TOP STORIES:

FOLLOW US

*ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ.


ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಸತ್ಯಪುರುಷರಾದ ಕೋಟಿ ಚೆನ್ನಯರ ಹೆಸರಿಡಲು ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ.

ಪಂಚವರ್ಣದ ಪುಣ್ಯಮಣ್ಣಿನಲ್ಲಿ ಸತ್ಯ,ಧರ್ಮ, ನ್ಯಾಯ, ನೀತಿಗೆ ಬದ್ದರಾಗಿ ಸತ್ಕಾರ್ಯದ ಸೇವೆಗಳನ್ನು ನಿರ್ವಹಿಸಿ ಅಮರೈಕ್ಯರಾದ ಕೋಟಿಚೆನ್ನಯರು ಸಮಸ್ತ ಜನಮಾನಸದಲ್ಲಿ ಪ್ರಾತಃಸ್ಮರಣೀಯರಾಗಿ ನೆಲೆಗೊಂಡಿದ್ದಾರೆ.ಅವಳಿ ಜಿಲ್ಲೆಯ ಸಮಗ್ರ ಉದ್ದಾರದಲ್ಲಿ ಜೋಡು ನಂದಾದೀಪವಾಗಿ ದಾರಿತೋರುತ್ತಿರುವ ಕೋಟಿಚೆನ್ನಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಇಡಬೇಕೆನ್ನುವುದು ಬಹು ಸಮಯದ ಸರ್ವಸಮ್ಮತ ಬೇಡಿಕೆಯಾಗಿದೆ.ಅರಾಧನಾ ಅಂಶವಾಗಿ ಕೋಟಿಚೆನ್ನಯರು ಜಾತ್ಯಾತೀತವಾಗಿ ಸ್ವೀಕೃತಗೊಂಡಿದ್ದಾರೆ.ಅಧಿಕಾರಸ್ಥರು ಇಚ್ಛಾಶಕ್ತಿಯಿಂದ ಮಾಡಬೇಕಿದ್ದ ಕಾರ್ಯವೊಂದು ಇನ್ನಿಲ್ಲದ ನೆಪಗಳ ನಡುವೆ ಪ್ರಸ್ತುತ ಪದೇ ಪದೇ ಸುದ್ದಿಗ್ರಾಸವಾಗುತ್ತಿರುವುದು ವಿಷಾದನೀಯ. ಕೋಟಿಚೆನ್ನಯರ ಹೆಸರಿಡುವುದಕ್ಕೆ ಪ್ರಶ್ನಾತೀತವಾದ ಅಂಶಗಳಿದೆ ಮತ್ತು ಸೂಕ್ತವೂ, ಸಮರ್ಥನೀಯವೂ ಆಗಿದೆ.
ಈ ಕುರಿತಂತೆ ನಾವು ಜಾಗೃತಿಗೊಳ್ಳುವ ಸಮಯ ಬಂದಿದ್ದು ಸಮಸ್ತ ತುಳುನಾಡಿನಾದ್ಯಂತ ಕೋಟಿಚೆನ್ನಯರ ಪವಿತ್ರ ಆರಾಧ್ಯ ತಾಣಗಳಾದ *ಗರೋಡಿ ಸ್ಥಾನದವರು* ಒಮ್ಮತದಿಂದ ಈ ಅಭಿಯಾನದ ಕುರಿತು ಮನವಿಯನ್ನು ನೀಡುವಂತಹ ನಿರ್ಣಯವನ್ನು ತಕ್ಷಣವೇ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆಯು ವಿನಮ್ರವಾಗಿ ವಿನಂತಿಸಿಕೊಳ್ಳುತ್ತದೆ. ಎಲ್ಲಾ ಗರೋಡಿಗಳಲ್ಲಿ ಜಾತ್ಯಾತೀತ ನೆಲೆಯಲ್ಲಿ ಸತ್ಯನಿಷ್ಠವಾಗಿ ನಿಮ್ಮ ಪ್ರಯತ್ನ ಜರಗಲಿ.ಮತ್ತು ಈ ಅಗತ್ಯ ಕಾರ್ಯದ ಕುರಿತು ಯಾವುದೇ ರಾಜಕೀಯವನ್ನು ಮತ್ತು ಪ್ರತಿಷ್ಠೆಯನ್ನು ಹೊರತು ಪಡಿಸಿ ಪಕ್ಷಾತೀತವಾಗಿ ನಾವೆಲ್ಲರೂ ಸಂಘಟಿತರಾಗಿ ಮುನ್ನಡೆಯಲು ನಿರ್ಧರಿಸೋಣ..ಸಹಕಾರವಿರಲಿ.

 

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಹಾಗೂ ಸರ್ವಸದಸ್ಯರು,
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ),


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »