TOP STORIES:

ಮಾಣಿ ಯುವವಾಹಿನಿಯ ಮನೆಮನೆಗೆ ಗುರುತತ್ವ ಸಂಚಾರದ ಸಂಪನ್ನ ಸಂಭ್ರಮ


” ಜಗತ್ತಿನ ವೈಚಾರಿಕತೆಯ ಬೆಳಕು, ಸಾಮಾಜಿಕ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಾರ್ವಕಾಲಿಕ ಮೌಲ್ಯವುಳ್ಳದ್ದು. ಸಂಘಟನೆಗಳ ಸಮಾಜಮುಖಿ ಕಾರ್ಯಗಳು ಸರ್ವರನ್ನೂ ಒಳಗೊಳ್ಳುವ ಒಲವು ಹೊಂದಿರಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡಿರುವ ಮನೆಮನೆಗೆ ಗುರುತತ್ವ ಸಂಚಾರ ಕಾರ್ಯಕ್ರಮವು ಸರ್ವಸ್ಪರ್ಶಿ ಉದ್ದೇಶವನ್ನು ಹೊಂದಿದ್ದು ನಾರಾಯಣ ಗುರುಗಳ ತತ್ವಾದರ್ಶಗಳಿಗೆ ಪೂರಕವಾಗಿವೆ ” ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಂ ಕೆ.ಬಿ.ನುಡಿದರು.ಯುವವಾಹಿನಿ (ರಿ.) ಕೇಂದ್ರ ಸಮಿತಿಯ ವಿಶುಕುಮಾರ್ ದತ್ತಿ ನಿಧಿಯ ಸಂಚಾಲಕರಾದ ಶಶಿಧರ್ ಕಿನ್ನಿಮಜಲು ಸಂಪನ್ನ ಕಾರ್ಯಕ್ರಮದ ಗುರುತತ್ವ ಉಪನ್ಯಾಸ ನೀಡಿ, ನಾರಾಯಣ ಗುರುಗಳ ಸರಳ ಜೀವನ ಮಾದರಿಯ ಅನ್ವಯ ಹಾಗೂ ಅಗತ್ಯತೆಯ ಬಗ್ಗೆ ವಿಶದೀಕರಿಸಿದರು.

ಘಟಕದ ಅಧ್ಯಕ್ಷರಾದ ಪ್ರಶಾಂತ್ ಅನಂತಾಡಿ ಹತ್ತು ಗ್ರಾಮವ್ಯಾಪ್ತಿಯಲ್ಲಿ ಗುರುತತ್ವ ಸಂಚಾರ ನಡೆದುಬಂದ ರೀತಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಯೋಜಿಕೊಂಡ ಮನೆಯವರಿಗೆ ಕೃತಜ್ಞತೆ ಸಲ್ಲಿಸಿದರು.

ಯುವವಾಹಿನಿ (ರಿ.) ಮಾಣಿ ಘಟಕವು ಕಳೆದ ಒಂದು ತಿಂಗಳಿನಿಂದ ಅನಂತಾಡಿ, ಮಾಣಿ, ಬರಿಮಾರು, ನೆಟ್ಲಮುಡ್ನೂರು, ಕೆದಿಲ,ಕಡೇಶಿವಾಲಯ, ಬಿಳಿಯೂರು,ಪೆರಾಜೆ ಗ್ರಾಮವ್ಯಾಪ್ತಿಗಳ ಹದಿಮೂರು ಕಡೆಗಳಲ್ಲಿ ಮನೆಮನೆಗೆ ಗುರುತತ್ವ ಸಂಚಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ನೂರೈವತ್ತಕ್ಕಿಂತಲೂ ಹೆಚ್ಚು ಮನೆಗಳನ್ನು ಸಂಪರ್ಕಿಸುವ ಮೂಲಕ ಗುರುತತ್ವ ಅಭಿಯಾನವನ್ನು ಯಶಸ್ಸುಗೊಳಿಸಿದೆ. ಈ ಅಭಿಯಾನದಲ್ಲಿ ಗುರುತತ್ವ ಉಪನ್ಯಾಸ ನೀಡಿದ ಶ್ರೀಮತಿ ತ್ರಿವೇಣಿ ರಮೇಶ್, ಶ್ರೀಮತಿ ರೇಣುಕಾ ಕಣಿಯೂರು, ದಿನಕರ್ ಅಂಚನ್, ರಾಜೇಶ್ ಬಲ್ಯ ಹಾಗೂ ಗುರುತತ್ವ ಸಂಚಾರದ ಸಂಚಾಲಕರಾದ ಜನಾರ್ದನ ಕೊಡಂಗೆ ಇವರುಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾನಿಧಿ ಮತ್ತು ಸ್ಪಂದನ ಯೋಜನೆಗಳ ಬಲವರ್ಧನೆಗಾಗಿ ಆಯೋಜಿಸಿದ ಸಹಾಯಧನ ಕೂಪನಿನ ಬಹುಮಾನವನ್ನು ವಿತರಿಸಲಾಯಿತು ಮತ್ತು ಸ.ಕಿ.ಪ್ರಾ.ಶಾಲೆ,ಬಂಟ್ರಿಂಜ ಇದರ ಕಟ್ಟಡ ಮತ್ತು ಮೇಲ್ಛಾವಣಿ ದುರಸ್ತಿಗೆ ಘಟಕದ ವತಿಯಿಂದ ಸ್ಪಂದನ ಯೋಜನೆಯಡಿ 5000 ರೂಪಾಯಿಯನ್ನು ಶಾಲೆಯ ಎಸ್.ಡಿ.ಎಂ.ಸಿ ಸಮಿತಿಯ ಸದಸ್ಯೆಯಾದ ಶೋಭ ರವರ ಮೂಲಕ ನೀಡಲಾಯಿತು.

ಯುವವಾಹಿನಿ ಕೇಂದ್ರ ಸಮಿತಿಯ ಎರಡನೇ ಉಪಾಧ್ಯಕ್ಷರಾದ ರಾಜೇಶ್ ಬಂಟ್ವಾಳ,ಸತೀಶ್ ಬಾಯಿಲ, ಘಟಕದ ಗೌರವ ಸಲಹೆಗಾರರಾದ ಜಯಂತ ಬರಿಮಾರು, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ,ಪೇರಮೊಗೆರು ಇದರ ಗೌರವ ಅಧ್ಯಕ್ಷರಾದ ಮಾರಪ್ಪ ಸುವರ್ಣ, ಘಟಕದ ನಿರ್ದೇಶಕರು, ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಭಾಗವಹಿಸಿದ್ದರು.ಶ್ರೀದುರ್ಗಾ ನಿಲಯದ ಶ್ರೀಮತಿ ಶೋಭಾ ರಾಜೇಶ್ ದಂಪತಿಗಳು ಹಾಗೂ ಮನೆಯ ಸದಸ್ಯರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಘಟಕದ ಕಾರ್ಯದರ್ಶಿಯಾದ ರಾಜೇಶ್ ಎಸ್ ಬಲ್ಯ ರವರು ಸ್ವಾಗತಿಸಿದರು. ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಜರ್ನಾದನ ಪೂಜಾರಿ ಕೊಡಂಗೆ ವಂದಿಸಿದರು. ವ್ಯಕ್ತಿತ್ವ ವಿಕಸನ ನಿರ್ದೇಶಕಿ ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.

ಘಟಕದ ಉಪಾಧ್ಯಕ್ಷರುಗಳಾದ ಸುಜಿತ್ ಅಂಚನ್,ರವಿಚಂದ್ರ ಬಾಬನಕಟ್ಟೆ, ನಿಕಟಪೂರ್ವ ಕಾರ್ಯದರ್ಶಿ ಶಿವರಾಜ್ ಪಿ.ಆರ್, ಮಾಜಿ ಸಲಹೆಗಾರರಾದ ಬಾಲಕೃಷ್ಣ ದೇಲಬೆಟ್ಟು, ಸಂಘಟನಾ ಕಾರ್ಯದರ್ಶಿ ಕಿರಣ್ ಗೋಳಿಕಟ್ಟೆ, ಸತೀಶ್ ಕೊಪ್ಪರಿಗೆ, ಮಾಜಿ ಕೋಶಾಧಿಕಾರಿ ವಿಶ್ವನಾಥ್ ಮುಜಲ, ಬಾಲಕೃಷ್ಣ ಮುಜಲ, ಪ್ರವೀಣ್ ಮಿತ್ತೂರು ಅತಿಥಿಗಳನ್ನು ಗೌರವಿಸಿದರು.

ವೇದಿಕೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇದರ ಅಧ್ಯಕ್ಷರಾದ ಸುರೇಶ್ ಸೂರ್ಯ,ಸಲಹಾ ಸಮಿತಿಯ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಕಲೆ,ಸಾಹಿತ್ಯ, ಸಾಂಸ್ಕೃತಿಕ ನಿರ್ದೇಶಕರಾದ ಹರೀಶ್ ಪೂಜಾರಿ ಬಾಕಿಲ, ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಮುಜಲ, ಮನೆಯ ಯಜಮಾನರಾದ ರಾಜೇಶ್ ಬಾಬನಕಟ್ಟೆ ಉಪಸ್ಥಿತರಿದ್ದರು. ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ. ಶುಭಹಾರೈಸಿದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »