TOP STORIES:

ಮಂಗಳೂರು ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ: ಅಶಕ್ತ ಕುಟುಂಬಗಳಿಗೆ ಸಹಾಯ ಧನ ವಿತರಣೆ


ಮಂಗಳೂರು ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ ” ಸ್ಪಂದನ ಯೋಜನೆ” ವತಿಯಿಂದ ಅಶಕ್ತ ಮೂರು ಕುಟುಂಬಗಳಿಗೆ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಸಹಾಯ ಧನ ವಿತರಣಾ ಕಾರ್ಯಕ್ರಮ ಮಂಗಳೂರಿನ ಕುದ್ರೋಳಿ ಗೋಕರ್ಣ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಕಳೆದ 6 ವರ್ಷಗಳಲ್ಲಿ ಒಂದು ಕೋಟಿ ಎಪ್ಪತ್ತು ಲಕ್ಷಕ್ಕೂ ಮಿಕ್ಕಿ ಧನ ಸಹಾಯ ಅನಾರೋಗ್ಯ ಪೀಡಿತ ಕುಟುಂಬಕ್ಕೆ ಹಸ್ತಾಂತರಗೊಂಡಿದೆ.
ನಾಗುರಿ ಮಜಾಲ್ ನಿವಾಸಿ ಲೋಕೇಶ್ ಅವರಿಗೆ ಸೊಂಟದ ಮೂಳೆ ಮುರಿತ ಹಾಗೂ ಒಂದು ಕಾಲು ಕಳೆದುಕೊಂಡವರಿಗೆ 50 ಸಾವಿರ ಸಹಾಯ ಹಸ್ತ.

ಬಜಾಲ್ ನಿವಾಸಿ ಪುರಂದರ ಅವರು ಕಿಡ್ನಿ ಮೂತ್ರ ಪಿಂಡ ವೈಫಲ್ಯ ಎರಡೂ ಕಾಲು ಕಳೆದುಕೊಂಡಿರುತ್ತಾರೆ ಇವರಿಗೆ 50 ಸಾವಿರದ ಸಹಾಯ ಹಸ್ತ.

ಪಿಲಿಕುಳ ಎದುರು ಪದವು ನಿವಾಸಿ ಬದ್ರುದ್ದೀನ್ ಮೂತ್ರ ಪಿಂಡ ವೈಫಲ್ಯದಿಂದ ಬಳಲುತ್ತಿದ್ದು ಇವರಿಗೆ 50 ಸಾವಿರ ಧನ ಸಹಾಯ.

ಕಾರ್ಯಕ್ರಮಕ್ಕೆ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು. ಜಿಲ್ಲೆಯ ಜನತೆಗೆ ಬಿರವೆರ್ ಕುಡ್ಲ ಸಂಘಟನೆಯ ಸೇವೆ ಬಹು ದೊಡ್ಡ ಕೊಡುಗೆ. ಈ ಸಂಘಟನೆಯ ಜಿಲ್ಲೆಯ ಇತರ ಸಂಘ ಸಂಸ್ಥೆಗಳಿಗೆ ಮಾದರಿ ಈ ಸಂಘ ಕಳೆದ ಹಲವು ವರ್ಷದ ಅವಧಿಯಲ್ಲಿ ಒಂದುವರೆ ಕೋಟಿಗೂ ಅಧಿಕ ಮೊತ್ತದ ಸಹಾಯ ಅಸ್ತ ನೀಡುತ್ತಿದ್ದು ಶ್ಲಾಘನೀಯ ಕಾರ್ಯ ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ ಈ ಸಂಘಟನೆಯಿಂದಾಗಲಿ ಎಂದವರು ಹೇಳಿದರು.

ಈ ಸಂದರ್ಭದಲ್ಲಿ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ .ವೈ ಭರತ್ ಶೆಟ್ಟಿ, ಮಂಗಳೂರು ಮೇಯರ್ ದಿವಾಕರ್ ಪಾಂಡೇಶ್ವರ್, ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್ ಸಾಯಿ ರಾಮ್,ಮೂಡ ಅಧ್ಯಕ್ಷ ರವಿ ಶಂಕರ್ ಮಿಜಾರ್,ರವೀಂದ್ರ ನಿಕಮ್,ಲತೀಶ್ ಬಲ್ಲಾಳ್ ಭಾಗ್,ಬಾಬಾ ಅಲಂಕಾರ್,ಸೂರಜ್ ಕಲ್ಯ,ಲಿಖಿತ್ ಕೋಟ್ಯಾನ್,ಲೋಹಿತ್ ಗಟ್ಟಿ,ರೆನಿತ್ ರಾಜ್ ಅಶೋಕ್ ನಗರ,ಮನೋಜ್ ಶೆಟ್ಟಿ,ರಾಕೇಶ್ ಸಾಲಿಯಾನ್,ಅಮಿತ್ ರಾಜ್,ರಾಮ್ ಎಕ್ಕೂರು,ವಾಝಿ ಪದವಿನಂಗಡಿ,ಅಶ್ರಫ್ ಆಲಿ ಕಾರ್ಕಳ,ದಿನಿಲ್ ಬಲ್ಲಾಳ್ ಭಾಗ್,ಸುರೇಶ್ ಬಲ್ಲಾಳ್ ಭಾಗ್,ರೋಷನ್ ಬಲ್ಲಾಳ್ ಭಾಗ್,ಕಿಶೋರ್ ಬಾಬು ಕೋಡಿಕಲ್,ಪ್ರಾಣೇಶ್ ಬಂಗೇರ,ಕಿರಣ್ ಉರ್ವ,ಯಶ್ವಿನ್ ಪೂಜಾರಿ,ರಕ್ಷಿತ್ ಮೂಲ್ಕಿ, ಮುಂತಾದ ಪ್ರಾಮುಖ ಸದಸ್ಯರು ಮತ್ತು ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

 


Related Posts

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »