TOP STORIES:

ಮಂಗಳೂರು 48 ಲಕ್ಷ ರೂ. ವೆಚ್ಚದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಶಿಲಾನ್ಯಾಸ


ಮಂಗಳೂರು, ಜು 24 : ಇಂಧನ, ಕನ್ನಡ ಹಾಗೂ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಜು. 24ರ ಭಾನುವಾರದಂದು ನಗರದ ಲೇಡಿಹಿಲ್ ಶಾಲೆಯ ಬಳಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಹಭಾಗಿತ್ವದೊಂದಿಗೆ ಸುಮಾರು 48 ಲಕ್ಷ ರೂ. ವೆಚ್ಚದಲ್ಲಿ ಒಂದು ಸುಂದರವಾದ ನಾರಾಯಣ ಗುರು ವೃತ್ತ ಮಾಡಬೇಕೆಂದು ತೀರ್ಮಾನಿಸಿದ್ದು, ಅದರಂತೆ ಇಂದು ಶಂಕುಸ್ಥಾಪನೆಯಾಗಿದೆ. ನಾರಾಯಣಗುರುಗಳು ಪಾದಸ್ಪರ್ಶ ಮಾಡಿದ ಮಂಗಳೂರಿಗೆ ಒಂದು ವಿಶೇಷವಾದ ಆಯಾಮವನ್ನು ನೀಡಬೇಕೆಂದು ಮುಡಾ ಮತ್ತು ಸ್ಥಳೀಯ ಶಾಸಕರು, ಜನಪ್ರತಿನಿಧಿಗಳ ಸಹಕಾರದೊಂದಿಗೆ ಒಂದು ವಿಶೇಷವಾದ ಅಭಿವೃದ್ದಿ ಚಟುವಟಿಕೆಗೆ ಇವತ್ತಿನಿಂದ ಚಾಲನೆ ಕೊಡುತ್ತಿದ್ದೇವೆ. ನಾರಾಯಣ ಗುರುಗಳ ಹೆಸರಿನ ಮುಖಾಂತರ ಸಮಾಜದಲ್ಲಿ ಸಾಮರಸ್ಯ ನಿರ್ಮಾಣವಾಗಬೇಕು. ಅವರ ಹೆಸರು ಬಳಕೆ ಮಾಡುವ ಮುಖಾಂತರ ಮಂಗಳೂರಿನ ಅಭಿವೃದ್ದಿಗೆ ಹೊಸ ಆಯಾಮ ನೀಡುವ ಪ್ರಯತ್ನ ನಡೆಯಲಿದೆ. ಪಾಲಿಕೆ, ಮುಡಾ, ಬಿಜೆಪಿಯು ಗುರುಗಳನ್ನು ವಿಶಿಷ್ಟವಾಗಿ ಕಣ್ಮುಂದೆ ಇಟ್ಟುಕೊಂಡು ಅವರ ಆದರ್ಶಗಳನ್ನು ವಿವಿಧ ಆಯಾಮಗಳಲ್ಲಿ ಪ್ರಕಟಿಸುವ ಪ್ರಯತ್ನ ಮಾಡಲಿದೆ ಎಂದರು.

ಮನೆಗಳಲ್ಲಿ ಹಾರಾಡಲಿ ರಾಷ್ಟ್ರಧ್ವಜ
ವೃತ್ತವನ್ನು ನವರಾತ್ರಿ ವೇಳೆಗೆ ಲೋಕಾರ್ಪಣೆಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡಲಾಗುವುದು. ಹಣಕಾಸಿನ ನೆರವನ್ನು ನೀಡಲಾಗಿದ್ದು, ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಲಾಗುವುದು ಎಂದವರು ತಿಳಿಸಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ವಿಶೇಷ ಅಭಿಯಾನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದೆ. ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆಗಳನ್ನು ಜನ ಮಾನಸಕ್ಕೆ ತಲುಪಿಸುವ ಪ್ರಯತ್ನವನ್ನು ಈ ತಿಂಗಳು ಪೂರ್ತಿ ಮಾಡುತ್ತಿದ್ದೇವೆ. ವಿವಿಧ ಭಾಗಗಳಲ್ಲಿ ರಂಗಾಯಣದ ಮುಖಾಂತರ ನಾಟಕ, ಚಲನಚಿತ್ರ ಪ್ರದರ್ಶನ, ಕರಪತ್ರ ಹಂಚಿಕೆ, ರಥಯಾತ್ರೆ ಮಾಡಲಿದ್ದೇವೆ. ಆಗಸ್ಟ್‌ 12ರಿಂದ ಎಲ್ಲರ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವ ಸಂಕಲ್ಪವನ್ನು ಪ್ರತಿಯೊಬ್ಬರೂ ಮಾಡಬೇಕು. ಪ್ಲಾಸ್ಟಿಕ್ ರಾಷ್ಟ್ರಧ್ವಜವನ್ನು ಬಳಕೆ ಮಾಡದೆ, ಖಾದಿ, ಕಾಟನ್ ಬಟ್ಟೆಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದರು.

ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮುಡಾ ನಿಕಟಪೂರ್ವ ಅಧ್ಯಕ್ಷ ರವಿಶಂಕರ್‍ ಮಿಜಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ಉದಯ್ ಪೂಜಾರಿ, ಬಿರುವೆರ್ ಕುಡ್ಲ ಸ್ಥಾಪಕರು ,ಮಾಜಿ ಮೇಯರ್‍ ದಿವಾಕರ ಪಾಂಡೇಶ್ವರ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್  ಮತ್ತಿತರರು ಉಪಸ್ಥಿತರಿದ್ದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »