TOP STORIES:

FOLLOW US

ಮಂಗಳೂರು 48 ಲಕ್ಷ ರೂ. ವೆಚ್ಚದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಶಿಲಾನ್ಯಾಸ


ಮಂಗಳೂರು, ಜು 24 : ಇಂಧನ, ಕನ್ನಡ ಹಾಗೂ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಜು. 24ರ ಭಾನುವಾರದಂದು ನಗರದ ಲೇಡಿಹಿಲ್ ಶಾಲೆಯ ಬಳಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಹಭಾಗಿತ್ವದೊಂದಿಗೆ ಸುಮಾರು 48 ಲಕ್ಷ ರೂ. ವೆಚ್ಚದಲ್ಲಿ ಒಂದು ಸುಂದರವಾದ ನಾರಾಯಣ ಗುರು ವೃತ್ತ ಮಾಡಬೇಕೆಂದು ತೀರ್ಮಾನಿಸಿದ್ದು, ಅದರಂತೆ ಇಂದು ಶಂಕುಸ್ಥಾಪನೆಯಾಗಿದೆ. ನಾರಾಯಣಗುರುಗಳು ಪಾದಸ್ಪರ್ಶ ಮಾಡಿದ ಮಂಗಳೂರಿಗೆ ಒಂದು ವಿಶೇಷವಾದ ಆಯಾಮವನ್ನು ನೀಡಬೇಕೆಂದು ಮುಡಾ ಮತ್ತು ಸ್ಥಳೀಯ ಶಾಸಕರು, ಜನಪ್ರತಿನಿಧಿಗಳ ಸಹಕಾರದೊಂದಿಗೆ ಒಂದು ವಿಶೇಷವಾದ ಅಭಿವೃದ್ದಿ ಚಟುವಟಿಕೆಗೆ ಇವತ್ತಿನಿಂದ ಚಾಲನೆ ಕೊಡುತ್ತಿದ್ದೇವೆ. ನಾರಾಯಣ ಗುರುಗಳ ಹೆಸರಿನ ಮುಖಾಂತರ ಸಮಾಜದಲ್ಲಿ ಸಾಮರಸ್ಯ ನಿರ್ಮಾಣವಾಗಬೇಕು. ಅವರ ಹೆಸರು ಬಳಕೆ ಮಾಡುವ ಮುಖಾಂತರ ಮಂಗಳೂರಿನ ಅಭಿವೃದ್ದಿಗೆ ಹೊಸ ಆಯಾಮ ನೀಡುವ ಪ್ರಯತ್ನ ನಡೆಯಲಿದೆ. ಪಾಲಿಕೆ, ಮುಡಾ, ಬಿಜೆಪಿಯು ಗುರುಗಳನ್ನು ವಿಶಿಷ್ಟವಾಗಿ ಕಣ್ಮುಂದೆ ಇಟ್ಟುಕೊಂಡು ಅವರ ಆದರ್ಶಗಳನ್ನು ವಿವಿಧ ಆಯಾಮಗಳಲ್ಲಿ ಪ್ರಕಟಿಸುವ ಪ್ರಯತ್ನ ಮಾಡಲಿದೆ ಎಂದರು.

ಮನೆಗಳಲ್ಲಿ ಹಾರಾಡಲಿ ರಾಷ್ಟ್ರಧ್ವಜ
ವೃತ್ತವನ್ನು ನವರಾತ್ರಿ ವೇಳೆಗೆ ಲೋಕಾರ್ಪಣೆಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡಲಾಗುವುದು. ಹಣಕಾಸಿನ ನೆರವನ್ನು ನೀಡಲಾಗಿದ್ದು, ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಲಾಗುವುದು ಎಂದವರು ತಿಳಿಸಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ವಿಶೇಷ ಅಭಿಯಾನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದೆ. ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆಗಳನ್ನು ಜನ ಮಾನಸಕ್ಕೆ ತಲುಪಿಸುವ ಪ್ರಯತ್ನವನ್ನು ಈ ತಿಂಗಳು ಪೂರ್ತಿ ಮಾಡುತ್ತಿದ್ದೇವೆ. ವಿವಿಧ ಭಾಗಗಳಲ್ಲಿ ರಂಗಾಯಣದ ಮುಖಾಂತರ ನಾಟಕ, ಚಲನಚಿತ್ರ ಪ್ರದರ್ಶನ, ಕರಪತ್ರ ಹಂಚಿಕೆ, ರಥಯಾತ್ರೆ ಮಾಡಲಿದ್ದೇವೆ. ಆಗಸ್ಟ್‌ 12ರಿಂದ ಎಲ್ಲರ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವ ಸಂಕಲ್ಪವನ್ನು ಪ್ರತಿಯೊಬ್ಬರೂ ಮಾಡಬೇಕು. ಪ್ಲಾಸ್ಟಿಕ್ ರಾಷ್ಟ್ರಧ್ವಜವನ್ನು ಬಳಕೆ ಮಾಡದೆ, ಖಾದಿ, ಕಾಟನ್ ಬಟ್ಟೆಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದರು.

ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮುಡಾ ನಿಕಟಪೂರ್ವ ಅಧ್ಯಕ್ಷ ರವಿಶಂಕರ್‍ ಮಿಜಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ಉದಯ್ ಪೂಜಾರಿ, ಬಿರುವೆರ್ ಕುಡ್ಲ ಸ್ಥಾಪಕರು ,ಮಾಜಿ ಮೇಯರ್‍ ದಿವಾಕರ ಪಾಂಡೇಶ್ವರ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್  ಮತ್ತಿತರರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »