TOP STORIES:

FOLLOW US

ಮರಕಡ ಬೈಲುಗುತ್ತು ಗರಡಿಮನೆ ಧರ್ಮಚಾವಡಿ ಅಮೀನ್ ಕುಟುಂಬಸ್ಥರ ದೈವದೇವರ ಆರಾಧನ ಸಾನ್ನಿಧ್ಯ ನಿರ್ಮಾಣದ ಶಿಲಾನ್ಯಾಸ


ಮರಕಡ ಬೈಲುಗುತ್ತು ಗರಡಿಮನೆ ಧರ್ಮಚಾವಡಿ ಅಮೀನ್ ಕುಟುಂಬಸ್ಥರ ದೈವದೇವರ ಆರಾಧನ ಸಮಿತಿ ರಿಜಿಸ್ಟರ್ಡ್ ಇದರ ನವೀಕೃತ ಶ್ರೀ ನಾಗಸಾನ್ನಿಧ್ಯ ಗರಡಿಮನೆ, ಧರ್ಮಚಾವಡಿ, ಜಲದುರ್ಗೆ ,ಭದ್ರಕಾಳಿ ಗುಡಿ, ಪಂಚದೈವ ,ಭೈರವ ಶಕ್ತಿ ,ಕಲ್ಲುರ್ಟಿ ಪಂಜುರ್ಲಿ ಹಾಗೂ ಸಂಘ ಪರಿವಾರ ದೈವಗಳ ಸಾನ್ನಿಧ್ಯ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ರವಿವಾರ ಯಶಸ್ವಿಯಾಗಿ ಜರಗಿತು .

ಭಾರತ ಸರಕಾರದ ಮಾಜಿ ಸಚಿವ ಗೌರವಾನ್ವಿತ ಶ್ರೀ ಬಿ. ಜನಾರ್ದನ ಪೂಜಾರಿಯವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಬಂಟ್ವಾಳ ತಾಲ್ಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಕೆ ಸೇಸಪ್ಪ ಕೋಟ್ಯಾನ್ ರವರ ಗೌರವ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಿತು. ಆರಾಧನಾ ಸಮಿತಿಯ ಅಧ್ಯಕ್ಷರಾದ ಮರಕಡಬೈಲು ಗುತ್ತು ಶ್ರೀ ರಾಘವ ಅಮೀನ್ ರವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬದ ಬಂಧುಗಳು ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿದರು .

ನಂತರ ಜನಾರ್ದನ ಪೂಜಾರಿ ಅವರು ಮಾತನಾಡಿ ನೂತನವಾಗಿ ವಾಗಿ ನಿರ್ಮಾಣ ಗೊಳ್ಳಲಿರುವ ಈ ಧರ್ಮ ಚಾವಡಿ ಅತಿ ಶೀಘ್ರವಾಗಿ ನಿರ್ಮಾಣವಾಗಲಿ ತನ್ನ ಪೂರ್ಣ ಸಹಕಾರವನ್ನು ಈ ಪುಣ್ಯಕಾರ್ಯಕ್ಕೆ ನೀಡುವುದಾಗಿ ತಿಳಿಸಿ ದರು.

ಕುಟುಂಬದ ಎಲ್ಲಾ ಬಂಧುಗಳು ಈ ಪುಣ್ಯಕಾರ್ಯದಲ್ಲಿ ಕೈಜೋಡಿಸಬೇಕೆಂದರು. ಜನಾರ್ದನ ಪೂಜಾರಿಯವರ ಜತೆಗೆ ಧರ್ಮಪತ್ನಿ ಶ್ರೀಮತಿ ಮಾಲತಿ ಜನಾರ್ದನ ಪೂಜಾರಿ ಮತ್ತು ಮಗ ಸಂತೋಷ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ನಂತರ ಕುಟುಂಬಿಕರ ಸಭೆಯು ಯಶಸ್ವಿಯಾಗಿ ನಡೆಯಿತು . ಕುಟುಂಬಿಕರ ಸಭೆಯ ಅಧ್ಯಕ್ಷತೆ ವಹಿಸಿದ್ದ ಮರಕಡಬೈಲು ಗುತ್ತು ರಾಘವ ಅಮೀನ್ ಕುಟುಂಬದ ಬಂಧುಗಳಿಗೆ ಈ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು . ವೈದಿಕ ಕಾರ್ಯ ಗಳನ್ನು ನಡೆಸಿರುವ ಲೋಕೇಶ್ ಶಾಂತಿ ಅವರು ಆಶೀರ್ವಚನ ನೀಡಿದರು . ಸಮಿತಿಯ ಕಾರ್ಯದರ್ಶಿ ಶ್ರೀಧರ್ ಅಮೀನ್ ವರದಿ ವಾಚಿಸಿದರು . ಕೋಶಾಧಿಕಾರಿ ಸುರೇಂದ್ರ ಅಮೀನ್ ಲೆಕ್ಕಪತ್ರ ಮಂಡಿಸಿದರು . ಉಪಾಧ್ಯಕ್ಷರಾದ ದಿನೇಶ್ ಅಮೀನ್ ನೂತನ ಧರ್ಮ ಚಾವಡಿ ಯ ಬಗ್ಗೆ ವಿವರಗಳನ್ನು ನೀಡಿದರು . ಜತೆ ಕಾರ್ಯದರ್ಶಿ ಸಂದೀಪ್ ಸ್ವಾಗತಿಸಿ ಲೆಕ್ಕ ಪರಿಶೋಧಕರಾದ ಶ್ರೀಮತಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು . ಶಿಲಾನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಜರುಗಲು ಕಾರಣ ಕರ್ತರಾದ ಕುಟುಂಬದ ಎಲ್ಲ ಬಂಧುಗಳಿಗೆ ಸಮಿತಿಯ ವತಿಯಿಂದ ವಂದನೆಗಳನ್ನು ಸಲ್ಲಿಸುತ್ತಿದ್ದೇವೆ ಮುಂದೆಯೂ ಸಹಕಾರವನ್ನು ಪ್ರತಿ ಸಂದರ್ಭದಲ್ಲಿ ಯಾಚಿಸುತ್ತಿದ್ದೇವೆ ತಾವೆಲ್ಲರೂ ಈ ಪುಣ್ಯ ಕಾರ್ಯದಲ್ಲಿ ಕೈಜೋಡಿಸಿ ನಮ್ಮ ಕಾರ್ಯಕ್ರಮ ಯಶಸ್ವಿಯಾಗಲು ತಮ್ಮೆಲ್ಲರ ಸಹಕಾರವನ್ನು ಬಯಸುತ್ತೇವೆ.

 


Share:

More Posts

Category

Send Us A Message

Related Posts

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »