TOP STORIES:

ಮಹಿಳೆ ಮನಸು ಮಾಡಿದರೆ ಏನು ಬೇಕಾದರೂ ಸಾದಿಸಬಹುದು ಅನ್ನುದಕ್ಕೆ ಉದಾಹರಣೆ ” ಆರ್ ಜೆ ರಶ್ಮಿ ಉಳ್ಳಾಲ್ ”


ತೆರೆ ಮರೆಯ ಹಿಂದೆ ಮನಸ್ಸಿಗೆ ಹಿತ ನೀಡುವ ಮಾತುಗಳು, ಮತ್ತೊಂದು ಕಡೆ ಪಟ ಪಟ ಮಾತನಾಡುವ ಕಲೆ, ಮಾತಿನಿಂದಲೇ ಜನರ ಮನಸ್ಸನ್ನು ಗೆದ್ದಿರುವ ತುಳುನಾಡಿನ ಪ್ರತಿಭೆ ಆರ್ ಜೆ ರಶ್ಮಿ ಉಳ್ಳಾಲ್. ಪರಿಸರ ಕಾಳಜಿ ಹಾಗು ಸಾಮಾಜಿಕ ಕಾರ್ಯಕರ್ತರಾಗಿ ಅವರದೇ ಆದ ಅಭಿಮಾನಿ ಬಳಗವೇ ಇದೆ.

ಮಂಗಳೂರಿನ ಉಳ್ಳಾಲದ ಯು ಎ ಪ್ರೇಮನಾಥ್ ಮತ್ತು ಶ್ರೀಮತಿ ಪ್ರಮೀಳಾ ದಂಪತಿಗಳ ಮುದ್ದಿನ ಮಗಳು.

ಬಾಲ್ಯದಿಂದಲೂ ರೇಡಿಯೋ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ . ವಿದ್ಯಾಭ್ಯಾಸ ಮಾಡುತ್ತಿರುವಾಗಲೆ ಸಾರಂಗ್ 107.8 ಎಫ್. ಎಮ್ ಆರ್.ಜೆ ಆಗಿ ಕೆಲಸ ಮಾಡುತ್ತಿದ್ದರು ಮತ್ತು ಮಂಗಳೂರಿನ ಆಕಾಶವಾಣಿಯಲ್ಲಿ “ಯುವವಾಣಿ” ಶೀರ್ಷಿಕೆಯಡಿ ಜನರಿಗೆ ಸ್ಫೂರ್ತಿ ನೀಡಿದ ಇವರು ಅನೇಕ ರೇಡಿಯೋ ಕಾರ್ಯ ಕ್ರಮ ನಡೆಸಿಕೊಟ್ಟಿದ್ದಾರೆ.


ಪದವಿಯಲ್ಲಿ ಉತ್ತಮ ದರ್ಜೆಯ ಅಂಕ ಪಡೆದು ಎಮ್. ಎನ್. ಸಿ ಕಂಪನಿಯಲ್ಲಿ ಎಕ್ಸಿಕ್ಯೂಟರ್ ಮತ್ತು ಕೋಟಕ್ ಮಹೇಂದ್ರ ಬ್ಯಾಂಕ್ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ,ರೆಡ್ ಎಫ್. ಎಮ್ ಅಲ್ಲಿ ಆರ್.ಜೆ ಆಗಿ ಕಾರ್ಯನಿರ್ವಹಿಸಿದ್ದಾರೆ

ಮಕ್ಕಳ ಮೌಲ್ಯದ ಬಗ್ಗೆ ಅರಿವು ಮೂಡಿಸಲು ದಿವ್ಯಾಸ್ ಯುವ ಸೇವಾ ಆರ್ಗನೈಜೇಷನ್ ಎನ್ .ಜಿ .ಒ ದಲ್ಲಿ ಸಾಮಾಜಿಕ ಕಾರ್ಯಕರ್ತರಾಗಿ ಕಾರ್ಯಕ್ರಮ ನಡೆಸಿಕೊಟ್ಟು ಪ್ರಶಂಸೆ ಪಡೆದವರು .ಇವರು ಸಮಾಜ ಸೇವೆ ಮಾಡುವ ಸೇವಾ ಸೇನಾನಿಯೂ ಹೌದು. ವೃದ್ಧರ ಮತ್ತು ಅನಾಥ ಆಶ್ರಮದ ಮಕ್ಕಳಿಗೆ ಮೌಲ್ಯ ಶಿಕ್ಷಣದ ಅರಿವು ಮೂಡಿಸುದು ಮತ್ತು ಅವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುತ್ತಿರುವ ಕರುಣಾಮಯಿ.

ಮಹಿಳೆ ಮನಸು ಮಾಡಿದರೆ ಏನು ಬೇಕಾದರೂ ಸಾದಿಸಬಹುದು ಅನ್ನುದಕ್ಕೆ ಉದಾಹರಣೆ ರಶ್ಮಿ ಉಳ್ಳಾಲ್.

ಅನೇಕ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹಲವಾರು ಸಂಘಸಂಸ್ಥೆಯಿಂದ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಉದಯ ಟಿವಿ ಸವಾಲಿಗೆ ಸೈ ಕಾರ್ಯಕ್ರಮದಲ್ಲಿ ಮಂಗಳೂರನ್ನು ಪ್ರತಿನಿಧಿಸಿ ಮಾತನಾಡಿದ ಇವರಿಗೆ ತುಳುಚಿತ್ರದ ವಾಯ್ಸ್ ಡಬ್ಬಿಂಗ್ ಮತ್ತು ಜಾಹಿರಾತಿಗೆ ವಾಯ್ಸ್ ನೀಡಿದ ಶ್ರೇಯ ಲಭಿಸುತ್ತದೆ . ಬಹಳಷ್ಟು ಸಿನಿಮಾ ಹಾಗು ಸಂಗೀತ ಕ್ಷೇತ್ರದ ದಿಗಜ್ಜರ ಸಂದರ್ಶನ ನಡೆಸಿದ್ದು ಪ್ರಕೃತಿ ಪ್ರೇಮಿಯಾಗಿ 1000 ಕ್ಕೂ ಸೀಡ್ಬೂಲ್ ತಯಾರಿಸಿ, ಸೀಡ್ಬೂಲ್ ಬೀಜವನ್ನು ಹಾಕಿ ಹಸಿರು ಉತ್ಪತ್ತಿ ಮಾಡುವ ಅಭಿಯಾನವನ್ನು ನಡೆಸಿದ ಇವರು ,ಮದುವೆಗೆ ಬಂದ ಎಲ್ಲಾ ಅತಿಥಿಗಳಿಗೆ ಗಿಡವನ್ನು ಉಡುಗೊರೆಯಾಗಿ ನೀಡಿದ್ದು ಜನ ಮೆಚ್ಚುಗೆ ಗಳಿಸಿದ್ದಾರೆ. ತನ್ನದೇ ಆದ ಯೌಟ್ಯೂಬ್ ಚಾನೆಲ್ “ಆರ್ ಜೆ ರಶ್ಮಿ ಉಳ್ಳಾಲ್” ಆರಂಭಿಸಿದ್ದು ಜನರಿಗೆ ಪ್ರೇರಣೆ ನೀಡುವ ಕಾರ್ಯವನ್ನು ನಡೆಸುತ್ತಿದ್ದಾರೆ.

ಈದೀಗ “ದಿವ್ಯಾಸ್ ಅನ್ನಪೂರ್ಣ ” ಯೋಜನೆಯ ಪ್ರಕಾರ ಮಂಗಳೂರಿನ,ಫಳ್ನೀರ್,ಕಂಕನಾಡಿ ,ಸ್ಟೇಟ್ ಬ್ಯಾಂಕ್,ಹಂಪನ್ಕಟ್ಟ ಸೇರಿದಂತೆ ಸುತ್ತಮುತ್ತಲಿನ ಪರಿಸರದಲ್ಲಿ ಇರುವ ಮೂಕ ಪ್ರಾಣಿ ಹಾಗು ಬಡ ಜನರಿಗೆ ರಾತ್ರಿ ಊಟ ನೀಡುವ ಯೋಜನೆ ಮಾಡಿದ್ದು ಬಹುತೇಕ ಯುವ ಜನರಿಗೆ, ಸಮಾಜಕ್ಕೆ ಏನಾದರೂ ಮಾಡಬೇಕು ಎನ್ನುವ ಪ್ರೇರಣೆ ನೀಡುತ್ತಾ ಇದ್ದಾರೆ ದಿವ್ಯಾಸ್ ತಂಡ.

ಮಂಗಳೂರು ಉಳ್ಳಾಲ ಸೇರಿದಂತೆ ಬಹಳಸ್ಟು ಮುಕಪ್ರಾಣಿ ಹಾಗು ಜನರಿಗೆ ಲಾಕ್ ಡೌನ್ ಸಂದರ್ಭ ದಲ್ಲಿ ಊಟದ ಕಿಟ್ ಹಾಗು ಸರಕಾರಿ ಶಾಲೆಗೆ ಪುಸ್ತಕ , ಕೋವಿಡ್ ಥರ್ಮೋಮೀಟರ್ ಸಿಗುವಂತೆ ಆರ್ಥಿಕ ಸಹಾಯ ಮಾಡಿರುತ್ತಾರೆ.


ಜನರು ಇಂತಹ ಕಾರ್ಯದಿಂದ ಪ್ರೇರಣೆ ಪಡೆದು ತಾನು ಕೂಡ ಇಂತಹ ಕೆಲಸಗಳನ್ನು ಮಾಡಿ ಇನ್ನೊಬ್ಬರಿಗೆ ಉಪಕಾರಿಯಾಗಬೇಕೆಂಬ ಅರಿವನ್ನು ಮೂಡಿಸಲು ಇಂತಹ ಸಮಾಜಮುಖಿ ಸೇವೆಗಳನ್ನು ಮುಂದುವರಿಸಬೇಕು ಎನ್ನುವುದು ರಶ್ಮಿಯ ಉದ್ದೇಶ.

ಇವರು ಪ್ರಸ್ತುತ ಮ್ಯಾನೇಜರ್ ಹುದ್ದೆಯಲ್ಲಿ ಇದ್ದು. ಇವರಿಗೆ ಇನ್ನಷ್ಟು ಅನೇಕ ಅವಕಾಶಗಳು ಒದಗಿ ಬರಲಿ,ಇನ್ನಷ್ಟು ಸಮಾಜ ಸೇವೆಮಾಡಲು ಆ ಭಗವಂತ ಶಕ್ತಿ, ಆರೋಗ್ಯ ಕೊಡಲಿ ಇನ್ನಷ್ಟು ಮಿಂಚಲಿ ಎಂದು ಹಾರೈಸುವ.

ಬರಹ: ✒️ ಪ್ರಶಾಂತ್ ಅಂಚನ್ ಮಸ್ಕತ್ತ್


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »