TOP STORIES:

ಮಂಗಳೂರಿನಲ್ಲೊಬ್ಬ ಸೋನು ಸೂದ್: ಪನಾಮ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ


ಮಂಗಳೂರು: ದೇಶದಲ್ಲಿ ಕೋವಿಡ್ -೧೯ ರ ಅಲೆ ತಾಂಡವ ವಾಡುವ ಸಂಧರ್ಭದಲ್ಲಿ ಮಂಗಳೂರಿನಲ್ಲೊಬ್ಬ ಯುವ ನಾಯಕ ಮತ್ತು ಉದ್ಯಮಿ ಸಂಕಷ್ಟದಲ್ಲಿರುವ ಸಹಸ್ರಾರು ಮಂದಿಗೆ ತಮ್ಮ ಕೈಲಾಗುವಷ್ಟು ಸಹಾಯ ಹಸ್ತ ನೀಡುತ್ತಾ ಬಡವರ ಪಾಲಿಗೆ ಕಣ್ಮಣಿ ಯಾಗುತ್ತ “ಮಂಗಳೂರಿನಲ್ಲೊಬ್ಬ ಸೋನು ಸೂದ” ಆಗುತ್ತಿದ್ದಾರೆ.ಅವರೇ ಪನಾಮ ನೇಚರ್ ಫ್ರೆಶ್ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ ಯವರು.
ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ವಿವೇಕ್ ರಾಜ್ ಪೂಜಾರಿ ಯವರು ಈ ಬಾರಿ ಇಷ್ಟರತನಕ 16೦೦೦ ಮಂದಿಗೆ ಊಟ, ಸುಮಾರು 4350 ಕುಟುಂಬ ದವರಿಗೆ ಮತ್ತು ದಿನಗೂಲಿ ನೌಕರರಿಗೆ ಕಿಟ್ ಗಳನ್ನೂ ನೀಡಿದ್ದು , ಜೊತೆಗೆ ಹಲವು ಬಡ ಕುಟುಂಬ ಗಳ ಆಸ್ಪತ್ರೆ ಚಿಕಿತ್ಸೆಯ ವೆಚ್ಚ ವನ್ನು ಸಹ ಪನಾಮ ಕಂಪೆನಿ ವತಿಯಿಂದ ಬರಿಸಿದ್ದೇನೆ .ಪ್ರಸಕ್ತ ತಮ್ಮ ಕಡೆಯಿಂದ ನೀಡುವ ಕಿಟ್ ಒಂದು ಕುಟುಂಬಕ್ಕೆ 15 ದಿನಗಳ ಕಾಲ ಉಪಯೋಗಕ್ಕೆ ಬರಲಿದೆ. ಇದು ಹಲವು ಕುಟುಂಬಗಳಿಗೆ ಸಹಾಯವಾಗಲಿದೆ.

ಕಳೆದ ಲೊಕ್ಡೌನ್ ಸಂಧರ್ಭ ಸುಮಾರು ೧೪೦೦೦ ಮಂದಿಗೆ ಬೀದಿ ಬದಿ ಊಟ, ೨೦೦೦ ಮಂದಿಗೆ ಕಿಟ್ ,12 ಮಂದಿಗೆ ಮಾರಲು ತಳ್ಳುಗಾಡಿಯಲ್ಲಿ ಗಾಡಿ ತುಂಬಾ ತರಕಾರಿ , ಮತ್ತು ೫೦ ದೊಡ್ಡ ದೊಡ್ಡ ಕೊಡೆಗಳನ್ನು ಉಚಿತವಾಗಿ ಸಹ ನೀಡಿದ್ದಾರೆ. ಜೊತೆ ತಮ್ಮ ಊರಿಗೆ ಹೋಗಲು ಸಂಕಷ್ಟ ದಲ್ಲಿದ್ದಾಗ ಆರ್ಥಿಕ ಸಹಾಯ ಮಾಡಿದ್ದಾರೆ.

ಇದೆ ಸಂಧರ್ಭ ಸರ್ಕಾರ ಈ ಬಾರಿಯ ಲೊಕ್ಡೌನ್ ಸಂಧರ್ಭ ಮಾಡಿದ ವ್ಯವಸ್ಥೆಗಳು ಸಂಪೂರ್ಣ ವಿಫಲ ವಾಗಿದ್ದು, ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ ೬ ರಿಂದ -೧೦ರ ತನಕ ಲಾಕ್ ಡೌನ್ ಓಪನ್ ಮಾಡಿದ್ದಾರೆ.

ಜೊತೆಗೆ ವಸ್ತುಗಳನ್ನು ಖರೀದಿಸಲು ವಾಹನಗಳನ್ನು ಉಪಯೋಗಿಸುವಂತಿಲ್ಲ. ಜನರು 3-4 ಕಿಮೀ ನಡೆದುಕೊಂಡು ಬಂದು ವಾಪಾಸ್ ಹೋಗುವಾಗ 12 ಗಂಟೆ ಆಗುತ್ತೆ.ಕೆಲಸಗಾರರಿಗೆ ಸಂಚಾರಕ್ಕೆ ಬೇರೆ ವ್ಯವಸ್ಥೆ ಇಲ್ಲ. ಜೊತೆಗೆ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿದ್ದರಿಂದ ಜನರ ಸಮಸ್ಯೆಗಳು ಇನ್ನಷ್ಟು ಬಿಗಡಾಯಿಸಿವೆ.

ಈ ಬಾರಿ ಸರಕಾರ ಸಾರ್ವಜನಿಕರನ್ನು ಕಳೆದ ಬಾರಿಗಿಂತ ಜಾಸ್ತಿ ನೆಗ್ಲೆಕ್ಟ್ ಮಾಡಿದೆ. ಸರಕಾರ ಬ್ಯಾಂಕ್ಗಳನ್ನೂ ಮದ್ಯಾಹ್ನ 2 ಗಂಟೆಯ ತನಕ ಓಪನ್ ಇಟ್ಟಿದ್ದಾರೆ. ಆದರೆ ಸಾರ್ವಜನಿಕರು ೧೦ ಗಂಟೆ ಮೇಲೆ ರಸ್ತೆ ಯಲ್ಲಿ ತಿರುಗುವಂತಿಲ್ಲ. ಆದರೆ ಇದರಿಂದ ಸಾರ್ವಜನಿಕರಿಗೆ ಉಪಯೋಗಕ್ಕಿಂತ ತೊಂದರೆ ಆಗಿದೆ.

ಸರ್ಕಾರಕ್ಕೆ ತೆರಿಗೆ ಕಟ್ಟುವ ಉದ್ದಿಮೆದಾರರಿಗೂ ಇದರಿಂದ ಯಾವುದೇ ಉಪಯೋಗವಿಲ್ಲ ಎಂದು ಸರ್ಕಾರದ ಧೋರಣೆ ಬಗ್ಗೆ ಖೇದ ವ್ಯಕ್ತ ಪಡಿಸಿದರು.
ಮುಂದೆ ಮಾತನಾಡುತ್ತ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ರೈತರು ತಾವು ಬೆಳೆದ ಬೆಳೆದ ತರಕಾರಿ, ಹಣ್ಣುಗಳನ್ನು ಖರೀದಿಸಲು ಯಾರು ಮುಂದೆ ಬರದೇ ಇರುವುದರಿಂದ ತಮ್ಮ ಬೆಳೆಗಳನ್ನು ಬೀದಿಗೆಸುರಿಯುವುದನ್ನು ನೋಡಿದ್ದೇನೆ. ಇನ್ನು ಮುಂದಕ್ಕೆ ರೈತರು ತಾವು ಬೆಳೆದ ಬೆಳೆದ ತರಕಾರಿ, ಹಣ್ಣುಗಳನ್ನು ನಮ್ಮ ಸಂಸ್ಥೆಯ ಸಿಬ್ಬಂದಿಗಳಿಗೆ, ಅವರ ಸ್ಥಳಗಳಿಗೆ ಫಾರ್ಮ ಗಳಿಗೆ ಬಂದು ನಮ್ಮ ಪನಾಮ ಕಂಪೆನಿ ಖರೀದಿ ಮಾಡಲಿದೆ ಎಂದರು .

ಇನ್ನೂ ಮುಂದೆ ಜನಜೀವನ ಸರಿಯಾಗಲು ಬಹಳ ಸಮಯ ಹಿಡಿಯಲಿದೆ. ಹೀಗಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗಲು ಮುಂಜಾಗ್ರತಾ ಕ್ರಮವಾಗಿ ರೂ 50 ಲಕ್ಷ ವನ್ನು ಇಟ್ಟಿದ್ದೇನೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ: ವಿವೇಕ್ ರಾಜ್ ಪನಾಮ ಸಿಇಓ, ರಜಾಕ್ ಉಪಸ್ಥಿತರಿದ್ದರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »