TOP STORIES:

ಮನ್ಸೂನ್​ನಲ್ಲಿ ಕಾಡುತ್ತಿದ್ಯಾ ಕೀಲು ನೋವು; ಇಲ್ಲಿದೆ ಇದಕ್ಕೆ ಪರಿಹಾರ


ಬೆಂಗಳೂರು: ಮಳೆಗಾಲದಲ್ಲಿ ಕೆಲವು ಮಂದಿಗೆ ಕೀಲು ನೋವಿನ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಈ ಅವಧಿಯಲ್ಲಿ ನೋವು ಉಲ್ಬಣಗೊಳ್ಳಲು ನಿಖರವಾದ ಕಾರಣ ತಿಳಿದಿಲ್ಲ.

ಸಂಶೋಧನೆಗಳು ಕೂಡ ಈ ಬಗ್ಗೆ ಹೆಚ್ಚು ಸ್ಪಷ್ಟವಾಗಿ ತಿಳಿಸಿಲ್ಲ. ಮಳೆಗಾಲದಲ್ಲಿ ಈ ನೋವು ಹೆಚ್ಚು ಎಂದು ಕೆಲವು ಅಧ್ಯಯನಗಳು ವಾದಿಸಿದರೆ, ಮತ್ತೆ ಕೆಲವು ಅಧ್ಯಯನಗಳು ಈ ಆರೋಪವನ್ನು ತಳ್ಳಿಹಾಕುತ್ತದೆ. ಆದರೆ, ತಜ್ಞರ ಪ್ರಕಾರ, ಪರಿಸರದಲ್ಲಿನ ಬದಲಾವಣೆಗಳು ಕೀಲು ನೋವಿಗೆ ಪ್ರಮುಖ ಕಾರಣವಾಗಿದೆ.

ಮಳೆಗಾಲದಲ್ಲಿ ಪರಿಸರದಲ್ಲಿನ ವಾಯುವಿನ ಒತ್ತಡ ಕಡಿಮೆಯಾಗುತ್ತದೆ. ದೇಹದಲ್ಲಿನ ಗಾಳಿಯ ಒತ್ತಡವೂ ಈ ಋತುಮಾನದಲ್ಲಿ ಕಡಿಮೆಯಾಗುತ್ತದೆ. ಫಲಿತಾಂಶವಾಗಿ ಕೀಲುಗಳ ಸುತ್ತಲು ಇರುವ ಸ್ನಾಯು, ಅಸ್ಥಿರಜ್ಜು ಮತ್ತು ಇನ್ನಿತರೆ ಟಿಶ್ಯೂಗಳ ಮೇಲೆ ಒತ್ತಡ ಬೀಳುತ್ತದೆ. ಇದು ಕೀಲು ನೋವಿಗೆ ಕಾರಣವಾಗುತ್ತದೆ. ಸಂಧಿವಾತದೊಂದಿಗೆ ಬಳಲುತ್ತಿರುವ ಮಂದಿ ಅಥವಾ ಇತರೆ ದೀರ್ಘ ನೋವಿನ ಅನುಭವ ಹೊಂದಿರುವವರು ಇದರಿಂದ ಕಿರಿಕಿರಿ ಅನುಭವಿಸುತ್ತಾರೆ. ವಾತಾವರಣ ಸರಿ ಹೋದಂತೆ ಗಾಳಿಯ ಒತ್ತಡವೂ ಹೊಂದಾಣಿಕೆಯಾಗುತ್ತದೆ. ಇದರಿಂದ ನೋವು ಕೂಡ ಕಡಿಮೆಯಾಗುತ್ತದೆ. ಕೀಲು ನೋವಿಗೆ ಇದು ಮಾತ್ರವಲ್ಲದೇ, ಇನ್ನಿತರೆ ಕಾರಣಗಳು ಸಹ ಇವೆ.

ಮಳೆ ವಾತಾವರಣದಿಂದ ಮನೆಯಿಂದ ಹೊರ ಹೋಗಲು ಸಾಧ್ಯವಾಗುವುದಿಲ್ಲ. ಇದರಿಂದ ಮನೆಯಲ್ಲಿಯೇ ದೀರ್ಘಕಾಲ ಇರಬೇಕಾಗುತ್ತದೆ. ಮನೆಯಲ್ಲೇ ದೀರ್ಘಕಾಲ ಕುಳಿತಿರುವ ಕಾರಣ ಸ್ನಾಯು ಮತ್ತು ಕೀಲುಗಳು ಜಡತ್ವಗೊಂಡು ನೋವು ಹೆಚ್ಚುತ್ತದೆ.

ಮೋಡ ಕವಿದ ವಾತಾವರಣದಿಂದ ನಿಮ್ಮ ಮನಸ್ಥಿತಿ ಕೂಡ ಬದಲಾಗಬಹುದು. ಇದರಿಂದ ನಿಮ್ಮ ಗಮನ ನೋವಿನಂತಹ ನಕಾರಾತ್ಮಕ ಅಂಶಗಳಿಗೆ ಹೆಚ್ಚು ಹೋಗುತ್ತದೆ. ನೋವಿನ ಬಗ್ಗೆ ಹೆಚ್ಚು ಯೋಚಿಸಿದಂತೆ ಅದು ಮತ್ತಷ್ಟು ಕೆಟ್ಟದಾಗಬಹುದು.

ಅನೇಕ ಮಂದಿಗೆ ಮಳೆ ಬಂದರೆ ನೋವು ಹೆಚ್ಚಿದಂತೆ ಎಂಬ ಅಂಶ ತಲೆಯಲ್ಲಿ ಹೊಕ್ಕಿರುತ್ತದೆ. ಅವರ ಮನಸ್ಥಿತಿ ಅನುಸಾರವಾಗಿ ಕೂಡ ಅನೇಕ ಬಾರಿ ನೋವು ಹೆಚ್ಚುತ್ತದೆ.

ನೋವು ಕಡಿಮೆ ಮಾಡುವುದು ಹೇಗೆ? ಸಂಶೋಧನೆಗಳು ಮಳೆಗಾಲದಲ್ಲಿ ಕೀಲು ನೋವು ಹೆಚ್ಚಿಸುತ್ತದೆ ಎಂಬುದನ್ನು ಸಾಬೀತು ಮಾಡಲಿ, ಬಿಡಲಿ, ನೀವು ಕೆಲವು ಮುನ್ನೆಚ್ಚರಿಕೆಗಳನ್ನು ವಹಿಸುವುದು ಮುಖ್ಯವಾಗುತ್ತದೆ. ಹವಾಮಾನ ಬದಲಾಗುತ್ತಿದ್ದಂತೆ ಈ ಬಗ್ಗೆ ಕ್ರಮವಹಿಸಿ.

ಸ್ನಾಯು ಮತ್ತು ಮೂಳೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ನಿಯಮಿತವಾಗಿ ವ್ಯಾಯಾಮದಂತಹ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು.

ನಡೆದಾಡುವುದಕ್ಕಿಂತ ಒಟ್ಟಿಗೆ ಕುಳಿತುಕೊಳ್ಳುವುದು ಉತ್ತಮ. ನೀವು ಹೊರಗೆ ಹೋಗಲು ಸಾಧ್ಯವಾಗದೇ ಇದ್ದರೆ, ಮನೆಯ ಒಳಗಡೆಯೇ ಓಡಾಡಿ. ಟ್ರೆಡ್​ ಮಿಲ್​ನಲ್ಲಿ ವಾಕಿಂಗ್​ ಮಾಡುವುದು ಉತ್ತಮವಾಗಿರಲಿದೆ.

ತೂಕ ಹೆಚ್ಚಳ ಕೂಡ ಕೀಲು, ಸಂಧಿಗಳ ಮೇಲೆ ಒತ್ತಡ ಹೆಚ್ಚಾಗಿ ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಹಿನ್ನೆಲೆ ತೂಕವನ್ನು ಕಡಿಮೆ ಮಾಡಿ. ಸಾಮಾನ್ಯ ತೂಕವನ್ನು ನೀವು ಹೊಂದಿದ್ದರೆ, ಅದನ್ನು ಹೆಚ್ಚಿಸಿ.

ಶಾಖ ಕೂಡ ಅನೇಕ ಬಾರಿ ನೋವಿನ ಉಪಶಮನ ಮಾಡುತ್ತದೆ. ಈ ಹಿನ್ನೆಲೆ ನೋವು ಇರುವ ಪ್ರದೇಶದಲ್ಲಿ ಬಿಸಿ ನೀರನ್ನು ಹಾಕಿಕೊಳ್ಳುವುದು ಉತ್ತಮ ಮಾರ್ಗವಾಗಿರಲಿದೆ. ಅಥವಾ ಆ ಪ್ರದೇಶದಲ್ಲಿ ಬಿಸಿ ನೀರಿನಲ್ಲಿ ಮುಳುಗಿ ಏಳಿಸಿದ ಟವೆಲ್​ ಅನ್ನು ಅನ್ನು ಇಡುವುದು ಆರಾಮದಾಯವಾಗಬಹುದು. ಸಾಧ್ಯವಾದರೆ, ಹೀಟಿಂಗ್​ ಪಾಡ್ಸ್​ ಅನ್ನು ಬಳಸಬಹುದು. ಬಿಸಿ ನೀರಿನಲ್ಲಿ ಸ್ನಾನ ಮಾಡುವುದು ನೋವು ಕಡಿಮೆ ಮಾಡಲಿದೆ.

ಹೊಟ್ಟೆಯಲ್ಲಿ ನೀರಿನ ಪ್ರಮಾಣ ಕಡಿಮೆಯಾದರೆ, ಕೀಲುಗಳು ಸರಿಯಾಗಿ ಚಲಿಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆ ಮಳೆಗಾಲದಲ್ಲೂ ಸಾಕಷ್ಟು ಪ್ರಮಾಣದ ನೀರು ಸೇವಿಸುವುದು ಉತ್ತಮ.


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »