TOP STORIES:

ಮಂಗಳೂರು: ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ನಿರಂತರ 18 ಗಂಟೆಗಳ ಪ್ರಯತ್ನದಲ್ಲಿ 900 ಕೆಜಿ ಧಾನ್ಯಗಳಿಂದ ಬೃಹತ್ ತಿರಂಗ ಸೃಷ್ಟಿ


ಮಂಗಳೂರು: ಬಾರಿ ನಾವು ದೇಶ ಸ್ವಾತಂತ್ರ್ಯ ಅಮೃತೋತ್ಸವದ ಸಡಗರದಲ್ಲಿದೆ. ಗಲ್ಲಿಗಲ್ಲಿಗಳಲ್ಲಿ ತಿರಂಗ ರಾರಾಜಿಸುತ್ತಿದೆ. ಶ್ರೀಕ್ಷೇತ್ರ ಕುದ್ರೋಳಿಯ ರಾಜಗೋಪುರದ ಮುಂಭಾಗದ ನೆಲದಲ್ಲಿ ಮೂಡಿರುವ 900 ಕೆಜಿ ಧಾನ್ಯಗಳ ಬೃಹತ್ ತಿರಂಗ ಭಕ್ತರಗಮನಸೆಳೆಯಿತು. ಬೃಹತ್ ತಿರಂಗ 38 ಫೀಟ್ ಅಗಲವನ್ನು ಹೊಂದಿದೆ. ತಲಾ 300 ಕೆಜಿ ಮಸ್ಸೂರು ದಾಲ್, ಸಬ್ಬಕ್ಕಿ, ಹೆಸರು ಕಾಳುಗಳನ್ನುಬಳಸಲಾಗಿದೆ. ಫೋಮ್ ನಲ್ಲಿ ರಚಿಸಿರುವ ಅಶೋಕ ಚಕ್ರ 8ಫೀಟ್ ಅಗಲವಿದೆ. ಅಲ್ಲದೆ ತಿರಂಗದ ಅಲಂಕಾರಕ್ಕೆ 54 ಕಲಶ, 138 ಬಾಳೆ ಎಲೆಯಲ್ಲಿ ಅಕ್ಕಿ ಎಳೆಯಡಿಕೆ, ಚೆಂಡು ಹೂಗಳನ್ನು ಬಳಸಲಾಗಿದೆ. ಜೊತೆಗೆ ಕ್ಯಾರೆಟ್, ಮೂಲಂಗಿ, ಬೆಂಡೆಯಿಂದ ಮಾಡಿರುವ75 ಅಕ್ಷರದಲ್ಲೂ ತಿರಂಗದ ಕಲ್ಪನೆಯನ್ನು ಮೂಡಿಸಲಾಗಿದೆ.ಫೋಟೋ ಜರ್ನಲಿಸ್ಟ್ ಸತೀಶ್ ಇರಾ ಅವರ ಪರಿಕಲ್ಪನೆ ಹಾಗೂ ಖ್ಯಾತ ಫೋಟೋ ಗ್ರಾಫರ್, ಕಲಾವಿದ ಪುನೀಕ್ ಶೆಟ್ಟಿಯವರಕೈಚಳದಲ್ಲಿ ಬೃಹತ್ ತಿರಂಗವು ಅದ್ಭುತವಾಗಿ ಮೂಡಿ ಬಂದಿದೆ. ಶ್ರೀಕ್ಷೇತ್ರದ ಗುರು ಬೆಳದಿಂಗಳು ಹಾಗೂ ಗೋಕರ್ಣನಾಥಸೇವಾದಳ ತಂಡ ಸಹಕರಿಸಿದೆ. .13 ಮಧ್ಯಾಹ್ನದಿಂದಲೇ ತಿರಂಗ ರಚನೆಗೆ ಸಾಮಾಗ್ರಿಗಳನ್ನು ಖರೀದಿಸಲಾಗಿದೆ. ರಾತ್ರಿ 9ರಿಂದತಿರಂಗದ ಸ್ಕೆಚ್ ತಯಾರಿಸಲಾಗಿದ್ದು, .14 ಬೆಳಗ್ಗೆ 11 ವೇಳೆಗೆ ತಿರಂಗ ಸಂಪೂರ್ಣಗೊಂಡಿದೆ. ಇಂದು ಬೆಳಗ್ಗೆ ಸ್ವಲ್ಪ ಮಳೆಬಂದರೂ ಅದೃಷ್ಟವಶಾತ್ ತಿರಂಗ ಹಾಳಾಗದಿರುವುದು ವಿಶೇಷವೆನಿಸಿದೆ. ಕೇಂದ್ರದ ಮಾಜಿ ಸಚಿವ, ಶ್ರೀಕ್ಷೇತ್ರ ಕುದ್ರೋಳಿಯಅಭಿವೃದ್ಧಿ ರೂವಾರಿ ಜನಾರ್ದನ ಪೂಜಾರಿಯವರು ಬೃಹತ್ ತಿರಂಗವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »