಿಂದ ತಮ್ಮ ಬೆಳೆಗಳನ್ನು ಬೀದಿಗೆಸುರಿಯುವುದನ್ನು ನೋಡಿದ್ದೇನೆ. ಇನ್ನು ಮುಂದಕ್ಕೆ ರೈತರು ತಾವು ಬೆಳೆದ ಬೆಳೆದ ತರಕಾರಿ, ಹಣ್ಣುಗಳನ್ನು ನಮ್ಮ ಸಂಸ್ಥೆಯ ಸಿಬ್ಬಂದಿಗಳಿಗೆ, ಅವರ ಸ್ಥಳಗಳಿಗೆ ಫಾರ್ಮ ಗಳಿಗೆ ಬಂದು ನಮ್ಮ ಪನಾಮ ಕಂಪೆನಿ ಖರೀದಿ ಮಾಡಲಿದೆ ಎಂದರು .

ಇನ್ನೂ ಮುಂದೆ ಜನಜೀವನ ಸರಿಯಾಗಲು ಬಹಳ ಸಮಯ ಹಿಡಿಯಲಿದೆ. ಹೀಗಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗಲು ಮುಂಜಾಗ್ರತಾ ಕ್ರಮವಾಗಿ ರೂ 50 ಲಕ್ಷ ವನ್ನು ಇಟ್ಟಿದ್ದೇನೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ: ವಿವೇಕ್ ರಾಜ್ ಪನಾಮ ಸಿಇಓ, ರಜಾಕ್ ಉಪಸ್ಥಿತರಿದ್ದರು.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »