TOP STORIES:

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಮರು ನಾಮಕರಣವಾಗಲಿ: ಬಿಲ್ಲವರ ಮಹಾಮಂಡಲ


ಮುಲ್ಕಿ: ಉಭಯ ಜಿಲ್ಲೆಗಳಲ್ಲಿ ಬಹುಸಂಖ್ಯಾತರಾಗಿರುವ ಬಿಲ್ಲವ ಮತ್ತು ಈಡಿಗ ಸಮುದಾಯ ಸಾಮಾಜಿಕ ನ್ಯಾಯದಿಂದ ವಂಚಿತರಾಗುತ್ತಿದ್ದು, ಈ ಬಗ್ಗೆ ಉಡುಪಿಯಲ್ಲಿ ಜರುಗಿದ ಬೃಹತ್ ಬಿಲ್ಲವ ಸಮಾವೇಶದಲ್ಲಿ ಬಿಲ್ಲವ- ಈಡಿಗ ಸಮಾಜದ ಸಾಮಾಜಿಕ ಶೈಕ್ಷಣಿಕ ಔದ್ಯೋಗಿಕ ಅಭಿವೃದ್ಧಿಗೆ ಪೂರಕವಾಗಿ ಬಿಲ್ಲವ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕೆಂಬ ನಿರ್ಣಯದ ಜೊತೆ ಸಮಾಜದ ಅಭಿವೃದ್ಧಿಗೆ ಕೆಲ ನಿರ್ಣಯಗಳನ್ನು ತೆಗೆದುಕೊಂಡು ಸರಕಾರಕ್ಕೆ ಸಲ್ಲಿಸಲಾಗಿತ್ತು. ಆದರೆ, ಸರಕಾರ ನಮ್ಮ ಸಮಾಜದ ನಿರ್ಣಯ ಮತ್ತು ಬೇಡಿಕೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ರಾಜಶೇಖರ ಕೋಟ್ಯಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಮಾತನಾಡಿ, ಕೂಡಲೇ ಸರಕಾರ ಬಿಲ್ಲವ ಈಡಿಗ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ ಸಮಾಜದ ಬಡವರು, ಹಿಂದುಳಿದವರಿಗೆ ಅನುಕೂಲ ಮಾಡಿ ಕೊಡಬೇಕು.

ತುಳುನಾಡಿನ ಸಮಸ್ತ ಜನರ ಹಲವು ವರ್ಷಗಳ ಆಗ್ರಹದಂತೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯರ ಹೆಸರನ್ನು ಇಡಬೇಕೆಂದು ಅಂದಿನ ಬಜಪೆಯ ಮಳವೂರು ಗ್ರಾಪಂ ಮತ್ತು ದ. ಕ. ಜಿಪಂ ಜನವರಿ 2019 ರ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ತೆಗೆದುಕೊಂಡ ಸರ್ವಾನುಮತದ ತೀರ್ಮಾನದಂತೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಮರುನಾಮಕರಣ ಮಾಡಬೇಕೆಂಬ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಲು ನಿರ್ಣಯ ಕೈಗೊಂಡು ಸರಕಾರಕ್ಕೆ ಮುಂದಿನ ಕ್ರಮಗಳಿಗೆ ಕಳುಹಿಸಿಕೊಡಲಾಯಿತು.

ಜಿಪಂ ನಿರ್ಣಯ ಕೈಗೊಂಡು ವಿಧಾನ ಮಂಡಲದ 4 ಅಧಿವೇಶನ ಕಳೆದು ಹೋಯಿತು. ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ , ಕೋಟಿ ಚೆನ್ನಯ ಹೆಸರಿನ ಮರುನಾಮಕರಣದ ಬಗ್ಗೆ ವಿಧಾನ ಮಂಡಲದಲ್ಲಿ ಈ ಬಗ್ಗೆ ಪ್ರಶ್ನೆ ಕೂಡ ಕೇಳಿದ್ದರು. ಆದರೆ, ರಾಜ್ಯ ಸರಕಾರ ನಿರ್ಣಯ ಕೈಗೊಂಡು ಕೇಂದ್ರ ಸರಕಾರಕ್ಕೆ ಸಲ್ಲಿಕೆಯಾಗಬೇಕಾದ ಪ್ರಸ್ತಾಪ ಈಗ ಕೂಡ ಕಡತದಲ್ಲಿ ಬಾಕಿಯಾಗಿದೆ. ಉಭಯ ಜಿಲ್ಲೆಗಳ ಶಾಸಕರು ಈ ಪ್ರಸ್ತಾಪ ಬಗ್ಗೆ ಕ್ಯಾಬಿನೆಟ್ ನಲ್ಲಿ ನಿರ್ಣಯ ಕೈಗೊಳ್ಳುವಂತೆ ಒತ್ತಡ ಹೇರಿ ವಿಧಾನ ಮಂಡಲದಲ್ಲಿ ಮಾತನಾಡಿ ಮುಂದಿನ ಕ್ರಮಕ್ಕೆ ಕೇಂದ್ರ ಸರಕಾರಕ್ಕೆ ಸಲ್ಲಿಕೆಯಾಗಿ ತುಳುನಾಡಿನ ವೀರ ಪುರುಷರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡಬೇಕೆಂದು ಒತ್ತಾಯ ಮಾಡುತ್ತೇವೆ ಹಾಗೂ ಈ ಬಗ್ಗೆ ವಿಳಂಬ ನೀತಿ ಅನುಸರಿಸಿದರೆ ಮುಂದಿನ ದಿನಗಳಲ್ಲಿ ತುಳುನಾಡಿನ ಸರ್ವ ಜಾತಿ ಧರ್ಮದ ಬಂಧುಗಳನ್ನು ಸೇರಿಸಿಕೊಂಡು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ವತಿಯಿಂದ ತೀವ್ರ ಹೋರಾಟ ಸಂಘಟಿಸಲಾಗುವುದು ಎಂದು ಡಾ. ರಾಜಶೇಖರ್ ಕೋಟ್ಯಾನ್ ಪಬ್ಲಿಕ್ ನೆಕ್ಸ್ಟ್ ಗೆ ತಿಳಿಸಿದ್ದಾರೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »