TOP STORIES:

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಮರು ನಾಮಕರಣವಾಗಲಿ: ಬಿಲ್ಲವರ ಮಹಾಮಂಡಲ


ಮುಲ್ಕಿ: ಉಭಯ ಜಿಲ್ಲೆಗಳಲ್ಲಿ ಬಹುಸಂಖ್ಯಾತರಾಗಿರುವ ಬಿಲ್ಲವ ಮತ್ತು ಈಡಿಗ ಸಮುದಾಯ ಸಾಮಾಜಿಕ ನ್ಯಾಯದಿಂದ ವಂಚಿತರಾಗುತ್ತಿದ್ದು, ಈ ಬಗ್ಗೆ ಉಡುಪಿಯಲ್ಲಿ ಜರುಗಿದ ಬೃಹತ್ ಬಿಲ್ಲವ ಸಮಾವೇಶದಲ್ಲಿ ಬಿಲ್ಲವ- ಈಡಿಗ ಸಮಾಜದ ಸಾಮಾಜಿಕ ಶೈಕ್ಷಣಿಕ ಔದ್ಯೋಗಿಕ ಅಭಿವೃದ್ಧಿಗೆ ಪೂರಕವಾಗಿ ಬಿಲ್ಲವ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕೆಂಬ ನಿರ್ಣಯದ ಜೊತೆ ಸಮಾಜದ ಅಭಿವೃದ್ಧಿಗೆ ಕೆಲ ನಿರ್ಣಯಗಳನ್ನು ತೆಗೆದುಕೊಂಡು ಸರಕಾರಕ್ಕೆ ಸಲ್ಲಿಸಲಾಗಿತ್ತು. ಆದರೆ, ಸರಕಾರ ನಮ್ಮ ಸಮಾಜದ ನಿರ್ಣಯ ಮತ್ತು ಬೇಡಿಕೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ರಾಜಶೇಖರ ಕೋಟ್ಯಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಮಾತನಾಡಿ, ಕೂಡಲೇ ಸರಕಾರ ಬಿಲ್ಲವ ಈಡಿಗ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ ಸಮಾಜದ ಬಡವರು, ಹಿಂದುಳಿದವರಿಗೆ ಅನುಕೂಲ ಮಾಡಿ ಕೊಡಬೇಕು.

ತುಳುನಾಡಿನ ಸಮಸ್ತ ಜನರ ಹಲವು ವರ್ಷಗಳ ಆಗ್ರಹದಂತೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯರ ಹೆಸರನ್ನು ಇಡಬೇಕೆಂದು ಅಂದಿನ ಬಜಪೆಯ ಮಳವೂರು ಗ್ರಾಪಂ ಮತ್ತು ದ. ಕ. ಜಿಪಂ ಜನವರಿ 2019 ರ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ತೆಗೆದುಕೊಂಡ ಸರ್ವಾನುಮತದ ತೀರ್ಮಾನದಂತೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಮರುನಾಮಕರಣ ಮಾಡಬೇಕೆಂಬ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಲು ನಿರ್ಣಯ ಕೈಗೊಂಡು ಸರಕಾರಕ್ಕೆ ಮುಂದಿನ ಕ್ರಮಗಳಿಗೆ ಕಳುಹಿಸಿಕೊಡಲಾಯಿತು.

ಜಿಪಂ ನಿರ್ಣಯ ಕೈಗೊಂಡು ವಿಧಾನ ಮಂಡಲದ 4 ಅಧಿವೇಶನ ಕಳೆದು ಹೋಯಿತು. ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ , ಕೋಟಿ ಚೆನ್ನಯ ಹೆಸರಿನ ಮರುನಾಮಕರಣದ ಬಗ್ಗೆ ವಿಧಾನ ಮಂಡಲದಲ್ಲಿ ಈ ಬಗ್ಗೆ ಪ್ರಶ್ನೆ ಕೂಡ ಕೇಳಿದ್ದರು. ಆದರೆ, ರಾಜ್ಯ ಸರಕಾರ ನಿರ್ಣಯ ಕೈಗೊಂಡು ಕೇಂದ್ರ ಸರಕಾರಕ್ಕೆ ಸಲ್ಲಿಕೆಯಾಗಬೇಕಾದ ಪ್ರಸ್ತಾಪ ಈಗ ಕೂಡ ಕಡತದಲ್ಲಿ ಬಾಕಿಯಾಗಿದೆ. ಉಭಯ ಜಿಲ್ಲೆಗಳ ಶಾಸಕರು ಈ ಪ್ರಸ್ತಾಪ ಬಗ್ಗೆ ಕ್ಯಾಬಿನೆಟ್ ನಲ್ಲಿ ನಿರ್ಣಯ ಕೈಗೊಳ್ಳುವಂತೆ ಒತ್ತಡ ಹೇರಿ ವಿಧಾನ ಮಂಡಲದಲ್ಲಿ ಮಾತನಾಡಿ ಮುಂದಿನ ಕ್ರಮಕ್ಕೆ ಕೇಂದ್ರ ಸರಕಾರಕ್ಕೆ ಸಲ್ಲಿಕೆಯಾಗಿ ತುಳುನಾಡಿನ ವೀರ ಪುರುಷರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡಬೇಕೆಂದು ಒತ್ತಾಯ ಮಾಡುತ್ತೇವೆ ಹಾಗೂ ಈ ಬಗ್ಗೆ ವಿಳಂಬ ನೀತಿ ಅನುಸರಿಸಿದರೆ ಮುಂದಿನ ದಿನಗಳಲ್ಲಿ ತುಳುನಾಡಿನ ಸರ್ವ ಜಾತಿ ಧರ್ಮದ ಬಂಧುಗಳನ್ನು ಸೇರಿಸಿಕೊಂಡು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ವತಿಯಿಂದ ತೀವ್ರ ಹೋರಾಟ ಸಂಘಟಿಸಲಾಗುವುದು ಎಂದು ಡಾ. ರಾಜಶೇಖರ್ ಕೋಟ್ಯಾನ್ ಪಬ್ಲಿಕ್ ನೆಕ್ಸ್ಟ್ ಗೆ ತಿಳಿಸಿದ್ದಾರೆ.


Related Posts

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »