TOP STORIES:

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಮರು ನಾಮಕರಣವಾಗಲಿ: ಬಿಲ್ಲವರ ಮಹಾಮಂಡಲ


ಮುಲ್ಕಿ: ಉಭಯ ಜಿಲ್ಲೆಗಳಲ್ಲಿ ಬಹುಸಂಖ್ಯಾತರಾಗಿರುವ ಬಿಲ್ಲವ ಮತ್ತು ಈಡಿಗ ಸಮುದಾಯ ಸಾಮಾಜಿಕ ನ್ಯಾಯದಿಂದ ವಂಚಿತರಾಗುತ್ತಿದ್ದು, ಈ ಬಗ್ಗೆ ಉಡುಪಿಯಲ್ಲಿ ಜರುಗಿದ ಬೃಹತ್ ಬಿಲ್ಲವ ಸಮಾವೇಶದಲ್ಲಿ ಬಿಲ್ಲವ- ಈಡಿಗ ಸಮಾಜದ ಸಾಮಾಜಿಕ ಶೈಕ್ಷಣಿಕ ಔದ್ಯೋಗಿಕ ಅಭಿವೃದ್ಧಿಗೆ ಪೂರಕವಾಗಿ ಬಿಲ್ಲವ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕೆಂಬ ನಿರ್ಣಯದ ಜೊತೆ ಸಮಾಜದ ಅಭಿವೃದ್ಧಿಗೆ ಕೆಲ ನಿರ್ಣಯಗಳನ್ನು ತೆಗೆದುಕೊಂಡು ಸರಕಾರಕ್ಕೆ ಸಲ್ಲಿಸಲಾಗಿತ್ತು. ಆದರೆ, ಸರಕಾರ ನಮ್ಮ ಸಮಾಜದ ನಿರ್ಣಯ ಮತ್ತು ಬೇಡಿಕೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ರಾಜಶೇಖರ ಕೋಟ್ಯಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಮಾತನಾಡಿ, ಕೂಡಲೇ ಸರಕಾರ ಬಿಲ್ಲವ ಈಡಿಗ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ ಸಮಾಜದ ಬಡವರು, ಹಿಂದುಳಿದವರಿಗೆ ಅನುಕೂಲ ಮಾಡಿ ಕೊಡಬೇಕು.

ತುಳುನಾಡಿನ ಸಮಸ್ತ ಜನರ ಹಲವು ವರ್ಷಗಳ ಆಗ್ರಹದಂತೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯರ ಹೆಸರನ್ನು ಇಡಬೇಕೆಂದು ಅಂದಿನ ಬಜಪೆಯ ಮಳವೂರು ಗ್ರಾಪಂ ಮತ್ತು ದ. ಕ. ಜಿಪಂ ಜನವರಿ 2019 ರ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ತೆಗೆದುಕೊಂಡ ಸರ್ವಾನುಮತದ ತೀರ್ಮಾನದಂತೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಮರುನಾಮಕರಣ ಮಾಡಬೇಕೆಂಬ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಲು ನಿರ್ಣಯ ಕೈಗೊಂಡು ಸರಕಾರಕ್ಕೆ ಮುಂದಿನ ಕ್ರಮಗಳಿಗೆ ಕಳುಹಿಸಿಕೊಡಲಾಯಿತು.

ಜಿಪಂ ನಿರ್ಣಯ ಕೈಗೊಂಡು ವಿಧಾನ ಮಂಡಲದ 4 ಅಧಿವೇಶನ ಕಳೆದು ಹೋಯಿತು. ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ , ಕೋಟಿ ಚೆನ್ನಯ ಹೆಸರಿನ ಮರುನಾಮಕರಣದ ಬಗ್ಗೆ ವಿಧಾನ ಮಂಡಲದಲ್ಲಿ ಈ ಬಗ್ಗೆ ಪ್ರಶ್ನೆ ಕೂಡ ಕೇಳಿದ್ದರು. ಆದರೆ, ರಾಜ್ಯ ಸರಕಾರ ನಿರ್ಣಯ ಕೈಗೊಂಡು ಕೇಂದ್ರ ಸರಕಾರಕ್ಕೆ ಸಲ್ಲಿಕೆಯಾಗಬೇಕಾದ ಪ್ರಸ್ತಾಪ ಈಗ ಕೂಡ ಕಡತದಲ್ಲಿ ಬಾಕಿಯಾಗಿದೆ. ಉಭಯ ಜಿಲ್ಲೆಗಳ ಶಾಸಕರು ಈ ಪ್ರಸ್ತಾಪ ಬಗ್ಗೆ ಕ್ಯಾಬಿನೆಟ್ ನಲ್ಲಿ ನಿರ್ಣಯ ಕೈಗೊಳ್ಳುವಂತೆ ಒತ್ತಡ ಹೇರಿ ವಿಧಾನ ಮಂಡಲದಲ್ಲಿ ಮಾತನಾಡಿ ಮುಂದಿನ ಕ್ರಮಕ್ಕೆ ಕೇಂದ್ರ ಸರಕಾರಕ್ಕೆ ಸಲ್ಲಿಕೆಯಾಗಿ ತುಳುನಾಡಿನ ವೀರ ಪುರುಷರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡಬೇಕೆಂದು ಒತ್ತಾಯ ಮಾಡುತ್ತೇವೆ ಹಾಗೂ ಈ ಬಗ್ಗೆ ವಿಳಂಬ ನೀತಿ ಅನುಸರಿಸಿದರೆ ಮುಂದಿನ ದಿನಗಳಲ್ಲಿ ತುಳುನಾಡಿನ ಸರ್ವ ಜಾತಿ ಧರ್ಮದ ಬಂಧುಗಳನ್ನು ಸೇರಿಸಿಕೊಂಡು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ವತಿಯಿಂದ ತೀವ್ರ ಹೋರಾಟ ಸಂಘಟಿಸಲಾಗುವುದು ಎಂದು ಡಾ. ರಾಜಶೇಖರ್ ಕೋಟ್ಯಾನ್ ಪಬ್ಲಿಕ್ ನೆಕ್ಸ್ಟ್ ಗೆ ತಿಳಿಸಿದ್ದಾರೆ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »