TOP STORIES:

ಮಂಗಳೂರು ನಗರ, ಉಳ್ಳಾಲ, ಸುರತ್ಕಲ್-ಗುರುಪುರ ವಲಯಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ


ಸಂಘಟನಾತ್ಮಕವಾಗಿ ಪ್ರಚಾರ, ಸುವ್ಯವಸ್ತಿವಾಗಿ ಜಾತ್ರಾ ಮಹೋತ್ಸವ ನಡೆಸುವ ಬಗ್ಗೆ ಸಾಮೂಹಿಕ ಪಾಲ್ಗೊಳ್ಳುವಿಕೆಯಲ್ಲಿ ಯಶಸ್ವಿ ಸಭೆ

ದೇಯಿ ಬೈದೆತಿ- ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 3 ರಿಂದ 7 ರ ವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂಗಳೂರು ನಗರ, ಉಳ್ಳಾಲ, ಸುರತ್ಕಲ್, ಗುರುಪುರ ವಲಯಗಳ ವ್ಯಾಪ್ತಿಯಲ್ಲಿ ಆದಿತ್ಯವಾರ ಮಂಗಳೂರಿನ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಸಭಾಂಗಣದಲ್ಲಿ ಎಂ.ಪಿ. ಸಿಲ್ಕ್ ನ ಮಾಲಕರಾದ ಎಂ.ಪಿ. ದಿನೇಶ್ ಬಿಡುಗಡೆಗೊಳಿಸಿದರು.

ನೇಮೋತ್ಸವ ಸಮಿತಿ ಗೌರವಾಧ್ಯಕ್ಷರಾದ ಚಿತ್ತರಂಜನ್ ಕಂಕನಾಡಿ ಮಾರ್ಗದರ್ಶನದಲ್ಲಿ ಜರಗಿದ ಸಭೆಯಲ್ಲಿ ಆಮಂತ್ರಣ ಪತ್ರಿಕೆಯನ್ನು ಜಿಲ್ಲೆಗಳ ವ್ಯಾಪ್ತಿಯಲ್ಲಿ ಶ್ರೀ ಕ್ಷೇತ್ರದ ಭಕ್ತಾಭಿಮಾನಿಗಳಿಗೆ ಸ್ಥಳೀಯ ಸಮಾಜದ ಸಂಘ ಸಂಸ್ಥೆಗಳ ಮೂಲಕ ತಲುಪಿಸಿ ಅನ್ಯ ರಾಜ್ಯಗಳಲ್ಲಿ ಹಾಗೂ ವಿದೇಶಗಳಲ್ಲಿ ನೆಲೆಸಿರುವ ಭಕ್ತರಿಗೆ ಆಮಂತ್ರಣ ಪತ್ರಿಕೆಯನ್ನು ವಾಟ್ಸಾಪ್ ಹಾಗೂ ಇತರ ಆನ್ಲೈನ್ ಮಾಧ್ಯಮ ಗಳ ಮೂಲಕ ವಿಶ್ವಾದ್ಯಂತ ನೆಲೆಸಿರುವ ಶ್ರೀ ಕ್ಷೇತ್ರದ ಭಕ್ತಾಭಿಮಾನಿ ಗಳಿಗೆ ತಲುಪಿಸಿ ಈ ಮಹೋತ್ಸವಕ್ಕೆ ಆಮಂತ್ರಿಸಲು ತೀರ್ಮಾನಿಸಲಾಯಿತು. ಜಾತ್ರಾಮಹೋತ್ಸವದ ಹೊರೆಕಾಣಿಕೆ ಮೆರವಣಿಗೆ ಮಂಗಳೂರಿನಲ್ಲಿ ಮಾರ್ಚ್ 3 ಬೆಳಿಗ್ಗೆ 11ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರಾರಂಭಗೊಂಡು ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದ ಮೂಲಕ ಮಧ್ಯಾಹ್ನ 1ಕ್ಕೆ ಪುತ್ತೂರು ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸಂಘ ತಲುಪಿ ಅಲ್ಲಿಂದ ಮಧ್ಯಾಹ್ನ 2 ಕ್ಕೆ ವಿವಿಧೆಡೆ ಗಳಿಂದ ಆಗಮಿಸುವ ಹೊರೆಕಾಣಿಕೆ ಮೆರವಣಿಗೆ ಜೊತೆಯಾಗಿ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಹೊರಡುವುದು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಹಿಸಿ ಮಾತನಾಡಿದ ಕ್ಷೇತ್ರಾ ಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆ ಯವರು ಶ್ರೀ ಕ್ಷೇತ್ರ ಗೆಜ್ಜೆಗಿರಿ ವಿಶ್ವಬಿಲ್ಲವರ ಪಾಲ್ಗೊಳ್ಳುವಿಕೆಯಿಂದ ನಿರ್ಮಾಣ ಗೊಂಡ ಮಹಾ ಮಾತೆ ದೇಯಿ ಬೈದೆತಿ, ಕೋಟಿ ಚೆನ್ನಯರ ಪ್ರಮುಖ ಆರಾಧನಾ ಸ್ಥಳವಾಗಿದೆ. ವಿಶ್ವಬಿಲ್ಲವರು ತಮ್ಮ ಸಮರ್ಪಣಾ ಭಾವದಿಂದ ಶ್ರೀ ಕ್ಷೇತ್ರವನ್ನು ನಿರ್ಮಿಸಿದ್ದಾರೆ ಹಾಗೂ ಇಂದು ಜಾತಿ ಮತವನ್ನು ಮೀರಿ ಲಕ್ಷಾಂತರ ದೇಯಿ ಬೈದೆತಿ,ಕೋಟಿ ಚೆನ್ನಯರ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಇಲ್ಲಿಯ ಕಾರ್ಣಿಕ ಶಕ್ತಿಗಳ ಆಶೀರ್ವಾದ ವನ್ನು ಪಡೆಯುತ್ತಿದ್ದರೆ ಎಂದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಗೆಜ್ಜೆಗಿರಿ ಜಾತ್ರೋತ್ಸವದ ಗೌರವ ಸಲಹೆಗಾರರಾದ ಪದ್ಮರಾಜ್ ಆರ್ ಮಾತನಾಡಿ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಮತ್ತು ಹೊರೆಕಾಣಿಕೆ ತುಳುನಾಡಿನಲ್ಲಿ ಇತಿಹಾಸವನ್ನು ನಿರ್ಮಿಸಿದೆ ಜಾತ್ರಾ ಮಹೋತ್ಸವ ಕೂಡ ಬಹಳ ಶಿಸ್ತು ಮತ್ತು ಅಚ್ಚುಕಟ್ಟಾಗಿ ನಡೆಯಲಿದೆ ಎಂದರು.

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ ಪ್ರಾಸ್ತಾವಿಕವಾಗಿ ಮಾತನಾಡಿ ಪುತ್ತೂರು ಪ್ರದೇಶಕ್ಕೆ ಸೀಮಿತವಾಗಿದ್ದ ಪಡುಮಲೆಯ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ನಂತರ ಧಾರ್ಮಿಕತೆಯ ಜೊತೆ ಸಾಮಾಜಿಕ ಜಾಗ್ರತಿಯ ಮೂಲಕ ಜಿಲ್ಲೆ ರಾಜ್ಯ ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಪಡೆದ ಪರಮಪಾವನ ಪುಣ್ಯಕ್ಷೇತ್ರ ವಾಯಿತು ಎಂದರು.

ಕಾರ್ಯಕ್ರಮದಲ್ಲಿ ಜಾತ್ರೋತ್ಸವದ ಗೌರವ ಸಲಹೆಗಾರರಾದ ಸತ್ಯಜಿತ್ ಸುರತ್ಕಲ್, ನಮ್ಮ ಕುಡ್ಲದ ಲೀಲಾಕ್ಷ ಕರ್ಕೇರ,ವಸಂತ್ ಪೂಜಾರಿ ಅಧ್ಯಕ್ಷರು ಬಾಕಿಲ ಗರೋಡಿ, ಪ್ರೇಮ್ ಸನಿಲ್ ಅಧ್ಯಕ್ಷರು ಕನಕರ ಬೆಟ್ಟು ಗರೋಡಿ, ಜಯಾನಂದ ಎಂ ಅಧ್ಯಕ್ಷ ರು ಗುರು ಚಾರಿಟೇಬಲ್ ಟ್ರಸ್ಟ್, ಭರತೇಶ್ ಅಧ್ಯಕ್ಷರು ಕಂಕನಾಡಿ ಬಿಲ್ಲವ ಸಂಘ, ದಿನೇಶ್ ಅಂಚನ್ ಅಧ್ಯಕ್ಷರು ಜಪ್ಪಿನಮೊಗೇರು ಬಿಲ್ಲವ ಸಂಘ, ಪುರುಷೋತ್ತಮ ಪೂಜಾರಿ ಅಧ್ಯಕ್ಷರು ಶ್ರೀ ನಾರಾಯಣ ಗುರು ಸಂಘ ಕೋಡಿಕಲ್, ಚಂದ್ರಶೇಖರ್ ಅಧ್ಯಕ್ಷ ರು ಕಾವೂರು ಬಿಲ್ಲವ ಸಂಘ, ಕೃಷ್ಣಪ್ಪ ಪೂಜಾರಿ ಅಧ್ಯಕ್ಷರು ಮಂಗಳಾ ದೇವಿ ಬಿಲ್ಲವ ಸಂಘ, ಯೋಗಿಶ್ ಅಧ್ಯಕ್ಷರು ಸತ್ತಿಕಲ್ಲು ಬಿಲ್ಲವ ಸಂಘ, ಉಮಾನಾಥ್ ನೀರ್ ಮಾರ್ಗ ಬಿಲ್ಲವ ಸಂಘ, ವಿವೇಕ್ ಕೋಟ್ಯಾನ್ ಸುರತ್ಕಲ್ ಅಧ್ಯಕ್ಷರು ಯುವವಾಹಿನಿ ಘಟಕ, ಸುನೀತಾ ಅಧ್ಯಕ್ಷರು ಯುವವಾಹಿನಿ ಮಹಿಳಾ ಘಟಕ ಮಂಗಳೂರು, ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷ ರಾದ ನಯನ ಸುರೇಶ್, ಕಾರ್ಪೊರೇಟರ್ ಗಳಾದ ಸಂದೀಪ್ ಗರೋಡಿ, ಅನಿಲ್ ಪೂಜಾರಿ ಪಂಜಿಮುಗೇರು, ಪ್ರಮುಖರಾದ ಕಮಲಾಕ್ಷ ಬೋಳಾರ್, ಭಾಸ್ಕರ್ ಉಪ್ಪಳಿಗೆ, ಕ್ಷೇತ್ರಾಡಳಿತ ಸಮಿತಿಯ ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಗುರುಪುರ , ಕಾರ್ಯದರ್ಶಿಗಳಾದ ಚಂದ್ರ ಶೇಖರ್ ಉಚ್ಚಿಲ್, ಮೋಹನ್ ದಾಸ್ ಬಂಗೇರ ವಾಮಂಜೂರು, ಕಾರ್ಯಕಾರಿ ಸದಸ್ಯರಾದ ನವೀನ್ ಸುವರ್ಣ, ಕಾನೂನು ಸಲಹೆಗಾರರಾದ ನವನೀತ್ ಹಿಂಗಾಣಿ, ನೇಮೋತ್ಸವ ಸಮಿತಿಯ ಉಪಾಧ್ಯಕ್ಷರಾದ ಹರೀಶ್ ಕೆ ಪೂಜಾರಿ, ರವೀಂದ್ರ ಬಂಗೇರ ಕೋಣಾಜೆ,ಕಾರ್ಯಾಲಯ ಸಮಿತಿಯ ರಾಮಚಂದ್ರ ದೇರಬೈಲ್, ಗೆಜ್ಜೆಗಿರಿ ಸುರತ್ಕಲ್ ವಲಯದ ಅಧ್ಯಕ್ಷರಾದ ಮಧುಸೂಧನ್ ಇಡ್ಯಾ, ಕಾರ್ಯ ದರ್ಶಿ ಲಕ್ಷ್ಮಣ್ ಇಡ್ಯಾ, ಗೌರವ ಸಲಹೆಗಾರರಾದ ನಾಗೇಶ್ ಬೈಕಂಪಾಡಿ, ಬಿರುವೆರ್ ಕುಡ್ಲ ಕೇಂದ್ರ ಸಮಿತಿ, ಯುವವಾಹಿನಿ ಕೇಂದ್ರ ಸಮಿತಿ, ಬಿಲ್ಲವ ಬ್ರಿಗೇಡ್ ಕೇಂದ್ರೀಯ ಮಂಡಳಿ, ಮಹಿಳಾ ಬಿಲ್ಲವ ವೇದಿಕೆಗಳು, ವಿವಿಧ ಶ್ರೀ ನಾರಾಯಣ ಗುರು ಬಿಲ್ಲವ ಸಂಘಗಳು ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ ಜಾತ್ರಾ ಮಹೋತ್ಸವಕ್ಕೆ ಸಂಪೂರ್ಣ ಸಹಕಾರದ ಭರವಸೆ ನೀಡಿದರು. ಶ್ರೀ ಕ್ಷೇತ್ರದ ವಕ್ತಾರರಾದ ರಾಜೇಂದ್ರ ಚಿಲಿಂಬಿ ಕಾರ್ಯಕ್ರಮ ನಿರೂಪಿಸಿದರು..


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »