TOP STORIES:

FOLLOW US

ಮರಕಡ ಬೈಲುಗುತ್ತು ಗರಡಿಮನೆ ಧರ್ಮಚಾವಡಿ ಅಮೀನ್ ಕುಟುಂಬಸ್ಥರ ದೈವದೇವರ ಆರಾಧನ ಸಾನ್ನಿಧ್ಯ ನಿರ್ಮಾಣದ ಶಿಲಾನ್ಯಾಸ


ಮರಕಡ ಬೈಲುಗುತ್ತು ಗರಡಿಮನೆ ಧರ್ಮಚಾವಡಿ ಅಮೀನ್ ಕುಟುಂಬಸ್ಥರ ದೈವದೇವರ ಆರಾಧನ ಸಮಿತಿ ರಿಜಿಸ್ಟರ್ಡ್ ಇದರ ನವೀಕೃತ ಶ್ರೀ ನಾಗಸಾನ್ನಿಧ್ಯ ಗರಡಿಮನೆ, ಧರ್ಮಚಾವಡಿ, ಜಲದುರ್ಗೆ ,ಭದ್ರಕಾಳಿ ಗುಡಿ, ಪಂಚದೈವ ,ಭೈರವ ಶಕ್ತಿ ,ಕಲ್ಲುರ್ಟಿ ಪಂಜುರ್ಲಿ ಹಾಗೂ ಸಂಘ ಪರಿವಾರ ದೈವಗಳ ಸಾನ್ನಿಧ್ಯ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ರವಿವಾರ ಯಶಸ್ವಿಯಾಗಿ ಜರಗಿತು .

ಭಾರತ ಸರಕಾರದ ಮಾಜಿ ಸಚಿವ ಗೌರವಾನ್ವಿತ ಶ್ರೀ ಬಿ. ಜನಾರ್ದನ ಪೂಜಾರಿಯವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಬಂಟ್ವಾಳ ತಾಲ್ಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಕೆ ಸೇಸಪ್ಪ ಕೋಟ್ಯಾನ್ ರವರ ಗೌರವ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಿತು. ಆರಾಧನಾ ಸಮಿತಿಯ ಅಧ್ಯಕ್ಷರಾದ ಮರಕಡಬೈಲು ಗುತ್ತು ಶ್ರೀ ರಾಘವ ಅಮೀನ್ ರವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬದ ಬಂಧುಗಳು ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿದರು .

ನಂತರ ಜನಾರ್ದನ ಪೂಜಾರಿ ಅವರು ಮಾತನಾಡಿ ನೂತನವಾಗಿ ವಾಗಿ ನಿರ್ಮಾಣ ಗೊಳ್ಳಲಿರುವ ಈ ಧರ್ಮ ಚಾವಡಿ ಅತಿ ಶೀಘ್ರವಾಗಿ ನಿರ್ಮಾಣವಾಗಲಿ ತನ್ನ ಪೂರ್ಣ ಸಹಕಾರವನ್ನು ಈ ಪುಣ್ಯಕಾರ್ಯಕ್ಕೆ ನೀಡುವುದಾಗಿ ತಿಳಿಸಿ ದರು.

ಕುಟುಂಬದ ಎಲ್ಲಾ ಬಂಧುಗಳು ಈ ಪುಣ್ಯಕಾರ್ಯದಲ್ಲಿ ಕೈಜೋಡಿಸಬೇಕೆಂದರು. ಜನಾರ್ದನ ಪೂಜಾರಿಯವರ ಜತೆಗೆ ಧರ್ಮಪತ್ನಿ ಶ್ರೀಮತಿ ಮಾಲತಿ ಜನಾರ್ದನ ಪೂಜಾರಿ ಮತ್ತು ಮಗ ಸಂತೋಷ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ನಂತರ ಕುಟುಂಬಿಕರ ಸಭೆಯು ಯಶಸ್ವಿಯಾಗಿ ನಡೆಯಿತು . ಕುಟುಂಬಿಕರ ಸಭೆಯ ಅಧ್ಯಕ್ಷತೆ ವಹಿಸಿದ್ದ ಮರಕಡಬೈಲು ಗುತ್ತು ರಾಘವ ಅಮೀನ್ ಕುಟುಂಬದ ಬಂಧುಗಳಿಗೆ ಈ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು . ವೈದಿಕ ಕಾರ್ಯ ಗಳನ್ನು ನಡೆಸಿರುವ ಲೋಕೇಶ್ ಶಾಂತಿ ಅವರು ಆಶೀರ್ವಚನ ನೀಡಿದರು . ಸಮಿತಿಯ ಕಾರ್ಯದರ್ಶಿ ಶ್ರೀಧರ್ ಅಮೀನ್ ವರದಿ ವಾಚಿಸಿದರು . ಕೋಶಾಧಿಕಾರಿ ಸುರೇಂದ್ರ ಅಮೀನ್ ಲೆಕ್ಕಪತ್ರ ಮಂಡಿಸಿದರು . ಉಪಾಧ್ಯಕ್ಷರಾದ ದಿನೇಶ್ ಅಮೀನ್ ನೂತನ ಧರ್ಮ ಚಾವಡಿ ಯ ಬಗ್ಗೆ ವಿವರಗಳನ್ನು ನೀಡಿದರು . ಜತೆ ಕಾರ್ಯದರ್ಶಿ ಸಂದೀಪ್ ಸ್ವಾಗತಿಸಿ ಲೆಕ್ಕ ಪರಿಶೋಧಕರಾದ ಶ್ರೀಮತಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು . ಶಿಲಾನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಜರುಗಲು ಕಾರಣ ಕರ್ತರಾದ ಕುಟುಂಬದ ಎಲ್ಲ ಬಂಧುಗಳಿಗೆ ಸಮಿತಿಯ ವತಿಯಿಂದ ವಂದನೆಗಳನ್ನು ಸಲ್ಲಿಸುತ್ತಿದ್ದೇವೆ ಮುಂದೆಯೂ ಸಹಕಾರವನ್ನು ಪ್ರತಿ ಸಂದರ್ಭದಲ್ಲಿ ಯಾಚಿಸುತ್ತಿದ್ದೇವೆ ತಾವೆಲ್ಲರೂ ಈ ಪುಣ್ಯ ಕಾರ್ಯದಲ್ಲಿ ಕೈಜೋಡಿಸಿ ನಮ್ಮ ಕಾರ್ಯಕ್ರಮ ಯಶಸ್ವಿಯಾಗಲು ತಮ್ಮೆಲ್ಲರ ಸಹಕಾರವನ್ನು ಬಯಸುತ್ತೇವೆ.

 


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »