TOP STORIES:

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಮರು ನಾಮಕರಣವಾಗಲಿ: ಬಿಲ್ಲವರ ಮಹಾಮಂಡಲ


ಮುಲ್ಕಿ: ಉಭಯ ಜಿಲ್ಲೆಗಳಲ್ಲಿ ಬಹುಸಂಖ್ಯಾತರಾಗಿರುವ ಬಿಲ್ಲವ ಮತ್ತು ಈಡಿಗ ಸಮುದಾಯ ಸಾಮಾಜಿಕ ನ್ಯಾಯದಿಂದ ವಂಚಿತರಾಗುತ್ತಿದ್ದು, ಈ ಬಗ್ಗೆ ಉಡುಪಿಯಲ್ಲಿ ಜರುಗಿದ ಬೃಹತ್ ಬಿಲ್ಲವ ಸಮಾವೇಶದಲ್ಲಿ ಬಿಲ್ಲವ- ಈಡಿಗ ಸಮಾಜದ ಸಾಮಾಜಿಕ ಶೈಕ್ಷಣಿಕ ಔದ್ಯೋಗಿಕ ಅಭಿವೃದ್ಧಿಗೆ ಪೂರಕವಾಗಿ ಬಿಲ್ಲವ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕೆಂಬ ನಿರ್ಣಯದ ಜೊತೆ ಸಮಾಜದ ಅಭಿವೃದ್ಧಿಗೆ ಕೆಲ ನಿರ್ಣಯಗಳನ್ನು ತೆಗೆದುಕೊಂಡು ಸರಕಾರಕ್ಕೆ ಸಲ್ಲಿಸಲಾಗಿತ್ತು. ಆದರೆ, ಸರಕಾರ ನಮ್ಮ ಸಮಾಜದ ನಿರ್ಣಯ ಮತ್ತು ಬೇಡಿಕೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ರಾಜಶೇಖರ ಕೋಟ್ಯಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಮಾತನಾಡಿ, ಕೂಡಲೇ ಸರಕಾರ ಬಿಲ್ಲವ ಈಡಿಗ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ ಸಮಾಜದ ಬಡವರು, ಹಿಂದುಳಿದವರಿಗೆ ಅನುಕೂಲ ಮಾಡಿ ಕೊಡಬೇಕು.

ತುಳುನಾಡಿನ ಸಮಸ್ತ ಜನರ ಹಲವು ವರ್ಷಗಳ ಆಗ್ರಹದಂತೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯರ ಹೆಸರನ್ನು ಇಡಬೇಕೆಂದು ಅಂದಿನ ಬಜಪೆಯ ಮಳವೂರು ಗ್ರಾಪಂ ಮತ್ತು ದ. ಕ. ಜಿಪಂ ಜನವರಿ 2019 ರ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ತೆಗೆದುಕೊಂಡ ಸರ್ವಾನುಮತದ ತೀರ್ಮಾನದಂತೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಮರುನಾಮಕರಣ ಮಾಡಬೇಕೆಂಬ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಲು ನಿರ್ಣಯ ಕೈಗೊಂಡು ಸರಕಾರಕ್ಕೆ ಮುಂದಿನ ಕ್ರಮಗಳಿಗೆ ಕಳುಹಿಸಿಕೊಡಲಾಯಿತು.

ಜಿಪಂ ನಿರ್ಣಯ ಕೈಗೊಂಡು ವಿಧಾನ ಮಂಡಲದ 4 ಅಧಿವೇಶನ ಕಳೆದು ಹೋಯಿತು. ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ , ಕೋಟಿ ಚೆನ್ನಯ ಹೆಸರಿನ ಮರುನಾಮಕರಣದ ಬಗ್ಗೆ ವಿಧಾನ ಮಂಡಲದಲ್ಲಿ ಈ ಬಗ್ಗೆ ಪ್ರಶ್ನೆ ಕೂಡ ಕೇಳಿದ್ದರು. ಆದರೆ, ರಾಜ್ಯ ಸರಕಾರ ನಿರ್ಣಯ ಕೈಗೊಂಡು ಕೇಂದ್ರ ಸರಕಾರಕ್ಕೆ ಸಲ್ಲಿಕೆಯಾಗಬೇಕಾದ ಪ್ರಸ್ತಾಪ ಈಗ ಕೂಡ ಕಡತದಲ್ಲಿ ಬಾಕಿಯಾಗಿದೆ. ಉಭಯ ಜಿಲ್ಲೆಗಳ ಶಾಸಕರು ಈ ಪ್ರಸ್ತಾಪ ಬಗ್ಗೆ ಕ್ಯಾಬಿನೆಟ್ ನಲ್ಲಿ ನಿರ್ಣಯ ಕೈಗೊಳ್ಳುವಂತೆ ಒತ್ತಡ ಹೇರಿ ವಿಧಾನ ಮಂಡಲದಲ್ಲಿ ಮಾತನಾಡಿ ಮುಂದಿನ ಕ್ರಮಕ್ಕೆ ಕೇಂದ್ರ ಸರಕಾರಕ್ಕೆ ಸಲ್ಲಿಕೆಯಾಗಿ ತುಳುನಾಡಿನ ವೀರ ಪುರುಷರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡಬೇಕೆಂದು ಒತ್ತಾಯ ಮಾಡುತ್ತೇವೆ ಹಾಗೂ ಈ ಬಗ್ಗೆ ವಿಳಂಬ ನೀತಿ ಅನುಸರಿಸಿದರೆ ಮುಂದಿನ ದಿನಗಳಲ್ಲಿ ತುಳುನಾಡಿನ ಸರ್ವ ಜಾತಿ ಧರ್ಮದ ಬಂಧುಗಳನ್ನು ಸೇರಿಸಿಕೊಂಡು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ವತಿಯಿಂದ ತೀವ್ರ ಹೋರಾಟ ಸಂಘಟಿಸಲಾಗುವುದು ಎಂದು ಡಾ. ರಾಜಶೇಖರ್ ಕೋಟ್ಯಾನ್ ಪಬ್ಲಿಕ್ ನೆಕ್ಸ್ಟ್ ಗೆ ತಿಳಿಸಿದ್ದಾರೆ.


Related Posts

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »