TOP STORIES:

ಮಂಗಳೂರು ನಗರ, ಉಳ್ಳಾಲ, ಸುರತ್ಕಲ್-ಗುರುಪುರ ವಲಯಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ


ಸಂಘಟನಾತ್ಮಕವಾಗಿ ಪ್ರಚಾರ, ಸುವ್ಯವಸ್ತಿವಾಗಿ ಜಾತ್ರಾ ಮಹೋತ್ಸವ ನಡೆಸುವ ಬಗ್ಗೆ ಸಾಮೂಹಿಕ ಪಾಲ್ಗೊಳ್ಳುವಿಕೆಯಲ್ಲಿ ಯಶಸ್ವಿ ಸಭೆ

ದೇಯಿ ಬೈದೆತಿ- ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 3 ರಿಂದ 7 ರ ವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂಗಳೂರು ನಗರ, ಉಳ್ಳಾಲ, ಸುರತ್ಕಲ್, ಗುರುಪುರ ವಲಯಗಳ ವ್ಯಾಪ್ತಿಯಲ್ಲಿ ಆದಿತ್ಯವಾರ ಮಂಗಳೂರಿನ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಸಭಾಂಗಣದಲ್ಲಿ ಎಂ.ಪಿ. ಸಿಲ್ಕ್ ನ ಮಾಲಕರಾದ ಎಂ.ಪಿ. ದಿನೇಶ್ ಬಿಡುಗಡೆಗೊಳಿಸಿದರು.

ನೇಮೋತ್ಸವ ಸಮಿತಿ ಗೌರವಾಧ್ಯಕ್ಷರಾದ ಚಿತ್ತರಂಜನ್ ಕಂಕನಾಡಿ ಮಾರ್ಗದರ್ಶನದಲ್ಲಿ ಜರಗಿದ ಸಭೆಯಲ್ಲಿ ಆಮಂತ್ರಣ ಪತ್ರಿಕೆಯನ್ನು ಜಿಲ್ಲೆಗಳ ವ್ಯಾಪ್ತಿಯಲ್ಲಿ ಶ್ರೀ ಕ್ಷೇತ್ರದ ಭಕ್ತಾಭಿಮಾನಿಗಳಿಗೆ ಸ್ಥಳೀಯ ಸಮಾಜದ ಸಂಘ ಸಂಸ್ಥೆಗಳ ಮೂಲಕ ತಲುಪಿಸಿ ಅನ್ಯ ರಾಜ್ಯಗಳಲ್ಲಿ ಹಾಗೂ ವಿದೇಶಗಳಲ್ಲಿ ನೆಲೆಸಿರುವ ಭಕ್ತರಿಗೆ ಆಮಂತ್ರಣ ಪತ್ರಿಕೆಯನ್ನು ವಾಟ್ಸಾಪ್ ಹಾಗೂ ಇತರ ಆನ್ಲೈನ್ ಮಾಧ್ಯಮ ಗಳ ಮೂಲಕ ವಿಶ್ವಾದ್ಯಂತ ನೆಲೆಸಿರುವ ಶ್ರೀ ಕ್ಷೇತ್ರದ ಭಕ್ತಾಭಿಮಾನಿ ಗಳಿಗೆ ತಲುಪಿಸಿ ಈ ಮಹೋತ್ಸವಕ್ಕೆ ಆಮಂತ್ರಿಸಲು ತೀರ್ಮಾನಿಸಲಾಯಿತು. ಜಾತ್ರಾಮಹೋತ್ಸವದ ಹೊರೆಕಾಣಿಕೆ ಮೆರವಣಿಗೆ ಮಂಗಳೂರಿನಲ್ಲಿ ಮಾರ್ಚ್ 3 ಬೆಳಿಗ್ಗೆ 11ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರಾರಂಭಗೊಂಡು ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದ ಮೂಲಕ ಮಧ್ಯಾಹ್ನ 1ಕ್ಕೆ ಪುತ್ತೂರು ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸಂಘ ತಲುಪಿ ಅಲ್ಲಿಂದ ಮಧ್ಯಾಹ್ನ 2 ಕ್ಕೆ ವಿವಿಧೆಡೆ ಗಳಿಂದ ಆಗಮಿಸುವ ಹೊರೆಕಾಣಿಕೆ ಮೆರವಣಿಗೆ ಜೊತೆಯಾಗಿ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಹೊರಡುವುದು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಹಿಸಿ ಮಾತನಾಡಿದ ಕ್ಷೇತ್ರಾ ಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆ ಯವರು ಶ್ರೀ ಕ್ಷೇತ್ರ ಗೆಜ್ಜೆಗಿರಿ ವಿಶ್ವಬಿಲ್ಲವರ ಪಾಲ್ಗೊಳ್ಳುವಿಕೆಯಿಂದ ನಿರ್ಮಾಣ ಗೊಂಡ ಮಹಾ ಮಾತೆ ದೇಯಿ ಬೈದೆತಿ, ಕೋಟಿ ಚೆನ್ನಯರ ಪ್ರಮುಖ ಆರಾಧನಾ ಸ್ಥಳವಾಗಿದೆ. ವಿಶ್ವಬಿಲ್ಲವರು ತಮ್ಮ ಸಮರ್ಪಣಾ ಭಾವದಿಂದ ಶ್ರೀ ಕ್ಷೇತ್ರವನ್ನು ನಿರ್ಮಿಸಿದ್ದಾರೆ ಹಾಗೂ ಇಂದು ಜಾತಿ ಮತವನ್ನು ಮೀರಿ ಲಕ್ಷಾಂತರ ದೇಯಿ ಬೈದೆತಿ,ಕೋಟಿ ಚೆನ್ನಯರ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಇಲ್ಲಿಯ ಕಾರ್ಣಿಕ ಶಕ್ತಿಗಳ ಆಶೀರ್ವಾದ ವನ್ನು ಪಡೆಯುತ್ತಿದ್ದರೆ ಎಂದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಗೆಜ್ಜೆಗಿರಿ ಜಾತ್ರೋತ್ಸವದ ಗೌರವ ಸಲಹೆಗಾರರಾದ ಪದ್ಮರಾಜ್ ಆರ್ ಮಾತನಾಡಿ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಮತ್ತು ಹೊರೆಕಾಣಿಕೆ ತುಳುನಾಡಿನಲ್ಲಿ ಇತಿಹಾಸವನ್ನು ನಿರ್ಮಿಸಿದೆ ಜಾತ್ರಾ ಮಹೋತ್ಸವ ಕೂಡ ಬಹಳ ಶಿಸ್ತು ಮತ್ತು ಅಚ್ಚುಕಟ್ಟಾಗಿ ನಡೆಯಲಿದೆ ಎಂದರು.

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ ಪ್ರಾಸ್ತಾವಿಕವಾಗಿ ಮಾತನಾಡಿ ಪುತ್ತೂರು ಪ್ರದೇಶಕ್ಕೆ ಸೀಮಿತವಾಗಿದ್ದ ಪಡುಮಲೆಯ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ನಂತರ ಧಾರ್ಮಿಕತೆಯ ಜೊತೆ ಸಾಮಾಜಿಕ ಜಾಗ್ರತಿಯ ಮೂಲಕ ಜಿಲ್ಲೆ ರಾಜ್ಯ ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಪಡೆದ ಪರಮಪಾವನ ಪುಣ್ಯಕ್ಷೇತ್ರ ವಾಯಿತು ಎಂದರು.

ಕಾರ್ಯಕ್ರಮದಲ್ಲಿ ಜಾತ್ರೋತ್ಸವದ ಗೌರವ ಸಲಹೆಗಾರರಾದ ಸತ್ಯಜಿತ್ ಸುರತ್ಕಲ್, ನಮ್ಮ ಕುಡ್ಲದ ಲೀಲಾಕ್ಷ ಕರ್ಕೇರ,ವಸಂತ್ ಪೂಜಾರಿ ಅಧ್ಯಕ್ಷರು ಬಾಕಿಲ ಗರೋಡಿ, ಪ್ರೇಮ್ ಸನಿಲ್ ಅಧ್ಯಕ್ಷರು ಕನಕರ ಬೆಟ್ಟು ಗರೋಡಿ, ಜಯಾನಂದ ಎಂ ಅಧ್ಯಕ್ಷ ರು ಗುರು ಚಾರಿಟೇಬಲ್ ಟ್ರಸ್ಟ್, ಭರತೇಶ್ ಅಧ್ಯಕ್ಷರು ಕಂಕನಾಡಿ ಬಿಲ್ಲವ ಸಂಘ, ದಿನೇಶ್ ಅಂಚನ್ ಅಧ್ಯಕ್ಷರು ಜಪ್ಪಿನಮೊಗೇರು ಬಿಲ್ಲವ ಸಂಘ, ಪುರುಷೋತ್ತಮ ಪೂಜಾರಿ ಅಧ್ಯಕ್ಷರು ಶ್ರೀ ನಾರಾಯಣ ಗುರು ಸಂಘ ಕೋಡಿಕಲ್, ಚಂದ್ರಶೇಖರ್ ಅಧ್ಯಕ್ಷ ರು ಕಾವೂರು ಬಿಲ್ಲವ ಸಂಘ, ಕೃಷ್ಣಪ್ಪ ಪೂಜಾರಿ ಅಧ್ಯಕ್ಷರು ಮಂಗಳಾ ದೇವಿ ಬಿಲ್ಲವ ಸಂಘ, ಯೋಗಿಶ್ ಅಧ್ಯಕ್ಷರು ಸತ್ತಿಕಲ್ಲು ಬಿಲ್ಲವ ಸಂಘ, ಉಮಾನಾಥ್ ನೀರ್ ಮಾರ್ಗ ಬಿಲ್ಲವ ಸಂಘ, ವಿವೇಕ್ ಕೋಟ್ಯಾನ್ ಸುರತ್ಕಲ್ ಅಧ್ಯಕ್ಷರು ಯುವವಾಹಿನಿ ಘಟಕ, ಸುನೀತಾ ಅಧ್ಯಕ್ಷರು ಯುವವಾಹಿನಿ ಮಹಿಳಾ ಘಟಕ ಮಂಗಳೂರು, ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷ ರಾದ ನಯನ ಸುರೇಶ್, ಕಾರ್ಪೊರೇಟರ್ ಗಳಾದ ಸಂದೀಪ್ ಗರೋಡಿ, ಅನಿಲ್ ಪೂಜಾರಿ ಪಂಜಿಮುಗೇರು, ಪ್ರಮುಖರಾದ ಕಮಲಾಕ್ಷ ಬೋಳಾರ್, ಭಾಸ್ಕರ್ ಉಪ್ಪಳಿಗೆ, ಕ್ಷೇತ್ರಾಡಳಿತ ಸಮಿತಿಯ ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಗುರುಪುರ , ಕಾರ್ಯದರ್ಶಿಗಳಾದ ಚಂದ್ರ ಶೇಖರ್ ಉಚ್ಚಿಲ್, ಮೋಹನ್ ದಾಸ್ ಬಂಗೇರ ವಾಮಂಜೂರು, ಕಾರ್ಯಕಾರಿ ಸದಸ್ಯರಾದ ನವೀನ್ ಸುವರ್ಣ, ಕಾನೂನು ಸಲಹೆಗಾರರಾದ ನವನೀತ್ ಹಿಂಗಾಣಿ, ನೇಮೋತ್ಸವ ಸಮಿತಿಯ ಉಪಾಧ್ಯಕ್ಷರಾದ ಹರೀಶ್ ಕೆ ಪೂಜಾರಿ, ರವೀಂದ್ರ ಬಂಗೇರ ಕೋಣಾಜೆ,ಕಾರ್ಯಾಲಯ ಸಮಿತಿಯ ರಾಮಚಂದ್ರ ದೇರಬೈಲ್, ಗೆಜ್ಜೆಗಿರಿ ಸುರತ್ಕಲ್ ವಲಯದ ಅಧ್ಯಕ್ಷರಾದ ಮಧುಸೂಧನ್ ಇಡ್ಯಾ, ಕಾರ್ಯ ದರ್ಶಿ ಲಕ್ಷ್ಮಣ್ ಇಡ್ಯಾ, ಗೌರವ ಸಲಹೆಗಾರರಾದ ನಾಗೇಶ್ ಬೈಕಂಪಾಡಿ, ಬಿರುವೆರ್ ಕುಡ್ಲ ಕೇಂದ್ರ ಸಮಿತಿ, ಯುವವಾಹಿನಿ ಕೇಂದ್ರ ಸಮಿತಿ, ಬಿಲ್ಲವ ಬ್ರಿಗೇಡ್ ಕೇಂದ್ರೀಯ ಮಂಡಳಿ, ಮಹಿಳಾ ಬಿಲ್ಲವ ವೇದಿಕೆಗಳು, ವಿವಿಧ ಶ್ರೀ ನಾರಾಯಣ ಗುರು ಬಿಲ್ಲವ ಸಂಘಗಳು ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ ಜಾತ್ರಾ ಮಹೋತ್ಸವಕ್ಕೆ ಸಂಪೂರ್ಣ ಸಹಕಾರದ ಭರವಸೆ ನೀಡಿದರು. ಶ್ರೀ ಕ್ಷೇತ್ರದ ವಕ್ತಾರರಾದ ರಾಜೇಂದ್ರ ಚಿಲಿಂಬಿ ಕಾರ್ಯಕ್ರಮ ನಿರೂಪಿಸಿದರು..


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »