TOP STORIES:

ಮಂಗಳೂರು 48 ಲಕ್ಷ ರೂ. ವೆಚ್ಚದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಶಿಲಾನ್ಯಾಸ


ಮಂಗಳೂರು, ಜು 24 : ಇಂಧನ, ಕನ್ನಡ ಹಾಗೂ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಜು. 24ರ ಭಾನುವಾರದಂದು ನಗರದ ಲೇಡಿಹಿಲ್ ಶಾಲೆಯ ಬಳಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಹಭಾಗಿತ್ವದೊಂದಿಗೆ ಸುಮಾರು 48 ಲಕ್ಷ ರೂ. ವೆಚ್ಚದಲ್ಲಿ ಒಂದು ಸುಂದರವಾದ ನಾರಾಯಣ ಗುರು ವೃತ್ತ ಮಾಡಬೇಕೆಂದು ತೀರ್ಮಾನಿಸಿದ್ದು, ಅದರಂತೆ ಇಂದು ಶಂಕುಸ್ಥಾಪನೆಯಾಗಿದೆ. ನಾರಾಯಣಗುರುಗಳು ಪಾದಸ್ಪರ್ಶ ಮಾಡಿದ ಮಂಗಳೂರಿಗೆ ಒಂದು ವಿಶೇಷವಾದ ಆಯಾಮವನ್ನು ನೀಡಬೇಕೆಂದು ಮುಡಾ ಮತ್ತು ಸ್ಥಳೀಯ ಶಾಸಕರು, ಜನಪ್ರತಿನಿಧಿಗಳ ಸಹಕಾರದೊಂದಿಗೆ ಒಂದು ವಿಶೇಷವಾದ ಅಭಿವೃದ್ದಿ ಚಟುವಟಿಕೆಗೆ ಇವತ್ತಿನಿಂದ ಚಾಲನೆ ಕೊಡುತ್ತಿದ್ದೇವೆ. ನಾರಾಯಣ ಗುರುಗಳ ಹೆಸರಿನ ಮುಖಾಂತರ ಸಮಾಜದಲ್ಲಿ ಸಾಮರಸ್ಯ ನಿರ್ಮಾಣವಾಗಬೇಕು. ಅವರ ಹೆಸರು ಬಳಕೆ ಮಾಡುವ ಮುಖಾಂತರ ಮಂಗಳೂರಿನ ಅಭಿವೃದ್ದಿಗೆ ಹೊಸ ಆಯಾಮ ನೀಡುವ ಪ್ರಯತ್ನ ನಡೆಯಲಿದೆ. ಪಾಲಿಕೆ, ಮುಡಾ, ಬಿಜೆಪಿಯು ಗುರುಗಳನ್ನು ವಿಶಿಷ್ಟವಾಗಿ ಕಣ್ಮುಂದೆ ಇಟ್ಟುಕೊಂಡು ಅವರ ಆದರ್ಶಗಳನ್ನು ವಿವಿಧ ಆಯಾಮಗಳಲ್ಲಿ ಪ್ರಕಟಿಸುವ ಪ್ರಯತ್ನ ಮಾಡಲಿದೆ ಎಂದರು.

ಮನೆಗಳಲ್ಲಿ ಹಾರಾಡಲಿ ರಾಷ್ಟ್ರಧ್ವಜ
ವೃತ್ತವನ್ನು ನವರಾತ್ರಿ ವೇಳೆಗೆ ಲೋಕಾರ್ಪಣೆಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡಲಾಗುವುದು. ಹಣಕಾಸಿನ ನೆರವನ್ನು ನೀಡಲಾಗಿದ್ದು, ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಲಾಗುವುದು ಎಂದವರು ತಿಳಿಸಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ವಿಶೇಷ ಅಭಿಯಾನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದೆ. ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆಗಳನ್ನು ಜನ ಮಾನಸಕ್ಕೆ ತಲುಪಿಸುವ ಪ್ರಯತ್ನವನ್ನು ಈ ತಿಂಗಳು ಪೂರ್ತಿ ಮಾಡುತ್ತಿದ್ದೇವೆ. ವಿವಿಧ ಭಾಗಗಳಲ್ಲಿ ರಂಗಾಯಣದ ಮುಖಾಂತರ ನಾಟಕ, ಚಲನಚಿತ್ರ ಪ್ರದರ್ಶನ, ಕರಪತ್ರ ಹಂಚಿಕೆ, ರಥಯಾತ್ರೆ ಮಾಡಲಿದ್ದೇವೆ. ಆಗಸ್ಟ್‌ 12ರಿಂದ ಎಲ್ಲರ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವ ಸಂಕಲ್ಪವನ್ನು ಪ್ರತಿಯೊಬ್ಬರೂ ಮಾಡಬೇಕು. ಪ್ಲಾಸ್ಟಿಕ್ ರಾಷ್ಟ್ರಧ್ವಜವನ್ನು ಬಳಕೆ ಮಾಡದೆ, ಖಾದಿ, ಕಾಟನ್ ಬಟ್ಟೆಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದರು.

ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮುಡಾ ನಿಕಟಪೂರ್ವ ಅಧ್ಯಕ್ಷ ರವಿಶಂಕರ್‍ ಮಿಜಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ಉದಯ್ ಪೂಜಾರಿ, ಬಿರುವೆರ್ ಕುಡ್ಲ ಸ್ಥಾಪಕರು ,ಮಾಜಿ ಮೇಯರ್‍ ದಿವಾಕರ ಪಾಂಡೇಶ್ವರ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್  ಮತ್ತಿತರರು ಉಪಸ್ಥಿತರಿದ್ದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »