TOP STORIES:

ಮಂಗಳೂರಿನ ಅದ್ಭುತ ಕಲೆಗಾರ ಬಿ.ಎಸ್.ಎನ್.ಎಲ್ ಕಛೇರಿ ಕಾವಲುಗಾರ – ದಯಾನಂದ ಪಿ. ಅಂಚನ್


ಪ್ರತಿಭೆಗೆ ವಯಸ್ಸಿನ ಮೀತಿಯಾಗಲಿ ಮಾಡುವ ಕೆಲಸವಾಗಲಿ ಅಡ್ಡಿಯಾಗುವುದಿಲ್ಲ. ಆಸಕ್ತಿ ಇದ್ದರೆ ಸಾಕು ಸಮಯ ವ್ಯರ್ಥ ಮಾಡದೆಸಿಕ್ಕ ಬಿಡುವಿನ ಸಮಯದಲ್ಲಿ ಪ್ರತಿಭೆಯ ಅನಾವರಣ ಮಾಡಬಹುದು ಎಂಬುದಕ್ಕೆ ಉತ್ತಮ ಉದಾಹರಣೆ ನಮ್ಮ ನಡುವೆಮಂಗಳೂರಿನ ಬಿ.ಎಸ್.ಎನ್. ಎಲ್ ಕಛೇರಿಯಲ್ಲಿ ಕಾವಲುಗಾರರಾಗಿ ಬಿಡುವಿನ ವೇಳೆಯಲ್ಲಿ ಅಲ್ಲೇ ಮೂಲೆಯಲ್ಲಿ ಖುರ್ಚಿಯಲ್ಲಿಕುಳಿತು ಬಿಳಿ ಹಾಳೆಯಲ್ಲಿ ಚಿತ್ರ ಬಿಡಿಸುತ್ತ, ಗೋಡೆಯಲ್ಲಿ ತಮ್ಮ ಮೊಬೈಲ್ ಮೂಲಕ ಶೇಡೋ ಪ್ಲೇ ಮಾಡುವ ವಿಶಿಷ್ಟ ಕಲಾವಿದಹಾಗೇ ಎಲ್ಲಾರಲ್ಲೂ ಪ್ರೀತಿಯಿಂದ ಮಾತನಾಡುವ ಅಪರೂಪದ ವ್ಯಕ್ತಿ ದಯಾನಂದ ಪಿ. ಅಂಚನ್. ಚಿಕ್ಕದಿರುವಾಗ ತಮ್ಮ ಮನೆಯ ಸಮೀಪದಲ್ಲಿದ್ದ ಗೋವಿಂದ ಪೈ ಅನ್ನುವವರು ಶೇಡೋ ಪ್ಲೇ ಮೂಲಕ ಗೋಡೆಯಲ್ಲಿ ಕೈಚಲನೆ ಬಳಸಿಬೆಳಕಿನ ನೆರಳಿನಲ್ಲಿ ಮೂಡಿಸುತ್ತಿದ್ದ ಹಕ್ಕಿಗಳು,ಪ್ರಾಣಿಗಳ, ಮನುಷ್ಯನನ್ನು ನೋಡುತ್ತಾ ನೋಡುತ್ತಾ ತಾವು ನಿಧಾನವಾಗಿಆಸಕ್ತಿಯಿಂದ ಸತತ ಪ್ರಯತ್ನ ಪಟ್ಟು ಶೇಡೋ ಪ್ಲೇ ಮೂಲಕ ಗಿಳಿ, ಬಾತುಕೋಳಿ, ಕೊಕ್ಕರೆ, ಮನುಷ್ಯ,ಸಿಂಹ ಹೀಗೆ ಕಲಿತರು ಹಾಗೂಮನಸ್ಸಿದ್ದರೆ ಹೇಗೆದರೂ ಕಲಿಯಬಹುದು ತಾವು ಮೊದಲು ಕೆಲಸ ಮಾಡುತ್ತಿದ್ದ ರೈಸ್ ಮಿಲ್ ನಲ್ಲಿ ಬರುತ್ತಿದ್ದ ಧೂಳಿನಲ್ಲೇ ಚಿತ್ರಬಿಡಿಸುತ್ತಾ ನಂತರ ಕಾಗದದ ಮೇಲೆ ಚಿತ್ರಗಳನ್ನು ಬಿಡಿಸಲು ಪ್ರಾರಂಭಿಸಿದರು. ಅನೇಕ ವ್ಯಕ್ತಿಗಳ ಮುಖದ ಚಿತ್ರಗಳನ್ನು ಬಿಡಿಸಿದ್ದಾರೆ.

ಮಾಡುವ ಕಾಯಕದೊಂದಿಗೆ ಹವ್ಯಾಸವನ್ನು ಬಿಡದೆ ಅನೇಕ ವರ್ಷಗಳಿಂದ ಮುಂದುವರಿಸಿಕೊಂಡು ಹೋಗುತ್ತಿರುವ ದಯಾನಂದಪಿ.ಅಂಚನ್.ವೃತ್ತಿಯಲ್ಲಿ ತಾವು ಮಂಗಳೂರಿನಲ್ಲಿರುವ ಬಿ.ಎಸ್.ಎನ್.ಎಲ್ ಕಛೇರಿಯಲ್ಲಿ ಬೆಳಗ್ಗೆ ಕಾವಲುಗಾರರು ಆದರೆಹವ್ಯಾಸವಾಗಿ ಅಧ್ಬುತವಾಗಿ ಚಿತ್ರಗಳನ್ನು ಬಿಡಿಸುವ ಕಲಾ ಆರಾಧಕರು.ಯಾರು ಆಶ್ಚರ್ಯವೆಂದರೆ ಚಿತ್ರಕಲೆ,ಶೇಡೋ ಪ್ಲೇಯಾರಲ್ಲೂ ಕಲಿಯದೆ ತಾವೇ ಸ್ವತಃ ಆಸಕ್ತಿಯಿಂದ ಅನೇಕ ವರ್ಷಗಳ ಪರಿಶ್ರಮದಿಂದ ಕಲಿತುಕೊಂಡು ತಮ್ಮ ಹವ್ಯಾಸವನ್ನುಉದ್ಯೋಗದ ಜೊತೆಗೆ ಬೆಳೆಸುತ್ತಾ ಅಧ್ಬುತವಾಗಿ ವಿವಿಧ ವ್ಯಕ್ತಿಗಳ,ಹಲವು ಸಾಧಕರ ಮುಖಗಳ ಚಿತ್ರಗಳನ್ನು ಬಿಡಿಸುತ್ತಾ, ಮೊಬೈಲ್ಬೆಳಕಿನಲ್ಲೇ ಗೋಡೆಗಳ ಮೇಲೆ ಹಕ್ಕಿ,ಹುಲಿ, ಮನುಷ್ಯ ಮಾತಾನಾಡುವುದು ರೀತಿ ಶೇಡೋ ಪ್ಲೇ ಮಾಡಿ ತೋರಿಸುವ ಸರಳ ವ್ಯಕ್ತಿದಯಾನಂದ ಪಿ. ಅಂಚನ್

ಯಾರೇ ಅವರನ್ನು ಮಾತನಾಡಿಸಿ ಅವರ ಕಲೆಯ ಬಗ್ಗೆ ಕೇಳಿದಾಗ ಪ್ರೀತಿಯಿಂದ ಬಿಡಿಸಿದ ಚಿತ್ರಗಳನ್ನು ,ಶೇಡೋ ಪ್ಲೇ ತೋರಿಸಿಅಚ್ಚರಿ ಪಡಿಸುತ್ತಾರೆ. ಸಾಧಿಸಲು ಛಲ ಹಾಗೂ ಶ್ರದ್ಧೆ ಇದ್ದರೆ ಸಾಕು. ಸ್ವಂತ ತಾವೇ ಆಸಕ್ತಿಯಿಂದ ಕಲಿತು ಇಂದಿಗೂ ಉಳಿಸಿಕೊಂಡುಬಂದಿರುವ ಅವರ ಕಲೆಯ ಮೇಲಿನ ಪ್ರೀತಿ ನಿಜಕ್ಕೂ ಪ್ರೇರಣೆ ನೀಡುವಂತದ್ದು ಹಾಗೂ ಇಂತಹ ಎಲೆಮರೆಯ ಕಾಯಿಯಂತಿರುವಅನೇಕರನ್ನು ಗುರುತಿಸಿ ಅವರಿಗೆ ಇನ್ನಷ್ಟು ಪ್ರೋತ್ಸಾಹಿಸೋಣ. ಯಾವಾಗಲಾದರೂ ಬಿ.ಎಸ್.ಎನ್.ಎಲ್ ಮಂಗಳೂರಿನ ಕಛೇರಿಗೆಹೋದಾಗ ಅಲ್ಲೇ ಹೊರಗೆ ಕುಳಿತು ಸಮಯ ಸಿಕ್ಕಾಗ ಎಳೆಎಳೆಯಾಗಿ ಚಿತ್ರವನ್ನು ಬಿಡಿಸುತ್ತಾ ಅದರಲ್ಲೇ ಖುಷಿ ಪಡುವ ದಯಾನಂದಪಿ. ಅಂಚನ್ ಅವರನ್ನು ಮಾತನಾಡಿಸಲು ಮರೆಯದಿರಿ.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »