TOP STORIES:

FOLLOW US

*ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ.


ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಸತ್ಯಪುರುಷರಾದ ಕೋಟಿ ಚೆನ್ನಯರ ಹೆಸರಿಡಲು ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ.

ಪಂಚವರ್ಣದ ಪುಣ್ಯಮಣ್ಣಿನಲ್ಲಿ ಸತ್ಯ,ಧರ್ಮ, ನ್ಯಾಯ, ನೀತಿಗೆ ಬದ್ದರಾಗಿ ಸತ್ಕಾರ್ಯದ ಸೇವೆಗಳನ್ನು ನಿರ್ವಹಿಸಿ ಅಮರೈಕ್ಯರಾದ ಕೋಟಿಚೆನ್ನಯರು ಸಮಸ್ತ ಜನಮಾನಸದಲ್ಲಿ ಪ್ರಾತಃಸ್ಮರಣೀಯರಾಗಿ ನೆಲೆಗೊಂಡಿದ್ದಾರೆ.ಅವಳಿ ಜಿಲ್ಲೆಯ ಸಮಗ್ರ ಉದ್ದಾರದಲ್ಲಿ ಜೋಡು ನಂದಾದೀಪವಾಗಿ ದಾರಿತೋರುತ್ತಿರುವ ಕೋಟಿಚೆನ್ನಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಇಡಬೇಕೆನ್ನುವುದು ಬಹು ಸಮಯದ ಸರ್ವಸಮ್ಮತ ಬೇಡಿಕೆಯಾಗಿದೆ.ಅರಾಧನಾ ಅಂಶವಾಗಿ ಕೋಟಿಚೆನ್ನಯರು ಜಾತ್ಯಾತೀತವಾಗಿ ಸ್ವೀಕೃತಗೊಂಡಿದ್ದಾರೆ.ಅಧಿಕಾರಸ್ಥರು ಇಚ್ಛಾಶಕ್ತಿಯಿಂದ ಮಾಡಬೇಕಿದ್ದ ಕಾರ್ಯವೊಂದು ಇನ್ನಿಲ್ಲದ ನೆಪಗಳ ನಡುವೆ ಪ್ರಸ್ತುತ ಪದೇ ಪದೇ ಸುದ್ದಿಗ್ರಾಸವಾಗುತ್ತಿರುವುದು ವಿಷಾದನೀಯ. ಕೋಟಿಚೆನ್ನಯರ ಹೆಸರಿಡುವುದಕ್ಕೆ ಪ್ರಶ್ನಾತೀತವಾದ ಅಂಶಗಳಿದೆ ಮತ್ತು ಸೂಕ್ತವೂ, ಸಮರ್ಥನೀಯವೂ ಆಗಿದೆ.
ಈ ಕುರಿತಂತೆ ನಾವು ಜಾಗೃತಿಗೊಳ್ಳುವ ಸಮಯ ಬಂದಿದ್ದು ಸಮಸ್ತ ತುಳುನಾಡಿನಾದ್ಯಂತ ಕೋಟಿಚೆನ್ನಯರ ಪವಿತ್ರ ಆರಾಧ್ಯ ತಾಣಗಳಾದ *ಗರೋಡಿ ಸ್ಥಾನದವರು* ಒಮ್ಮತದಿಂದ ಈ ಅಭಿಯಾನದ ಕುರಿತು ಮನವಿಯನ್ನು ನೀಡುವಂತಹ ನಿರ್ಣಯವನ್ನು ತಕ್ಷಣವೇ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆಯು ವಿನಮ್ರವಾಗಿ ವಿನಂತಿಸಿಕೊಳ್ಳುತ್ತದೆ. ಎಲ್ಲಾ ಗರೋಡಿಗಳಲ್ಲಿ ಜಾತ್ಯಾತೀತ ನೆಲೆಯಲ್ಲಿ ಸತ್ಯನಿಷ್ಠವಾಗಿ ನಿಮ್ಮ ಪ್ರಯತ್ನ ಜರಗಲಿ.ಮತ್ತು ಈ ಅಗತ್ಯ ಕಾರ್ಯದ ಕುರಿತು ಯಾವುದೇ ರಾಜಕೀಯವನ್ನು ಮತ್ತು ಪ್ರತಿಷ್ಠೆಯನ್ನು ಹೊರತು ಪಡಿಸಿ ಪಕ್ಷಾತೀತವಾಗಿ ನಾವೆಲ್ಲರೂ ಸಂಘಟಿತರಾಗಿ ಮುನ್ನಡೆಯಲು ನಿರ್ಧರಿಸೋಣ..ಸಹಕಾರವಿರಲಿ.

 

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಹಾಗೂ ಸರ್ವಸದಸ್ಯರು,
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ),


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »