TOP STORIES:

FOLLOW US

ಮಂಗಳೂರು : ಮುಂದಿನ ಮೇಯರ್ ಆಗಿ ಬಿಲ್ಲವ ಮುಖಂಡ ಜಯಾನಂದ್ ಅಂಚನ್ ಸೂಕ್ತ ಆಯ್ಕೆ…


ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಅವಧಿ ಮಾರ್ಚ್ 2ರಂದು ಮುಕ್ತಾಯವಾಗಲಿದ್ದು ಮುಂದಿನ ಮೇಯರ್ ಸ್ಥಾನಯಾರಿಗೆ ಒಲಿಯಲಿದೆ ಎಂಬ ಚರ್ಚೆ ಈಗಾಗಲೇ ಆರಂಭವಾಗಿದೆ.

ಪಾಲಿಕೆ ಆಡಳಿತ ಚುಕ್ಕಾಣಿಯನ್ನು ಬಿಜೆಪಿ ಹಿಡಿದ ಮೇಲೆ ಮೊದಲನೇ ಅವಧಿಗೆ ದಿವಾಕರ ಪಾಂಡೇಶ್ವರ ಅವರು ಮೇಯರ್ ಆದರೆ೨ನೇ ಅವಧಿಗೆ ಬಂಟ ಸಮುದಾಯದ ಪ್ರೇಮಾನಂದ ಶೆಟ್ಟಿ ಅಧಿಕಾರ ನಡೆಸುತ್ತಿದ್ದಾರೆ. ಆರಂಭದಲ್ಲಿ ಮೇಯರ್ ಸ್ಥಾನಗಳುಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಾಲಾದರೆ ಬಾರಿ ಮೇಯರ್ ಸ್ಥಾನ ಅರ್ಹವಾಗಿಯೇ ಮಂಗಳೂರು ನಗರಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಿಗಬೇಕಿದೆ. ಕಳೆದ ಬಾರಿ ಮೇಯರ್ ಸ್ಥಾನ ಬಂಟ ಸಮುದಾಯಕ್ಕೆ ದೊರೆತು ಅದರಂತೆ ಪ್ರೇಮಾನಂದಶೆಟ್ಟಿ ಸ್ಥಾನ ಅಲಂಕರಿಸಿದರು. ಬಾರಿ ಮೇಯರ್ ಸ್ಥಾನ ನ್ಯಾಯವಾಗಿ ಬಿಲ್ಲವ ಸಮಾಜದ ಮುಖಂಡರಿಗೆ  ಸಿಗಬೇಕಿದೆ. ೨೦೨೩ರ ಚುನಾವಣಾ ದೃಷ್ಟಿಯಿಂದ ಬಿಲ್ಲವ ಮತಗಳನ್ನು ಸೆಳೆಯಲೂ ಇದು ಸಹಕಾರಿಯಾಗಬಹುದು. ಉತ್ತರ ವಿಧಾನಸಭಾಕ್ಷೇತ್ರದಲ್ಲಿ ಹಲವು ಬಿಲ್ಲವ ಮುಖಂಡರು ಪಾಲಿಕೆ ಸದಸ್ಯರಾಗಿದ್ದರೂ ಪಾಲಿಕೆಯ ಹಿರಿಯ ಸದಸ್ಯ ಜಯಾನಂದ ಅಂಚನ್ಮುಂಚೂಣಿಯಲ್ಲಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಗೆ ಬಾರಿ ಸದಸ್ಯರಾಗಿ ಆಯ್ಕೆಯಾಗಿರುವ ಇವರು ಯಾವುದೇ ಅಧಿಕಾರಕ್ಕಾಗಿ ಲಾಬಿನಡೆಸಿದವರಲ್ಲ. ಯಾವುದೇ ಸ್ಥಾಯಿ ಸಮಿತಿಯಲ್ಲೂ ಸ್ಥಾನಕ್ಕಾಗಿ ಆಸೆ ಪಟ್ಟವರಲ್ಲ. ಮಂಗಳೂರು ಮಹಾನಗರ ಪಾಲಿಕೆಯ ೨೨ನೇಕದ್ರಿ ಪದವು ವಾರ್ಡ್ನ ಸದಸ್ಯರಾಗಿ ಆಯ್ಕೆಯಾದ ಬಳಿಕ  ತಮ್ಮ ವಾರ್ಡ್ನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮೂಲಕಎಲ್ಲರ ಮೆಚ್ಚುಗೆಗೂ ಜಯಾನಂದ ಅಂಚನ್ ಪಾತ್ರರಾಗಿದ್ದಾರೆ. ವಾರ್ಡ್ನಲ್ಲಿನ ಜನರಿಗೆ ಯಾವುದೇ ಸಮಸ್ಯೆ ಬಂದರೂ ಸೂಕ್ತರೀತಿಯಲ್ಲಿ ಸ್ಪಂದಿಸಿ ಪರಿಹಾರ ಕಲ್ಪಿಸುವ ನಾಯಕತ್ವ ಗುಣ ಜಯಾನಂದ ಅಂಚನ್ ಅವರಿಗಿದೆ. ಜನರಿಂದ ಜನರಿಗಾಗಿ ಎಂಬನಾಯಕತ್ವ ಗುಣ ಹೊಂದಿರುವ, ಪಕ್ಷದ ತತ್ವ ಸಿದ್ಧಾಂತಗಳನ್ನು ಎತ್ತಿ ಹಿಡಿಯುವ ಜಯಾನಂದ ಅಂಚನ್ ಅವರೇ ಬಾರಿ ಮೇಯರ್ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಬಿಜೆಪಿ ಮುಖಂಡರು ಜಯಾನಂದ ಅಂಚನ್ ಅವರಿಗೆ ಮೇಯರ್ ಸ್ಥಾನ ನೀಡುವ ಮೂಲಕ ಪಕ್ಷದಲ್ಲಿ ನಂಬಿಕಸ್ಥ ಸದಸ್ಯರಿಗೆಸ್ಥಾನಮಾನ ನೀಡುತ್ತದೆ ಎಂಬುದನ್ನು ಬಾರಿ ನಿರೂಪಿಸಬೇಕಿದೆ. ಬಿಲ್ಲವ ಸಮುದಾಯದ ಮುಖಂಡರಿಗೆ ಬಾರಿ ಮೇಯರ್ಸ್ಥಾನ ನೀಡದೇ ಹೋದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಲ್ಲವರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ. ಬಿಲ್ಲವರಿಗೆನಾಯಕತ್ವ ಗುಣ ಇದೆ ಎಂಬುದನ್ನು ಬಿಜೆಪಿ ಒಪ್ಪಿ ಅವರಿಗೂ ಸೂಕ್ತ ಸ್ಥಾನಮಾನ ನೀಡಬೇಕಿದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »