TOP STORIES:

FOLLOW US

ಮಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕೈಕೊಟ್ಟ ವಿದ್ಯುತ್‌: ವಿಮಾನಗಳ ಹಾರಾಟ ಸ್ಥಗಿತ


ತಾಂತ್ರಿಕ ಕಾರಣದಿಂದಾಗಿ ಮಂಗಳೂರು ವಿಮಾನ ನಿಲ್ದಾಣದ ರನ್ ವೇನಲ್ಲಿ ವಿದ್ಯುತ್ ಕೈ ಕೊಟ್ಟಿದ್ದು, ಏರ್ಪೋರ್ಟ್ ನಲ್ಲಿ ಲ್ಯಾಂಡ್ಆಗಬೇಕಿದ್ದ ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ.

ಮಂಗಳೂರು: ತಾಂತ್ರಿಕ ಕಾರಣದಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ( Mangaluru International Airport) ರನ್ ವೇನಲ್ಲಿ ವಿದ್ಯುತ್ ಕೈ ಕೊಟ್ಟಿದ್ದು, ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಡೈವರ್ಟ್ಮಾಡಲಾಗಿದೆ. ಪವರ್ ಸಪ್ಲೇ ಸಮಸ್ಯೆಯಿಂದ ರನ್ ವೇನಲ್ಲಿ ಕತ್ತಲು ಆವರಿಸಿದೆ. ಮುಂಬೈನಿಂದ ಆಗಮಿಸಿದ ವಿಮಾನ ಎಟಿಸಿಸೂಚನೆ ಹಿನ್ನೆಲೆ ಲ್ಯಾಂಡ್ ಆಗದೇ ಕೇರಳದ ಕಣ್ಣೂರಿಗೆ ವಾಪಾಸ್ ತೆರಳಿದೆ. ತಾಂತ್ರಿಕ ಸಮಸ್ಯೆ ಸರಿಪಡಿಸುವವರೆಗೆ ಮಂಗಳೂರಿಗೆಬರುವ ಮತ್ತು ಹೋಗುವ ಎಲ್ಲಾ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ವಿದ್ಯುತ್‌ ಪೂರೈಕೆ ಸಮಸ್ಯೆಯನ್ನು ಏರ್‌ಪೋರ್ಟ್ ಸಿಬ್ಬಂದಿಗಳು ಸರಿಪಡಿಸುತ್ತಿದ್ದು, ಬಹರೈನ್‌ಗೆ ತೆರಳಬೇಕಿದ್ದ ಏರ್‌ ಇಂಡಿಯಾಸಂಚಾರದಲ್ಲಿ ವಿಳಂಬವಾಗಿದೆ. ಜೊತೆಗೆ ಚೆನ್ನೈ, ಬೆಂಗಳೂರಿಂದ ಬರಬೇಕಿದ್ದ ವಿಮಾನಗಳ ಲ್ಯಾಂಡಿಂಗ್ ಕೂಡ ವಿಳಂಬವಾಗುತ್ತಿದೆ.

ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಭಾರೀ ದುರಂತ 

ಇತ್ತೀಚೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿಯೊಂದುಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್ ಭಾರೀ ದುರಂತ ತಪ್ಪಿತ್ತು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಸಹಿತ ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿತ್ತು

ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಇಂಡಿಗೋ ವಿಮಾನ ಸಾಗುತ್ತಿತ್ತು. ವೇಳೆ ಏಕಾಏಕಿಯಾಗಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿಹೊಡೆದಿತ್ತು. ತಕ್ಷಣ ಅಪಾಯದ ಸೂಚನೆ ಅರಿತು ಪೈಲಟ್ ಎಟಿಸಿಗೆ ಮಾಹಿತಿ ನೀಡಿದ್ದರು. ಟೇಕಾಫ್ ಕ್ಯಾನ್ಸಲ್ ಮಾಡಿ ರನ್ವೇನಿಂದ ವಿಮಾನವನ್ನು ವಾಪಾಸ್ ತರಲಾಗಿತ್ತು.

ಬಲಿಕ ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ಮಾಡಲಾಗಿತ್ತು. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದಮೂಲಕ ಪ್ರಯಾಣಿಕರನ್ನು ದುಬೈಗೆ ಕಳಿಸಲು ವ್ಯವಸ್ಥೆ ಮಾಡಲಾಯಿತು. ಕೆಲ ಕಾಲ ಮಂಗಳೂರು ಏರ್ಪೋರ್ಟ್ ನಲ್ಲಿ ಅವಘಡಆತಂಕಕ್ಕೆ ಕಾರಣವಾಗಿತ್ತು.


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »