TOP STORIES:

FOLLOW US

ಮಂಗಳೂರು ದಕ್ಷಿಣ: ಕಾಂಗ್ರೆಸ್ ನಿಂದ ಈ ಬಾರಿ ಹೊಸ ಮುಖ?; ಕೇಂದ್ರ ಯುವ ನ್ಯಾಯವಾದಿ ಪದ್ಮರಾಜ್ ಆರ್. ಅಭ್ಯರ್ಥಿ?


ಮಂಗಳೂರು(reporterkarnataka.com): ಮುಂಬರುವ ವಿಧಾನ ಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಪಟ್ಟಿಈಗಾಗಲೇ ಬಿಡುಗಡೆಯಾಗಿದೆ. ಇದೀಗ ಎರಡನೇ ಪಟ್ಟಿಗೆ ಟಿಕೆಟ್ ಆಕಾಂಕ್ಷಿಗಳು ಚಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಮಂಗಳೂರುಉತ್ತರ, ಮಂಗಳೂರು ದಕ್ಷಿಣ ಹಾಗೂ ಪುತ್ತೂರು ಕ್ಷೇತ್ರದಲ್ಲಿ ಟಿಕೆಟ್ ಯಾರಿಗೆ ಎನ್ನುವ ಕುತೂಹಲ ಎಲ್ಲೆಡೆ ಮೂಡಿದೆ.
ಹಲವು ಚುನಾವಣೆಗಳಲ್ಲಿ ಸೋತ ಕಾಂಗ್ರೆಸ್ ಕೂಡ ಬಾರಿ ತನ್ನ ಸ್ಟಾಟಜಿಯನ್ನು ಸ್ವಲ್ಪ ಬದಲಾಯಿಸಿದೆ. ಬೆಳ್ತಂಗಡಿ ಕ್ಷೇತ್ರದಲ್ಲಿವಸಂತ ಬಂಗೇರ ಬದಲಿಗೆ ಹೊಸ ಮುಖಕ್ಕೆ ಟಿಕೆಟ್ ನೀಡಿದೆ. ರಕ್ಷಿತ್ ಶಿವರಾಂ ಬಾರಿ ಬೆಳ್ತಂಗಡಿಯಿಂದ ಅಖಾಡಕ್ಕಿಳಿದಿದ್ದಾರೆ. ಹಾಗೆ ಮಂಗಳೂರು ಉತ್ತರ ಮತ್ತು ಮಂಗಳೂರು ದಕ್ಷಿಣದಲ್ಲಿ ಕೂಡ ಕಾಂಗ್ರೆಸ್ ಹೊಸ ಮುಖಕ್ಕೆ ಅವಕಾಶ ನೀಡಲಿದೆ. ಕಾಂಗ್ರೆಸ್ಹೈಕಮಾಂಡಿನ ಸೂಚನೆ ಮೇರೆಗೆ ಕೆಪಿಸಿಸಿ ತನ್ನ ಸ್ಟಾಟಜಿ ಬದಲಾಯಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಬದಲಿಗೆ ಕೆಪಿಸಿಸಿ ಕಾರ್ಯದರ್ಶಿ ಇನಾಯತ್ ಆಲಿಅವರನ್ನು ಕಣಕ್ಕಿಸುವ ಬಗ್ಗೆ ಕೆಪಿಸಿಸಿ ಚಿಂತನೆ ನಡೆಸಿದೆ. ಅದೇ ರೀತಿ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿಯೂ ಬಾರಿಬದಲಾವಣೆಯಾಗಲಿದೆ ಎಂಬ ಮಾತು ಕೇಳಿ ಬರುತ್ತಿದೆ. ಮಂಗಳೂರು ಉತ್ತರವನ್ನು ಅಲ್ಪಸಂಖ್ಯಾತ ಅಭ್ಯರ್ಥಿ ಗೆಬಿಟ್ಟುಕೊಡುವುದರಿಂದ ಮಂಗಳೂರು ದಕ್ಷಿಣದಲ್ಲಿ ಬೇರೆ ಸಮುದಾಯದ ಅಭ್ಯರ್ಥಿ ಗೆ ಅವಕಾಶ ಕಲ್ಪಿಸುವ ಬಗ್ಗೆ ಪಕ್ಷದಹೈಕಮಾಂಡಿನಿಂದ ಸೂಚನೆ ಬಂದಿದೆ ಎನ್ನಲಾಗಿದೆ. ಕಾಂಗ್ರೆಸ್ ಬದಲಾದ ಸ್ಟಾಟಜಿ ಪ್ರಕಾರ ದಕ್ಷಿಣದಿಂದ ಯುವ ನ್ಯಾಯವಾದಿಪದ್ಮರಾಜ್ ಆರ್. ಅವರಿಗೆ ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗಿದೆ.

ಯಾರು ಪದ್ಮರಾಜ್?: ಮಂಗಳೂರಿನಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಪದ್ಮರಾಜ್ ಅವರದ್ದು ಬಹುದೊಡ್ಡ ಹೆಸರು. ಕುದ್ರೋಳಿ ಗೋಕರ್ಣನಾಥ ದೇಗುಲದ ಟ್ರಸ್ಟಿಯಾಗಿ ಅವರು ನಾಡಿನುದ್ಧಗಲಕ್ಕೂ ಚಿರಪರಿಚಿತರು. ಸಾಮಾಜಿಕ ಹಾಗೂ ಧಾರ್ಮಿಕಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಪದ್ಮರಾಜ್ ಅವರು ಕೇಂದ್ರ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಅವರ ಕಟ್ಟರ್ಅನುಯಾಯಿ. ಹಾಗೆ ಪೂಜಾರಿಯವರ ಆಪ್ತ ಬಳಗದವರಲ್ಲಿ ಒಬ್ಬರು. ಗುರು ಬೆಳದಿಂಗಳು ಟ್ರಸ್ಟ್ ಮೂಲಕ ಸಮಾಜ ಸೇವೆಯಲ್ಲಿಅವರು ತೊಡಗಿಸಿಕೊಂಡಿದ್ದಾರೆ. ಮಂಗಳೂರಿನ ನಾಗೂರಿ ಬಳಿ ಇತ್ತೀಚೆಗೆ ನಡೆದ ಕುಕ್ಕರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಆಟೋ ಚಾಲಕನ ಕುಟುಂಬದ ಹಳೆಯ ಮನೆಯನ್ನು 6 ಲಕ್ಷ ರೂ. ವೆಚ್ಚದಲ್ಲಿ ಕೇವಲ 4 ತಿಂಗಳ ಅವಧಿಯಲ್ಲಿ ಪದ್ಮರಾಜ್ ಅವರನೇತೃತ್ವದ ಟ್ರಸ್ಡ್ ಮೂಲಕ ನವೀಕರಣ ಮಾಡಲಾಗಿದೆ. ಮೊನ್ನೆ ಯುಗಾದಿಯ ದಿನ ಮನೆಯ ಉದ್ಘಾಟನೆ ಕೂಡ ನಡೆದಿದೆ. ಇದುಪದ್ಮರಾಜ್ ಅವರ ಸಮಾಜ ಸೇವೆ ಬಗ್ಗೆ ಒಂದು ಸಣ್ಣ ಸ್ಯಾಂಪಲ್ ಅಷ್ಟೇ. ಬಿಲ್ಲವ ಸಮುದಾಯಕ್ಕೆ ಸೇರಿದ ಯುವ ನಾಯಕಪದ್ಮರಾಜ್ ಅವರ ಮೂಲಕ ಬಿಜೆಪಿಗೆ ಪ್ರಬಲ ಪೈಪೋಟಿ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »