TOP STORIES:

FOLLOW US

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಮರು ನಾಮಕರಣವಾಗಲಿ: ಬಿಲ್ಲವರ ಮಹಾಮಂಡಲ


ಮುಲ್ಕಿ: ಉಭಯ ಜಿಲ್ಲೆಗಳಲ್ಲಿ ಬಹುಸಂಖ್ಯಾತರಾಗಿರುವ ಬಿಲ್ಲವ ಮತ್ತು ಈಡಿಗ ಸಮುದಾಯ ಸಾಮಾಜಿಕ ನ್ಯಾಯದಿಂದ ವಂಚಿತರಾಗುತ್ತಿದ್ದು, ಈ ಬಗ್ಗೆ ಉಡುಪಿಯಲ್ಲಿ ಜರುಗಿದ ಬೃಹತ್ ಬಿಲ್ಲವ ಸಮಾವೇಶದಲ್ಲಿ ಬಿಲ್ಲವ- ಈಡಿಗ ಸಮಾಜದ ಸಾಮಾಜಿಕ ಶೈಕ್ಷಣಿಕ ಔದ್ಯೋಗಿಕ ಅಭಿವೃದ್ಧಿಗೆ ಪೂರಕವಾಗಿ ಬಿಲ್ಲವ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕೆಂಬ ನಿರ್ಣಯದ ಜೊತೆ ಸಮಾಜದ ಅಭಿವೃದ್ಧಿಗೆ ಕೆಲ ನಿರ್ಣಯಗಳನ್ನು ತೆಗೆದುಕೊಂಡು ಸರಕಾರಕ್ಕೆ ಸಲ್ಲಿಸಲಾಗಿತ್ತು. ಆದರೆ, ಸರಕಾರ ನಮ್ಮ ಸಮಾಜದ ನಿರ್ಣಯ ಮತ್ತು ಬೇಡಿಕೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ರಾಜಶೇಖರ ಕೋಟ್ಯಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಮಾತನಾಡಿ, ಕೂಡಲೇ ಸರಕಾರ ಬಿಲ್ಲವ ಈಡಿಗ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ ಸಮಾಜದ ಬಡವರು, ಹಿಂದುಳಿದವರಿಗೆ ಅನುಕೂಲ ಮಾಡಿ ಕೊಡಬೇಕು.

ತುಳುನಾಡಿನ ಸಮಸ್ತ ಜನರ ಹಲವು ವರ್ಷಗಳ ಆಗ್ರಹದಂತೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯರ ಹೆಸರನ್ನು ಇಡಬೇಕೆಂದು ಅಂದಿನ ಬಜಪೆಯ ಮಳವೂರು ಗ್ರಾಪಂ ಮತ್ತು ದ. ಕ. ಜಿಪಂ ಜನವರಿ 2019 ರ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ತೆಗೆದುಕೊಂಡ ಸರ್ವಾನುಮತದ ತೀರ್ಮಾನದಂತೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಮರುನಾಮಕರಣ ಮಾಡಬೇಕೆಂಬ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಲು ನಿರ್ಣಯ ಕೈಗೊಂಡು ಸರಕಾರಕ್ಕೆ ಮುಂದಿನ ಕ್ರಮಗಳಿಗೆ ಕಳುಹಿಸಿಕೊಡಲಾಯಿತು.

ಜಿಪಂ ನಿರ್ಣಯ ಕೈಗೊಂಡು ವಿಧಾನ ಮಂಡಲದ 4 ಅಧಿವೇಶನ ಕಳೆದು ಹೋಯಿತು. ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ , ಕೋಟಿ ಚೆನ್ನಯ ಹೆಸರಿನ ಮರುನಾಮಕರಣದ ಬಗ್ಗೆ ವಿಧಾನ ಮಂಡಲದಲ್ಲಿ ಈ ಬಗ್ಗೆ ಪ್ರಶ್ನೆ ಕೂಡ ಕೇಳಿದ್ದರು. ಆದರೆ, ರಾಜ್ಯ ಸರಕಾರ ನಿರ್ಣಯ ಕೈಗೊಂಡು ಕೇಂದ್ರ ಸರಕಾರಕ್ಕೆ ಸಲ್ಲಿಕೆಯಾಗಬೇಕಾದ ಪ್ರಸ್ತಾಪ ಈಗ ಕೂಡ ಕಡತದಲ್ಲಿ ಬಾಕಿಯಾಗಿದೆ. ಉಭಯ ಜಿಲ್ಲೆಗಳ ಶಾಸಕರು ಈ ಪ್ರಸ್ತಾಪ ಬಗ್ಗೆ ಕ್ಯಾಬಿನೆಟ್ ನಲ್ಲಿ ನಿರ್ಣಯ ಕೈಗೊಳ್ಳುವಂತೆ ಒತ್ತಡ ಹೇರಿ ವಿಧಾನ ಮಂಡಲದಲ್ಲಿ ಮಾತನಾಡಿ ಮುಂದಿನ ಕ್ರಮಕ್ಕೆ ಕೇಂದ್ರ ಸರಕಾರಕ್ಕೆ ಸಲ್ಲಿಕೆಯಾಗಿ ತುಳುನಾಡಿನ ವೀರ ಪುರುಷರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡಬೇಕೆಂದು ಒತ್ತಾಯ ಮಾಡುತ್ತೇವೆ ಹಾಗೂ ಈ ಬಗ್ಗೆ ವಿಳಂಬ ನೀತಿ ಅನುಸರಿಸಿದರೆ ಮುಂದಿನ ದಿನಗಳಲ್ಲಿ ತುಳುನಾಡಿನ ಸರ್ವ ಜಾತಿ ಧರ್ಮದ ಬಂಧುಗಳನ್ನು ಸೇರಿಸಿಕೊಂಡು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ವತಿಯಿಂದ ತೀವ್ರ ಹೋರಾಟ ಸಂಘಟಿಸಲಾಗುವುದು ಎಂದು ಡಾ. ರಾಜಶೇಖರ್ ಕೋಟ್ಯಾನ್ ಪಬ್ಲಿಕ್ ನೆಕ್ಸ್ಟ್ ಗೆ ತಿಳಿಸಿದ್ದಾರೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »