TOP STORIES:

FOLLOW US

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಮರು ನಾಮಕರಣವಾಗಲಿ: ಬಿಲ್ಲವರ ಮಹಾಮಂಡಲ


ಮುಲ್ಕಿ: ಉಭಯ ಜಿಲ್ಲೆಗಳಲ್ಲಿ ಬಹುಸಂಖ್ಯಾತರಾಗಿರುವ ಬಿಲ್ಲವ ಮತ್ತು ಈಡಿಗ ಸಮುದಾಯ ಸಾಮಾಜಿಕ ನ್ಯಾಯದಿಂದ ವಂಚಿತರಾಗುತ್ತಿದ್ದು, ಈ ಬಗ್ಗೆ ಉಡುಪಿಯಲ್ಲಿ ಜರುಗಿದ ಬೃಹತ್ ಬಿಲ್ಲವ ಸಮಾವೇಶದಲ್ಲಿ ಬಿಲ್ಲವ- ಈಡಿಗ ಸಮಾಜದ ಸಾಮಾಜಿಕ ಶೈಕ್ಷಣಿಕ ಔದ್ಯೋಗಿಕ ಅಭಿವೃದ್ಧಿಗೆ ಪೂರಕವಾಗಿ ಬಿಲ್ಲವ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕೆಂಬ ನಿರ್ಣಯದ ಜೊತೆ ಸಮಾಜದ ಅಭಿವೃದ್ಧಿಗೆ ಕೆಲ ನಿರ್ಣಯಗಳನ್ನು ತೆಗೆದುಕೊಂಡು ಸರಕಾರಕ್ಕೆ ಸಲ್ಲಿಸಲಾಗಿತ್ತು. ಆದರೆ, ಸರಕಾರ ನಮ್ಮ ಸಮಾಜದ ನಿರ್ಣಯ ಮತ್ತು ಬೇಡಿಕೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ರಾಜಶೇಖರ ಕೋಟ್ಯಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಮಾತನಾಡಿ, ಕೂಡಲೇ ಸರಕಾರ ಬಿಲ್ಲವ ಈಡಿಗ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ ಸಮಾಜದ ಬಡವರು, ಹಿಂದುಳಿದವರಿಗೆ ಅನುಕೂಲ ಮಾಡಿ ಕೊಡಬೇಕು.

ತುಳುನಾಡಿನ ಸಮಸ್ತ ಜನರ ಹಲವು ವರ್ಷಗಳ ಆಗ್ರಹದಂತೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯರ ಹೆಸರನ್ನು ಇಡಬೇಕೆಂದು ಅಂದಿನ ಬಜಪೆಯ ಮಳವೂರು ಗ್ರಾಪಂ ಮತ್ತು ದ. ಕ. ಜಿಪಂ ಜನವರಿ 2019 ರ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ತೆಗೆದುಕೊಂಡ ಸರ್ವಾನುಮತದ ತೀರ್ಮಾನದಂತೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಮರುನಾಮಕರಣ ಮಾಡಬೇಕೆಂಬ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಲು ನಿರ್ಣಯ ಕೈಗೊಂಡು ಸರಕಾರಕ್ಕೆ ಮುಂದಿನ ಕ್ರಮಗಳಿಗೆ ಕಳುಹಿಸಿಕೊಡಲಾಯಿತು.

ಜಿಪಂ ನಿರ್ಣಯ ಕೈಗೊಂಡು ವಿಧಾನ ಮಂಡಲದ 4 ಅಧಿವೇಶನ ಕಳೆದು ಹೋಯಿತು. ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ , ಕೋಟಿ ಚೆನ್ನಯ ಹೆಸರಿನ ಮರುನಾಮಕರಣದ ಬಗ್ಗೆ ವಿಧಾನ ಮಂಡಲದಲ್ಲಿ ಈ ಬಗ್ಗೆ ಪ್ರಶ್ನೆ ಕೂಡ ಕೇಳಿದ್ದರು. ಆದರೆ, ರಾಜ್ಯ ಸರಕಾರ ನಿರ್ಣಯ ಕೈಗೊಂಡು ಕೇಂದ್ರ ಸರಕಾರಕ್ಕೆ ಸಲ್ಲಿಕೆಯಾಗಬೇಕಾದ ಪ್ರಸ್ತಾಪ ಈಗ ಕೂಡ ಕಡತದಲ್ಲಿ ಬಾಕಿಯಾಗಿದೆ. ಉಭಯ ಜಿಲ್ಲೆಗಳ ಶಾಸಕರು ಈ ಪ್ರಸ್ತಾಪ ಬಗ್ಗೆ ಕ್ಯಾಬಿನೆಟ್ ನಲ್ಲಿ ನಿರ್ಣಯ ಕೈಗೊಳ್ಳುವಂತೆ ಒತ್ತಡ ಹೇರಿ ವಿಧಾನ ಮಂಡಲದಲ್ಲಿ ಮಾತನಾಡಿ ಮುಂದಿನ ಕ್ರಮಕ್ಕೆ ಕೇಂದ್ರ ಸರಕಾರಕ್ಕೆ ಸಲ್ಲಿಕೆಯಾಗಿ ತುಳುನಾಡಿನ ವೀರ ಪುರುಷರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡಬೇಕೆಂದು ಒತ್ತಾಯ ಮಾಡುತ್ತೇವೆ ಹಾಗೂ ಈ ಬಗ್ಗೆ ವಿಳಂಬ ನೀತಿ ಅನುಸರಿಸಿದರೆ ಮುಂದಿನ ದಿನಗಳಲ್ಲಿ ತುಳುನಾಡಿನ ಸರ್ವ ಜಾತಿ ಧರ್ಮದ ಬಂಧುಗಳನ್ನು ಸೇರಿಸಿಕೊಂಡು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ವತಿಯಿಂದ ತೀವ್ರ ಹೋರಾಟ ಸಂಘಟಿಸಲಾಗುವುದು ಎಂದು ಡಾ. ರಾಜಶೇಖರ್ ಕೋಟ್ಯಾನ್ ಪಬ್ಲಿಕ್ ನೆಕ್ಸ್ಟ್ ಗೆ ತಿಳಿಸಿದ್ದಾರೆ.


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »