TOP STORIES:

‘ಮಂಗಳೂರು ವಿಮಾನ ನಿಲ್ದಾಣ ಇನ್ಮುಂದೆ ಕೋಟಿ ಚೆನ್ನಯ ಏರ್‌‌ಪೋರ್ಟ್’ – ಬೋರ್ಡ್ ಹಾಕಿಸಿದ ಮಿಥುನ್‌ ರೈ


ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 50 ವರ್ಷಗಳ ಕಾಲ ಅದಾನಿ ಕಂಪನಿಗೆ ಹಸ್ತಾಂತರಗೊಳಿಸಿದ ಬಳಿಕ ವಿಮಾನ ನಿಲ್ದಾಣದ ನಾಮಫಲಕದಲ್ಲಿ ಅದಾನಿ ಏರ್‌‌ಪೋರ್ಟ್ ಎಂದು ಸೇರಿಸಲಾಗಿದೆ.

ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಮಿಥುನ್‌ ರೈ ಅವರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಹೆಸರು ಇಡಲು ಒತ್ತಾಯ ಮಾಡುತ್ತಲ್ಲೇ ಇದ್ದಾರೆ.

ಈ ನಡುವೆ ಈಗ ಮಿಥುನ್‌ ರೈ ಅವರು ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ನಾಮಕರಣದ ಬೋರ್ಡ್ ಹಾಕಿಸಿದ್ದಾರೆ. ಹಾಗೆಯೇ, ”ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇನ್ಮುಂದೆ ಕೋಟಿ ಚೆನ್ನಯ ಇಂಟರ್‌ ನ್ಯಾಷನಲ್‌ ಏರ್‌ಪೋರ್ಟ್ ಎಂದು ಕರೆಯಲಾಗುತ್ತದೆ” ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ನೀವು ನಮ್ಮ ಮಾತನ್ನು ಕೇಳುವುದಿಲ್ಲವೇ? ತುಳುವರ ಭಾವನೆಗಳಿಗೆ ನೀವು ಗಮನ ನೀಡುವುದಿಲ್ಲವೇ? ನಮ್ಮ ನಗರದಲ್ಲಿ ಅದಾನಿ ಏರ್‌ಪೋರ್ಟ್ಸ್ ಬೋರ್ಡ್‌ಗಳನ್ನು ಹಾಕಲು ನಾವು ಒಪ್ಪುವುದಿಲ್ಲ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇನ್ಮುಂದೆ ಕೋಟಿ ಚೆನ್ನಯ ಇಂಟರ್‌ ನ್ಯಾಷನಲ್‌ ಏರ್‌ಪೋರ್ಟ್ ಎಂದು ಕರೆಯಲಾಗುತ್ತದೆ” ಎಂದು ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಅದಾನಿ ಹೆಸರು ಇಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ರೂಪದಲ್ಲಿ ಈ ಬೋರ್ಡ್ ಹಾಕಲಾಗಿದೆ. ವಿಮಾನ ನಿಲ್ದಾಣಕ್ಕೆ ತೆರಳುವ ಕೆಂಜಾರು ಸಮೀಪದಲ್ಲಿ ಸುಸ್ವಾಗತ ಕೋಟಿ-ಚೆನ್ನಯ ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಎಂದು ಹಾಕಲಾಗಿದ್ದು ಕೆಳ ಭಾಗದಲ್ಲಿ ಮಿಥುನ್‌ ರೈ ಅವರ ಭಾವಚಿತ್ರವೂ ಇದೆ.


Related Posts

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »