TOP STORIES:

ಮಂಗಳೂರು ಏರ್‌ಪೋರ್ಟ್‌ಗೆ ಕೋಟಿ ಚೆನ್ನಯರ ಹೆಸರಿಡಬೇಕು’ – ವಿಧಾನಸಭೆಯಲ್ಲಿ ಧ್ವನಿಯೆತ್ತಿದ ಶಾಸಕ ಉಮಾನಾಥ್ ಕೋಟ್ಯಾನ್


ಮಂಗಳೂರು: ”ಅಂತರ್‌ ರಾಷ್ಟ್ರೀಯ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕು” ಎಂದು ವಿಧಾನಸಭೆಯಲ್ಲಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಧ್ವನಿ ಎತ್ತಿದ್ದಾರೆ.

”ಈ ನಾಡಿನಲ್ಲಿ ಜನ್ಮತಳೆದು ತಮ್ಮ ಬದುಕು ಮತ್ತು ಸಾಧನೆಯಿಂದ ವೀರ ಪುರುಷರಾದವರು, ದೈವಿಕ ಶಕ್ತಿ ಗಳಿಸಿಕೊಂಡವರು ಅನೇಕರು ಇದ್ದಾರೆ. ಅವರಲ್ಲಿ ವೀರ ಪುರುಷರು ಎನಿಸಿಕೊಂಡು, ತಮ್ಮ ಜನ ಸೇವೆಯಿಂದ, ವೀರಗಾಥೆಯಿಂದ, ಅಸಮಾನ್ಯ ನಡೆನುಡಿಗಳಿಂದ ದೈವತ್ವಕ್ಕೆ ಏರಿದ ಅಮರರಾದವರಲ್ಲಿ ಕೋಟಿ ಚೆನ್ನಯರ ಹೆಸರು ನಿಜವಾಗಿಯು ಎಲ್ಲರಿಗೂ ತಿಳಿದಿದೆ. ವೀರ ಪುರುಷರಾದ ಕೋಟಿ ಚೆನ್ನಯರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಬೇಕು. ವೀರ ಪುರುಷ ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಎಂದು ನಾಮಕರಣ ಮಾಡಬೇಕು” ಎಂದು ಶಾಸಕ ಉಮಾನಾಥ್ ಕೋಟ್ಯಾನ್ ವಿಧಾನಸಭೆಯಲ್ಲಿ ಒ‌ತ್ತಾಯಿಸಿದ್ದಾರೆ.

”ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಈಗಾಗಲೇ ಮಂಗಳೂರಿನಲ್ಲಿ ಕೋಟಿ ಚೆನ್ನಯರ ಹೆಸರು ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದು ಪ್ರತಿಭಟನೆ, ರ್‍ಯಾಲಿಗಳನ್ನು ನಡೆಸುತ್ತಿದ್ದಾರೆ. ಸರ್ಕಾರ ಕೂಡಲೇ ಜನಾಭಿಪ್ರಾಯಕ್ಕೆ ಮನ್ನಣೆಯನ್ನು ಕೊಟ್ಟು ವೀರ ಪುರುಷ ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಎಂದು ಹೆಸರು ಇಡಬೇಕು” ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »