TOP STORIES:

ಮಂಗಳೂರಿನ ಅದ್ಭುತ ಕಲೆಗಾರ ಬಿ.ಎಸ್.ಎನ್.ಎಲ್ ಕಛೇರಿ ಕಾವಲುಗಾರ – ದಯಾನಂದ ಪಿ. ಅಂಚನ್


ಪ್ರತಿಭೆಗೆ ವಯಸ್ಸಿನ ಮೀತಿಯಾಗಲಿ ಮಾಡುವ ಕೆಲಸವಾಗಲಿ ಅಡ್ಡಿಯಾಗುವುದಿಲ್ಲ. ಆಸಕ್ತಿ ಇದ್ದರೆ ಸಾಕು ಸಮಯ ವ್ಯರ್ಥ ಮಾಡದೆಸಿಕ್ಕ ಬಿಡುವಿನ ಸಮಯದಲ್ಲಿ ಪ್ರತಿಭೆಯ ಅನಾವರಣ ಮಾಡಬಹುದು ಎಂಬುದಕ್ಕೆ ಉತ್ತಮ ಉದಾಹರಣೆ ನಮ್ಮ ನಡುವೆಮಂಗಳೂರಿನ ಬಿ.ಎಸ್.ಎನ್. ಎಲ್ ಕಛೇರಿಯಲ್ಲಿ ಕಾವಲುಗಾರರಾಗಿ ಬಿಡುವಿನ ವೇಳೆಯಲ್ಲಿ ಅಲ್ಲೇ ಮೂಲೆಯಲ್ಲಿ ಖುರ್ಚಿಯಲ್ಲಿಕುಳಿತು ಬಿಳಿ ಹಾಳೆಯಲ್ಲಿ ಚಿತ್ರ ಬಿಡಿಸುತ್ತ, ಗೋಡೆಯಲ್ಲಿ ತಮ್ಮ ಮೊಬೈಲ್ ಮೂಲಕ ಶೇಡೋ ಪ್ಲೇ ಮಾಡುವ ವಿಶಿಷ್ಟ ಕಲಾವಿದಹಾಗೇ ಎಲ್ಲಾರಲ್ಲೂ ಪ್ರೀತಿಯಿಂದ ಮಾತನಾಡುವ ಅಪರೂಪದ ವ್ಯಕ್ತಿ ದಯಾನಂದ ಪಿ. ಅಂಚನ್. ಚಿಕ್ಕದಿರುವಾಗ ತಮ್ಮ ಮನೆಯ ಸಮೀಪದಲ್ಲಿದ್ದ ಗೋವಿಂದ ಪೈ ಅನ್ನುವವರು ಶೇಡೋ ಪ್ಲೇ ಮೂಲಕ ಗೋಡೆಯಲ್ಲಿ ಕೈಚಲನೆ ಬಳಸಿಬೆಳಕಿನ ನೆರಳಿನಲ್ಲಿ ಮೂಡಿಸುತ್ತಿದ್ದ ಹಕ್ಕಿಗಳು,ಪ್ರಾಣಿಗಳ, ಮನುಷ್ಯನನ್ನು ನೋಡುತ್ತಾ ನೋಡುತ್ತಾ ತಾವು ನಿಧಾನವಾಗಿಆಸಕ್ತಿಯಿಂದ ಸತತ ಪ್ರಯತ್ನ ಪಟ್ಟು ಶೇಡೋ ಪ್ಲೇ ಮೂಲಕ ಗಿಳಿ, ಬಾತುಕೋಳಿ, ಕೊಕ್ಕರೆ, ಮನುಷ್ಯ,ಸಿಂಹ ಹೀಗೆ ಕಲಿತರು ಹಾಗೂಮನಸ್ಸಿದ್ದರೆ ಹೇಗೆದರೂ ಕಲಿಯಬಹುದು ತಾವು ಮೊದಲು ಕೆಲಸ ಮಾಡುತ್ತಿದ್ದ ರೈಸ್ ಮಿಲ್ ನಲ್ಲಿ ಬರುತ್ತಿದ್ದ ಧೂಳಿನಲ್ಲೇ ಚಿತ್ರಬಿಡಿಸುತ್ತಾ ನಂತರ ಕಾಗದದ ಮೇಲೆ ಚಿತ್ರಗಳನ್ನು ಬಿಡಿಸಲು ಪ್ರಾರಂಭಿಸಿದರು. ಅನೇಕ ವ್ಯಕ್ತಿಗಳ ಮುಖದ ಚಿತ್ರಗಳನ್ನು ಬಿಡಿಸಿದ್ದಾರೆ.

ಮಾಡುವ ಕಾಯಕದೊಂದಿಗೆ ಹವ್ಯಾಸವನ್ನು ಬಿಡದೆ ಅನೇಕ ವರ್ಷಗಳಿಂದ ಮುಂದುವರಿಸಿಕೊಂಡು ಹೋಗುತ್ತಿರುವ ದಯಾನಂದಪಿ.ಅಂಚನ್.ವೃತ್ತಿಯಲ್ಲಿ ತಾವು ಮಂಗಳೂರಿನಲ್ಲಿರುವ ಬಿ.ಎಸ್.ಎನ್.ಎಲ್ ಕಛೇರಿಯಲ್ಲಿ ಬೆಳಗ್ಗೆ ಕಾವಲುಗಾರರು ಆದರೆಹವ್ಯಾಸವಾಗಿ ಅಧ್ಬುತವಾಗಿ ಚಿತ್ರಗಳನ್ನು ಬಿಡಿಸುವ ಕಲಾ ಆರಾಧಕರು.ಯಾರು ಆಶ್ಚರ್ಯವೆಂದರೆ ಚಿತ್ರಕಲೆ,ಶೇಡೋ ಪ್ಲೇಯಾರಲ್ಲೂ ಕಲಿಯದೆ ತಾವೇ ಸ್ವತಃ ಆಸಕ್ತಿಯಿಂದ ಅನೇಕ ವರ್ಷಗಳ ಪರಿಶ್ರಮದಿಂದ ಕಲಿತುಕೊಂಡು ತಮ್ಮ ಹವ್ಯಾಸವನ್ನುಉದ್ಯೋಗದ ಜೊತೆಗೆ ಬೆಳೆಸುತ್ತಾ ಅಧ್ಬುತವಾಗಿ ವಿವಿಧ ವ್ಯಕ್ತಿಗಳ,ಹಲವು ಸಾಧಕರ ಮುಖಗಳ ಚಿತ್ರಗಳನ್ನು ಬಿಡಿಸುತ್ತಾ, ಮೊಬೈಲ್ಬೆಳಕಿನಲ್ಲೇ ಗೋಡೆಗಳ ಮೇಲೆ ಹಕ್ಕಿ,ಹುಲಿ, ಮನುಷ್ಯ ಮಾತಾನಾಡುವುದು ರೀತಿ ಶೇಡೋ ಪ್ಲೇ ಮಾಡಿ ತೋರಿಸುವ ಸರಳ ವ್ಯಕ್ತಿದಯಾನಂದ ಪಿ. ಅಂಚನ್

ಯಾರೇ ಅವರನ್ನು ಮಾತನಾಡಿಸಿ ಅವರ ಕಲೆಯ ಬಗ್ಗೆ ಕೇಳಿದಾಗ ಪ್ರೀತಿಯಿಂದ ಬಿಡಿಸಿದ ಚಿತ್ರಗಳನ್ನು ,ಶೇಡೋ ಪ್ಲೇ ತೋರಿಸಿಅಚ್ಚರಿ ಪಡಿಸುತ್ತಾರೆ. ಸಾಧಿಸಲು ಛಲ ಹಾಗೂ ಶ್ರದ್ಧೆ ಇದ್ದರೆ ಸಾಕು. ಸ್ವಂತ ತಾವೇ ಆಸಕ್ತಿಯಿಂದ ಕಲಿತು ಇಂದಿಗೂ ಉಳಿಸಿಕೊಂಡುಬಂದಿರುವ ಅವರ ಕಲೆಯ ಮೇಲಿನ ಪ್ರೀತಿ ನಿಜಕ್ಕೂ ಪ್ರೇರಣೆ ನೀಡುವಂತದ್ದು ಹಾಗೂ ಇಂತಹ ಎಲೆಮರೆಯ ಕಾಯಿಯಂತಿರುವಅನೇಕರನ್ನು ಗುರುತಿಸಿ ಅವರಿಗೆ ಇನ್ನಷ್ಟು ಪ್ರೋತ್ಸಾಹಿಸೋಣ. ಯಾವಾಗಲಾದರೂ ಬಿ.ಎಸ್.ಎನ್.ಎಲ್ ಮಂಗಳೂರಿನ ಕಛೇರಿಗೆಹೋದಾಗ ಅಲ್ಲೇ ಹೊರಗೆ ಕುಳಿತು ಸಮಯ ಸಿಕ್ಕಾಗ ಎಳೆಎಳೆಯಾಗಿ ಚಿತ್ರವನ್ನು ಬಿಡಿಸುತ್ತಾ ಅದರಲ್ಲೇ ಖುಷಿ ಪಡುವ ದಯಾನಂದಪಿ. ಅಂಚನ್ ಅವರನ್ನು ಮಾತನಾಡಿಸಲು ಮರೆಯದಿರಿ.


Related Posts

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು ಡಾ.ಮುಕೇಶ್ ಕುಮಾರ್


Share        ಮುಂಬಯಿ ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು.


Read More »

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »