TOP STORIES:

*ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ.


ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಸತ್ಯಪುರುಷರಾದ ಕೋಟಿ ಚೆನ್ನಯರ ಹೆಸರಿಡಲು ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ.

ಪಂಚವರ್ಣದ ಪುಣ್ಯಮಣ್ಣಿನಲ್ಲಿ ಸತ್ಯ,ಧರ್ಮ, ನ್ಯಾಯ, ನೀತಿಗೆ ಬದ್ದರಾಗಿ ಸತ್ಕಾರ್ಯದ ಸೇವೆಗಳನ್ನು ನಿರ್ವಹಿಸಿ ಅಮರೈಕ್ಯರಾದ ಕೋಟಿಚೆನ್ನಯರು ಸಮಸ್ತ ಜನಮಾನಸದಲ್ಲಿ ಪ್ರಾತಃಸ್ಮರಣೀಯರಾಗಿ ನೆಲೆಗೊಂಡಿದ್ದಾರೆ.ಅವಳಿ ಜಿಲ್ಲೆಯ ಸಮಗ್ರ ಉದ್ದಾರದಲ್ಲಿ ಜೋಡು ನಂದಾದೀಪವಾಗಿ ದಾರಿತೋರುತ್ತಿರುವ ಕೋಟಿಚೆನ್ನಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಇಡಬೇಕೆನ್ನುವುದು ಬಹು ಸಮಯದ ಸರ್ವಸಮ್ಮತ ಬೇಡಿಕೆಯಾಗಿದೆ.ಅರಾಧನಾ ಅಂಶವಾಗಿ ಕೋಟಿಚೆನ್ನಯರು ಜಾತ್ಯಾತೀತವಾಗಿ ಸ್ವೀಕೃತಗೊಂಡಿದ್ದಾರೆ.ಅಧಿಕಾರಸ್ಥರು ಇಚ್ಛಾಶಕ್ತಿಯಿಂದ ಮಾಡಬೇಕಿದ್ದ ಕಾರ್ಯವೊಂದು ಇನ್ನಿಲ್ಲದ ನೆಪಗಳ ನಡುವೆ ಪ್ರಸ್ತುತ ಪದೇ ಪದೇ ಸುದ್ದಿಗ್ರಾಸವಾಗುತ್ತಿರುವುದು ವಿಷಾದನೀಯ. ಕೋಟಿಚೆನ್ನಯರ ಹೆಸರಿಡುವುದಕ್ಕೆ ಪ್ರಶ್ನಾತೀತವಾದ ಅಂಶಗಳಿದೆ ಮತ್ತು ಸೂಕ್ತವೂ, ಸಮರ್ಥನೀಯವೂ ಆಗಿದೆ.
ಈ ಕುರಿತಂತೆ ನಾವು ಜಾಗೃತಿಗೊಳ್ಳುವ ಸಮಯ ಬಂದಿದ್ದು ಸಮಸ್ತ ತುಳುನಾಡಿನಾದ್ಯಂತ ಕೋಟಿಚೆನ್ನಯರ ಪವಿತ್ರ ಆರಾಧ್ಯ ತಾಣಗಳಾದ *ಗರೋಡಿ ಸ್ಥಾನದವರು* ಒಮ್ಮತದಿಂದ ಈ ಅಭಿಯಾನದ ಕುರಿತು ಮನವಿಯನ್ನು ನೀಡುವಂತಹ ನಿರ್ಣಯವನ್ನು ತಕ್ಷಣವೇ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆಯು ವಿನಮ್ರವಾಗಿ ವಿನಂತಿಸಿಕೊಳ್ಳುತ್ತದೆ. ಎಲ್ಲಾ ಗರೋಡಿಗಳಲ್ಲಿ ಜಾತ್ಯಾತೀತ ನೆಲೆಯಲ್ಲಿ ಸತ್ಯನಿಷ್ಠವಾಗಿ ನಿಮ್ಮ ಪ್ರಯತ್ನ ಜರಗಲಿ.ಮತ್ತು ಈ ಅಗತ್ಯ ಕಾರ್ಯದ ಕುರಿತು ಯಾವುದೇ ರಾಜಕೀಯವನ್ನು ಮತ್ತು ಪ್ರತಿಷ್ಠೆಯನ್ನು ಹೊರತು ಪಡಿಸಿ ಪಕ್ಷಾತೀತವಾಗಿ ನಾವೆಲ್ಲರೂ ಸಂಘಟಿತರಾಗಿ ಮುನ್ನಡೆಯಲು ನಿರ್ಧರಿಸೋಣ..ಸಹಕಾರವಿರಲಿ.

 

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಹಾಗೂ ಸರ್ವಸದಸ್ಯರು,
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ),


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »