TOP STORIES:

FOLLOW US

ಮಹಿಳೆ ಮನಸು ಮಾಡಿದರೆ ಏನು ಬೇಕಾದರೂ ಸಾದಿಸಬಹುದು ಅನ್ನುದಕ್ಕೆ ಉದಾಹರಣೆ ” ಆರ್ ಜೆ ರಶ್ಮಿ ಉಳ್ಳಾಲ್ ”


ತೆರೆ ಮರೆಯ ಹಿಂದೆ ಮನಸ್ಸಿಗೆ ಹಿತ ನೀಡುವ ಮಾತುಗಳು, ಮತ್ತೊಂದು ಕಡೆ ಪಟ ಪಟ ಮಾತನಾಡುವ ಕಲೆ, ಮಾತಿನಿಂದಲೇ ಜನರ ಮನಸ್ಸನ್ನು ಗೆದ್ದಿರುವ ತುಳುನಾಡಿನ ಪ್ರತಿಭೆ ಆರ್ ಜೆ ರಶ್ಮಿ ಉಳ್ಳಾಲ್. ಪರಿಸರ ಕಾಳಜಿ ಹಾಗು ಸಾಮಾಜಿಕ ಕಾರ್ಯಕರ್ತರಾಗಿ ಅವರದೇ ಆದ ಅಭಿಮಾನಿ ಬಳಗವೇ ಇದೆ.

ಮಂಗಳೂರಿನ ಉಳ್ಳಾಲದ ಯು ಎ ಪ್ರೇಮನಾಥ್ ಮತ್ತು ಶ್ರೀಮತಿ ಪ್ರಮೀಳಾ ದಂಪತಿಗಳ ಮುದ್ದಿನ ಮಗಳು.

ಬಾಲ್ಯದಿಂದಲೂ ರೇಡಿಯೋ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ . ವಿದ್ಯಾಭ್ಯಾಸ ಮಾಡುತ್ತಿರುವಾಗಲೆ ಸಾರಂಗ್ 107.8 ಎಫ್. ಎಮ್ ಆರ್.ಜೆ ಆಗಿ ಕೆಲಸ ಮಾಡುತ್ತಿದ್ದರು ಮತ್ತು ಮಂಗಳೂರಿನ ಆಕಾಶವಾಣಿಯಲ್ಲಿ “ಯುವವಾಣಿ” ಶೀರ್ಷಿಕೆಯಡಿ ಜನರಿಗೆ ಸ್ಫೂರ್ತಿ ನೀಡಿದ ಇವರು ಅನೇಕ ರೇಡಿಯೋ ಕಾರ್ಯ ಕ್ರಮ ನಡೆಸಿಕೊಟ್ಟಿದ್ದಾರೆ.


ಪದವಿಯಲ್ಲಿ ಉತ್ತಮ ದರ್ಜೆಯ ಅಂಕ ಪಡೆದು ಎಮ್. ಎನ್. ಸಿ ಕಂಪನಿಯಲ್ಲಿ ಎಕ್ಸಿಕ್ಯೂಟರ್ ಮತ್ತು ಕೋಟಕ್ ಮಹೇಂದ್ರ ಬ್ಯಾಂಕ್ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ,ರೆಡ್ ಎಫ್. ಎಮ್ ಅಲ್ಲಿ ಆರ್.ಜೆ ಆಗಿ ಕಾರ್ಯನಿರ್ವಹಿಸಿದ್ದಾರೆ

ಮಕ್ಕಳ ಮೌಲ್ಯದ ಬಗ್ಗೆ ಅರಿವು ಮೂಡಿಸಲು ದಿವ್ಯಾಸ್ ಯುವ ಸೇವಾ ಆರ್ಗನೈಜೇಷನ್ ಎನ್ .ಜಿ .ಒ ದಲ್ಲಿ ಸಾಮಾಜಿಕ ಕಾರ್ಯಕರ್ತರಾಗಿ ಕಾರ್ಯಕ್ರಮ ನಡೆಸಿಕೊಟ್ಟು ಪ್ರಶಂಸೆ ಪಡೆದವರು .ಇವರು ಸಮಾಜ ಸೇವೆ ಮಾಡುವ ಸೇವಾ ಸೇನಾನಿಯೂ ಹೌದು. ವೃದ್ಧರ ಮತ್ತು ಅನಾಥ ಆಶ್ರಮದ ಮಕ್ಕಳಿಗೆ ಮೌಲ್ಯ ಶಿಕ್ಷಣದ ಅರಿವು ಮೂಡಿಸುದು ಮತ್ತು ಅವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುತ್ತಿರುವ ಕರುಣಾಮಯಿ.

ಮಹಿಳೆ ಮನಸು ಮಾಡಿದರೆ ಏನು ಬೇಕಾದರೂ ಸಾದಿಸಬಹುದು ಅನ್ನುದಕ್ಕೆ ಉದಾಹರಣೆ ರಶ್ಮಿ ಉಳ್ಳಾಲ್.

ಅನೇಕ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹಲವಾರು ಸಂಘಸಂಸ್ಥೆಯಿಂದ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಉದಯ ಟಿವಿ ಸವಾಲಿಗೆ ಸೈ ಕಾರ್ಯಕ್ರಮದಲ್ಲಿ ಮಂಗಳೂರನ್ನು ಪ್ರತಿನಿಧಿಸಿ ಮಾತನಾಡಿದ ಇವರಿಗೆ ತುಳುಚಿತ್ರದ ವಾಯ್ಸ್ ಡಬ್ಬಿಂಗ್ ಮತ್ತು ಜಾಹಿರಾತಿಗೆ ವಾಯ್ಸ್ ನೀಡಿದ ಶ್ರೇಯ ಲಭಿಸುತ್ತದೆ . ಬಹಳಷ್ಟು ಸಿನಿಮಾ ಹಾಗು ಸಂಗೀತ ಕ್ಷೇತ್ರದ ದಿಗಜ್ಜರ ಸಂದರ್ಶನ ನಡೆಸಿದ್ದು ಪ್ರಕೃತಿ ಪ್ರೇಮಿಯಾಗಿ 1000 ಕ್ಕೂ ಸೀಡ್ಬೂಲ್ ತಯಾರಿಸಿ, ಸೀಡ್ಬೂಲ್ ಬೀಜವನ್ನು ಹಾಕಿ ಹಸಿರು ಉತ್ಪತ್ತಿ ಮಾಡುವ ಅಭಿಯಾನವನ್ನು ನಡೆಸಿದ ಇವರು ,ಮದುವೆಗೆ ಬಂದ ಎಲ್ಲಾ ಅತಿಥಿಗಳಿಗೆ ಗಿಡವನ್ನು ಉಡುಗೊರೆಯಾಗಿ ನೀಡಿದ್ದು ಜನ ಮೆಚ್ಚುಗೆ ಗಳಿಸಿದ್ದಾರೆ. ತನ್ನದೇ ಆದ ಯೌಟ್ಯೂಬ್ ಚಾನೆಲ್ “ಆರ್ ಜೆ ರಶ್ಮಿ ಉಳ್ಳಾಲ್” ಆರಂಭಿಸಿದ್ದು ಜನರಿಗೆ ಪ್ರೇರಣೆ ನೀಡುವ ಕಾರ್ಯವನ್ನು ನಡೆಸುತ್ತಿದ್ದಾರೆ.

ಈದೀಗ “ದಿವ್ಯಾಸ್ ಅನ್ನಪೂರ್ಣ ” ಯೋಜನೆಯ ಪ್ರಕಾರ ಮಂಗಳೂರಿನ,ಫಳ್ನೀರ್,ಕಂಕನಾಡಿ ,ಸ್ಟೇಟ್ ಬ್ಯಾಂಕ್,ಹಂಪನ್ಕಟ್ಟ ಸೇರಿದಂತೆ ಸುತ್ತಮುತ್ತಲಿನ ಪರಿಸರದಲ್ಲಿ ಇರುವ ಮೂಕ ಪ್ರಾಣಿ ಹಾಗು ಬಡ ಜನರಿಗೆ ರಾತ್ರಿ ಊಟ ನೀಡುವ ಯೋಜನೆ ಮಾಡಿದ್ದು ಬಹುತೇಕ ಯುವ ಜನರಿಗೆ, ಸಮಾಜಕ್ಕೆ ಏನಾದರೂ ಮಾಡಬೇಕು ಎನ್ನುವ ಪ್ರೇರಣೆ ನೀಡುತ್ತಾ ಇದ್ದಾರೆ ದಿವ್ಯಾಸ್ ತಂಡ.

ಮಂಗಳೂರು ಉಳ್ಳಾಲ ಸೇರಿದಂತೆ ಬಹಳಸ್ಟು ಮುಕಪ್ರಾಣಿ ಹಾಗು ಜನರಿಗೆ ಲಾಕ್ ಡೌನ್ ಸಂದರ್ಭ ದಲ್ಲಿ ಊಟದ ಕಿಟ್ ಹಾಗು ಸರಕಾರಿ ಶಾಲೆಗೆ ಪುಸ್ತಕ , ಕೋವಿಡ್ ಥರ್ಮೋಮೀಟರ್ ಸಿಗುವಂತೆ ಆರ್ಥಿಕ ಸಹಾಯ ಮಾಡಿರುತ್ತಾರೆ.


ಜನರು ಇಂತಹ ಕಾರ್ಯದಿಂದ ಪ್ರೇರಣೆ ಪಡೆದು ತಾನು ಕೂಡ ಇಂತಹ ಕೆಲಸಗಳನ್ನು ಮಾಡಿ ಇನ್ನೊಬ್ಬರಿಗೆ ಉಪಕಾರಿಯಾಗಬೇಕೆಂಬ ಅರಿವನ್ನು ಮೂಡಿಸಲು ಇಂತಹ ಸಮಾಜಮುಖಿ ಸೇವೆಗಳನ್ನು ಮುಂದುವರಿಸಬೇಕು ಎನ್ನುವುದು ರಶ್ಮಿಯ ಉದ್ದೇಶ.

ಇವರು ಪ್ರಸ್ತುತ ಮ್ಯಾನೇಜರ್ ಹುದ್ದೆಯಲ್ಲಿ ಇದ್ದು. ಇವರಿಗೆ ಇನ್ನಷ್ಟು ಅನೇಕ ಅವಕಾಶಗಳು ಒದಗಿ ಬರಲಿ,ಇನ್ನಷ್ಟು ಸಮಾಜ ಸೇವೆಮಾಡಲು ಆ ಭಗವಂತ ಶಕ್ತಿ, ಆರೋಗ್ಯ ಕೊಡಲಿ ಇನ್ನಷ್ಟು ಮಿಂಚಲಿ ಎಂದು ಹಾರೈಸುವ.

ಬರಹ: ✒️ ಪ್ರಶಾಂತ್ ಅಂಚನ್ ಮಸ್ಕತ್ತ್


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »