TOP STORIES:

FOLLOW US

*ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ.


ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಸತ್ಯಪುರುಷರಾದ ಕೋಟಿ ಚೆನ್ನಯರ ಹೆಸರಿಡಲು ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ.

ಪಂಚವರ್ಣದ ಪುಣ್ಯಮಣ್ಣಿನಲ್ಲಿ ಸತ್ಯ,ಧರ್ಮ, ನ್ಯಾಯ, ನೀತಿಗೆ ಬದ್ದರಾಗಿ ಸತ್ಕಾರ್ಯದ ಸೇವೆಗಳನ್ನು ನಿರ್ವಹಿಸಿ ಅಮರೈಕ್ಯರಾದ ಕೋಟಿಚೆನ್ನಯರು ಸಮಸ್ತ ಜನಮಾನಸದಲ್ಲಿ ಪ್ರಾತಃಸ್ಮರಣೀಯರಾಗಿ ನೆಲೆಗೊಂಡಿದ್ದಾರೆ.ಅವಳಿ ಜಿಲ್ಲೆಯ ಸಮಗ್ರ ಉದ್ದಾರದಲ್ಲಿ ಜೋಡು ನಂದಾದೀಪವಾಗಿ ದಾರಿತೋರುತ್ತಿರುವ ಕೋಟಿಚೆನ್ನಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಇಡಬೇಕೆನ್ನುವುದು ಬಹು ಸಮಯದ ಸರ್ವಸಮ್ಮತ ಬೇಡಿಕೆಯಾಗಿದೆ.ಅರಾಧನಾ ಅಂಶವಾಗಿ ಕೋಟಿಚೆನ್ನಯರು ಜಾತ್ಯಾತೀತವಾಗಿ ಸ್ವೀಕೃತಗೊಂಡಿದ್ದಾರೆ.ಅಧಿಕಾರಸ್ಥರು ಇಚ್ಛಾಶಕ್ತಿಯಿಂದ ಮಾಡಬೇಕಿದ್ದ ಕಾರ್ಯವೊಂದು ಇನ್ನಿಲ್ಲದ ನೆಪಗಳ ನಡುವೆ ಪ್ರಸ್ತುತ ಪದೇ ಪದೇ ಸುದ್ದಿಗ್ರಾಸವಾಗುತ್ತಿರುವುದು ವಿಷಾದನೀಯ. ಕೋಟಿಚೆನ್ನಯರ ಹೆಸರಿಡುವುದಕ್ಕೆ ಪ್ರಶ್ನಾತೀತವಾದ ಅಂಶಗಳಿದೆ ಮತ್ತು ಸೂಕ್ತವೂ, ಸಮರ್ಥನೀಯವೂ ಆಗಿದೆ.
ಈ ಕುರಿತಂತೆ ನಾವು ಜಾಗೃತಿಗೊಳ್ಳುವ ಸಮಯ ಬಂದಿದ್ದು ಸಮಸ್ತ ತುಳುನಾಡಿನಾದ್ಯಂತ ಕೋಟಿಚೆನ್ನಯರ ಪವಿತ್ರ ಆರಾಧ್ಯ ತಾಣಗಳಾದ *ಗರೋಡಿ ಸ್ಥಾನದವರು* ಒಮ್ಮತದಿಂದ ಈ ಅಭಿಯಾನದ ಕುರಿತು ಮನವಿಯನ್ನು ನೀಡುವಂತಹ ನಿರ್ಣಯವನ್ನು ತಕ್ಷಣವೇ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆಯು ವಿನಮ್ರವಾಗಿ ವಿನಂತಿಸಿಕೊಳ್ಳುತ್ತದೆ. ಎಲ್ಲಾ ಗರೋಡಿಗಳಲ್ಲಿ ಜಾತ್ಯಾತೀತ ನೆಲೆಯಲ್ಲಿ ಸತ್ಯನಿಷ್ಠವಾಗಿ ನಿಮ್ಮ ಪ್ರಯತ್ನ ಜರಗಲಿ.ಮತ್ತು ಈ ಅಗತ್ಯ ಕಾರ್ಯದ ಕುರಿತು ಯಾವುದೇ ರಾಜಕೀಯವನ್ನು ಮತ್ತು ಪ್ರತಿಷ್ಠೆಯನ್ನು ಹೊರತು ಪಡಿಸಿ ಪಕ್ಷಾತೀತವಾಗಿ ನಾವೆಲ್ಲರೂ ಸಂಘಟಿತರಾಗಿ ಮುನ್ನಡೆಯಲು ನಿರ್ಧರಿಸೋಣ..ಸಹಕಾರವಿರಲಿ.

 

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಹಾಗೂ ಸರ್ವಸದಸ್ಯರು,
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ),


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »