TOP STORIES:

FOLLOW US

ಮನ್ಸೂನ್​ನಲ್ಲಿ ಕಾಡುತ್ತಿದ್ಯಾ ಕೀಲು ನೋವು; ಇಲ್ಲಿದೆ ಇದಕ್ಕೆ ಪರಿಹಾರ


ಬೆಂಗಳೂರು: ಮಳೆಗಾಲದಲ್ಲಿ ಕೆಲವು ಮಂದಿಗೆ ಕೀಲು ನೋವಿನ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಈ ಅವಧಿಯಲ್ಲಿ ನೋವು ಉಲ್ಬಣಗೊಳ್ಳಲು ನಿಖರವಾದ ಕಾರಣ ತಿಳಿದಿಲ್ಲ.

ಸಂಶೋಧನೆಗಳು ಕೂಡ ಈ ಬಗ್ಗೆ ಹೆಚ್ಚು ಸ್ಪಷ್ಟವಾಗಿ ತಿಳಿಸಿಲ್ಲ. ಮಳೆಗಾಲದಲ್ಲಿ ಈ ನೋವು ಹೆಚ್ಚು ಎಂದು ಕೆಲವು ಅಧ್ಯಯನಗಳು ವಾದಿಸಿದರೆ, ಮತ್ತೆ ಕೆಲವು ಅಧ್ಯಯನಗಳು ಈ ಆರೋಪವನ್ನು ತಳ್ಳಿಹಾಕುತ್ತದೆ. ಆದರೆ, ತಜ್ಞರ ಪ್ರಕಾರ, ಪರಿಸರದಲ್ಲಿನ ಬದಲಾವಣೆಗಳು ಕೀಲು ನೋವಿಗೆ ಪ್ರಮುಖ ಕಾರಣವಾಗಿದೆ.

ಮಳೆಗಾಲದಲ್ಲಿ ಪರಿಸರದಲ್ಲಿನ ವಾಯುವಿನ ಒತ್ತಡ ಕಡಿಮೆಯಾಗುತ್ತದೆ. ದೇಹದಲ್ಲಿನ ಗಾಳಿಯ ಒತ್ತಡವೂ ಈ ಋತುಮಾನದಲ್ಲಿ ಕಡಿಮೆಯಾಗುತ್ತದೆ. ಫಲಿತಾಂಶವಾಗಿ ಕೀಲುಗಳ ಸುತ್ತಲು ಇರುವ ಸ್ನಾಯು, ಅಸ್ಥಿರಜ್ಜು ಮತ್ತು ಇನ್ನಿತರೆ ಟಿಶ್ಯೂಗಳ ಮೇಲೆ ಒತ್ತಡ ಬೀಳುತ್ತದೆ. ಇದು ಕೀಲು ನೋವಿಗೆ ಕಾರಣವಾಗುತ್ತದೆ. ಸಂಧಿವಾತದೊಂದಿಗೆ ಬಳಲುತ್ತಿರುವ ಮಂದಿ ಅಥವಾ ಇತರೆ ದೀರ್ಘ ನೋವಿನ ಅನುಭವ ಹೊಂದಿರುವವರು ಇದರಿಂದ ಕಿರಿಕಿರಿ ಅನುಭವಿಸುತ್ತಾರೆ. ವಾತಾವರಣ ಸರಿ ಹೋದಂತೆ ಗಾಳಿಯ ಒತ್ತಡವೂ ಹೊಂದಾಣಿಕೆಯಾಗುತ್ತದೆ. ಇದರಿಂದ ನೋವು ಕೂಡ ಕಡಿಮೆಯಾಗುತ್ತದೆ. ಕೀಲು ನೋವಿಗೆ ಇದು ಮಾತ್ರವಲ್ಲದೇ, ಇನ್ನಿತರೆ ಕಾರಣಗಳು ಸಹ ಇವೆ.

ಮಳೆ ವಾತಾವರಣದಿಂದ ಮನೆಯಿಂದ ಹೊರ ಹೋಗಲು ಸಾಧ್ಯವಾಗುವುದಿಲ್ಲ. ಇದರಿಂದ ಮನೆಯಲ್ಲಿಯೇ ದೀರ್ಘಕಾಲ ಇರಬೇಕಾಗುತ್ತದೆ. ಮನೆಯಲ್ಲೇ ದೀರ್ಘಕಾಲ ಕುಳಿತಿರುವ ಕಾರಣ ಸ್ನಾಯು ಮತ್ತು ಕೀಲುಗಳು ಜಡತ್ವಗೊಂಡು ನೋವು ಹೆಚ್ಚುತ್ತದೆ.

ಮೋಡ ಕವಿದ ವಾತಾವರಣದಿಂದ ನಿಮ್ಮ ಮನಸ್ಥಿತಿ ಕೂಡ ಬದಲಾಗಬಹುದು. ಇದರಿಂದ ನಿಮ್ಮ ಗಮನ ನೋವಿನಂತಹ ನಕಾರಾತ್ಮಕ ಅಂಶಗಳಿಗೆ ಹೆಚ್ಚು ಹೋಗುತ್ತದೆ. ನೋವಿನ ಬಗ್ಗೆ ಹೆಚ್ಚು ಯೋಚಿಸಿದಂತೆ ಅದು ಮತ್ತಷ್ಟು ಕೆಟ್ಟದಾಗಬಹುದು.

ಅನೇಕ ಮಂದಿಗೆ ಮಳೆ ಬಂದರೆ ನೋವು ಹೆಚ್ಚಿದಂತೆ ಎಂಬ ಅಂಶ ತಲೆಯಲ್ಲಿ ಹೊಕ್ಕಿರುತ್ತದೆ. ಅವರ ಮನಸ್ಥಿತಿ ಅನುಸಾರವಾಗಿ ಕೂಡ ಅನೇಕ ಬಾರಿ ನೋವು ಹೆಚ್ಚುತ್ತದೆ.

ನೋವು ಕಡಿಮೆ ಮಾಡುವುದು ಹೇಗೆ? ಸಂಶೋಧನೆಗಳು ಮಳೆಗಾಲದಲ್ಲಿ ಕೀಲು ನೋವು ಹೆಚ್ಚಿಸುತ್ತದೆ ಎಂಬುದನ್ನು ಸಾಬೀತು ಮಾಡಲಿ, ಬಿಡಲಿ, ನೀವು ಕೆಲವು ಮುನ್ನೆಚ್ಚರಿಕೆಗಳನ್ನು ವಹಿಸುವುದು ಮುಖ್ಯವಾಗುತ್ತದೆ. ಹವಾಮಾನ ಬದಲಾಗುತ್ತಿದ್ದಂತೆ ಈ ಬಗ್ಗೆ ಕ್ರಮವಹಿಸಿ.

ಸ್ನಾಯು ಮತ್ತು ಮೂಳೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ನಿಯಮಿತವಾಗಿ ವ್ಯಾಯಾಮದಂತಹ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು.

ನಡೆದಾಡುವುದಕ್ಕಿಂತ ಒಟ್ಟಿಗೆ ಕುಳಿತುಕೊಳ್ಳುವುದು ಉತ್ತಮ. ನೀವು ಹೊರಗೆ ಹೋಗಲು ಸಾಧ್ಯವಾಗದೇ ಇದ್ದರೆ, ಮನೆಯ ಒಳಗಡೆಯೇ ಓಡಾಡಿ. ಟ್ರೆಡ್​ ಮಿಲ್​ನಲ್ಲಿ ವಾಕಿಂಗ್​ ಮಾಡುವುದು ಉತ್ತಮವಾಗಿರಲಿದೆ.

ತೂಕ ಹೆಚ್ಚಳ ಕೂಡ ಕೀಲು, ಸಂಧಿಗಳ ಮೇಲೆ ಒತ್ತಡ ಹೆಚ್ಚಾಗಿ ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಹಿನ್ನೆಲೆ ತೂಕವನ್ನು ಕಡಿಮೆ ಮಾಡಿ. ಸಾಮಾನ್ಯ ತೂಕವನ್ನು ನೀವು ಹೊಂದಿದ್ದರೆ, ಅದನ್ನು ಹೆಚ್ಚಿಸಿ.

ಶಾಖ ಕೂಡ ಅನೇಕ ಬಾರಿ ನೋವಿನ ಉಪಶಮನ ಮಾಡುತ್ತದೆ. ಈ ಹಿನ್ನೆಲೆ ನೋವು ಇರುವ ಪ್ರದೇಶದಲ್ಲಿ ಬಿಸಿ ನೀರನ್ನು ಹಾಕಿಕೊಳ್ಳುವುದು ಉತ್ತಮ ಮಾರ್ಗವಾಗಿರಲಿದೆ. ಅಥವಾ ಆ ಪ್ರದೇಶದಲ್ಲಿ ಬಿಸಿ ನೀರಿನಲ್ಲಿ ಮುಳುಗಿ ಏಳಿಸಿದ ಟವೆಲ್​ ಅನ್ನು ಅನ್ನು ಇಡುವುದು ಆರಾಮದಾಯವಾಗಬಹುದು. ಸಾಧ್ಯವಾದರೆ, ಹೀಟಿಂಗ್​ ಪಾಡ್ಸ್​ ಅನ್ನು ಬಳಸಬಹುದು. ಬಿಸಿ ನೀರಿನಲ್ಲಿ ಸ್ನಾನ ಮಾಡುವುದು ನೋವು ಕಡಿಮೆ ಮಾಡಲಿದೆ.

ಹೊಟ್ಟೆಯಲ್ಲಿ ನೀರಿನ ಪ್ರಮಾಣ ಕಡಿಮೆಯಾದರೆ, ಕೀಲುಗಳು ಸರಿಯಾಗಿ ಚಲಿಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆ ಮಳೆಗಾಲದಲ್ಲೂ ಸಾಕಷ್ಟು ಪ್ರಮಾಣದ ನೀರು ಸೇವಿಸುವುದು ಉತ್ತಮ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »