TOP STORIES:

ಮಾಣಿ ಯುವವಾಹಿನಿಯ ಮನೆಮನೆಗೆ ಗುರುತತ್ವ ಸಂಚಾರದ ಸಂಪನ್ನ ಸಂಭ್ರಮ


” ಜಗತ್ತಿನ ವೈಚಾರಿಕತೆಯ ಬೆಳಕು, ಸಾಮಾಜಿಕ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಾರ್ವಕಾಲಿಕ ಮೌಲ್ಯವುಳ್ಳದ್ದು. ಸಂಘಟನೆಗಳ ಸಮಾಜಮುಖಿ ಕಾರ್ಯಗಳು ಸರ್ವರನ್ನೂ ಒಳಗೊಳ್ಳುವ ಒಲವು ಹೊಂದಿರಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡಿರುವ ಮನೆಮನೆಗೆ ಗುರುತತ್ವ ಸಂಚಾರ ಕಾರ್ಯಕ್ರಮವು ಸರ್ವಸ್ಪರ್ಶಿ ಉದ್ದೇಶವನ್ನು ಹೊಂದಿದ್ದು ನಾರಾಯಣ ಗುರುಗಳ ತತ್ವಾದರ್ಶಗಳಿಗೆ ಪೂರಕವಾಗಿವೆ ” ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಂ ಕೆ.ಬಿ.ನುಡಿದರು.ಯುವವಾಹಿನಿ (ರಿ.) ಕೇಂದ್ರ ಸಮಿತಿಯ ವಿಶುಕುಮಾರ್ ದತ್ತಿ ನಿಧಿಯ ಸಂಚಾಲಕರಾದ ಶಶಿಧರ್ ಕಿನ್ನಿಮಜಲು ಸಂಪನ್ನ ಕಾರ್ಯಕ್ರಮದ ಗುರುತತ್ವ ಉಪನ್ಯಾಸ ನೀಡಿ, ನಾರಾಯಣ ಗುರುಗಳ ಸರಳ ಜೀವನ ಮಾದರಿಯ ಅನ್ವಯ ಹಾಗೂ ಅಗತ್ಯತೆಯ ಬಗ್ಗೆ ವಿಶದೀಕರಿಸಿದರು.

ಘಟಕದ ಅಧ್ಯಕ್ಷರಾದ ಪ್ರಶಾಂತ್ ಅನಂತಾಡಿ ಹತ್ತು ಗ್ರಾಮವ್ಯಾಪ್ತಿಯಲ್ಲಿ ಗುರುತತ್ವ ಸಂಚಾರ ನಡೆದುಬಂದ ರೀತಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಯೋಜಿಕೊಂಡ ಮನೆಯವರಿಗೆ ಕೃತಜ್ಞತೆ ಸಲ್ಲಿಸಿದರು.

ಯುವವಾಹಿನಿ (ರಿ.) ಮಾಣಿ ಘಟಕವು ಕಳೆದ ಒಂದು ತಿಂಗಳಿನಿಂದ ಅನಂತಾಡಿ, ಮಾಣಿ, ಬರಿಮಾರು, ನೆಟ್ಲಮುಡ್ನೂರು, ಕೆದಿಲ,ಕಡೇಶಿವಾಲಯ, ಬಿಳಿಯೂರು,ಪೆರಾಜೆ ಗ್ರಾಮವ್ಯಾಪ್ತಿಗಳ ಹದಿಮೂರು ಕಡೆಗಳಲ್ಲಿ ಮನೆಮನೆಗೆ ಗುರುತತ್ವ ಸಂಚಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ನೂರೈವತ್ತಕ್ಕಿಂತಲೂ ಹೆಚ್ಚು ಮನೆಗಳನ್ನು ಸಂಪರ್ಕಿಸುವ ಮೂಲಕ ಗುರುತತ್ವ ಅಭಿಯಾನವನ್ನು ಯಶಸ್ಸುಗೊಳಿಸಿದೆ. ಈ ಅಭಿಯಾನದಲ್ಲಿ ಗುರುತತ್ವ ಉಪನ್ಯಾಸ ನೀಡಿದ ಶ್ರೀಮತಿ ತ್ರಿವೇಣಿ ರಮೇಶ್, ಶ್ರೀಮತಿ ರೇಣುಕಾ ಕಣಿಯೂರು, ದಿನಕರ್ ಅಂಚನ್, ರಾಜೇಶ್ ಬಲ್ಯ ಹಾಗೂ ಗುರುತತ್ವ ಸಂಚಾರದ ಸಂಚಾಲಕರಾದ ಜನಾರ್ದನ ಕೊಡಂಗೆ ಇವರುಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾನಿಧಿ ಮತ್ತು ಸ್ಪಂದನ ಯೋಜನೆಗಳ ಬಲವರ್ಧನೆಗಾಗಿ ಆಯೋಜಿಸಿದ ಸಹಾಯಧನ ಕೂಪನಿನ ಬಹುಮಾನವನ್ನು ವಿತರಿಸಲಾಯಿತು ಮತ್ತು ಸ.ಕಿ.ಪ್ರಾ.ಶಾಲೆ,ಬಂಟ್ರಿಂಜ ಇದರ ಕಟ್ಟಡ ಮತ್ತು ಮೇಲ್ಛಾವಣಿ ದುರಸ್ತಿಗೆ ಘಟಕದ ವತಿಯಿಂದ ಸ್ಪಂದನ ಯೋಜನೆಯಡಿ 5000 ರೂಪಾಯಿಯನ್ನು ಶಾಲೆಯ ಎಸ್.ಡಿ.ಎಂ.ಸಿ ಸಮಿತಿಯ ಸದಸ್ಯೆಯಾದ ಶೋಭ ರವರ ಮೂಲಕ ನೀಡಲಾಯಿತು.

ಯುವವಾಹಿನಿ ಕೇಂದ್ರ ಸಮಿತಿಯ ಎರಡನೇ ಉಪಾಧ್ಯಕ್ಷರಾದ ರಾಜೇಶ್ ಬಂಟ್ವಾಳ,ಸತೀಶ್ ಬಾಯಿಲ, ಘಟಕದ ಗೌರವ ಸಲಹೆಗಾರರಾದ ಜಯಂತ ಬರಿಮಾರು, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ,ಪೇರಮೊಗೆರು ಇದರ ಗೌರವ ಅಧ್ಯಕ್ಷರಾದ ಮಾರಪ್ಪ ಸುವರ್ಣ, ಘಟಕದ ನಿರ್ದೇಶಕರು, ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಭಾಗವಹಿಸಿದ್ದರು.ಶ್ರೀದುರ್ಗಾ ನಿಲಯದ ಶ್ರೀಮತಿ ಶೋಭಾ ರಾಜೇಶ್ ದಂಪತಿಗಳು ಹಾಗೂ ಮನೆಯ ಸದಸ್ಯರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಘಟಕದ ಕಾರ್ಯದರ್ಶಿಯಾದ ರಾಜೇಶ್ ಎಸ್ ಬಲ್ಯ ರವರು ಸ್ವಾಗತಿಸಿದರು. ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಜರ್ನಾದನ ಪೂಜಾರಿ ಕೊಡಂಗೆ ವಂದಿಸಿದರು. ವ್ಯಕ್ತಿತ್ವ ವಿಕಸನ ನಿರ್ದೇಶಕಿ ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.

ಘಟಕದ ಉಪಾಧ್ಯಕ್ಷರುಗಳಾದ ಸುಜಿತ್ ಅಂಚನ್,ರವಿಚಂದ್ರ ಬಾಬನಕಟ್ಟೆ, ನಿಕಟಪೂರ್ವ ಕಾರ್ಯದರ್ಶಿ ಶಿವರಾಜ್ ಪಿ.ಆರ್, ಮಾಜಿ ಸಲಹೆಗಾರರಾದ ಬಾಲಕೃಷ್ಣ ದೇಲಬೆಟ್ಟು, ಸಂಘಟನಾ ಕಾರ್ಯದರ್ಶಿ ಕಿರಣ್ ಗೋಳಿಕಟ್ಟೆ, ಸತೀಶ್ ಕೊಪ್ಪರಿಗೆ, ಮಾಜಿ ಕೋಶಾಧಿಕಾರಿ ವಿಶ್ವನಾಥ್ ಮುಜಲ, ಬಾಲಕೃಷ್ಣ ಮುಜಲ, ಪ್ರವೀಣ್ ಮಿತ್ತೂರು ಅತಿಥಿಗಳನ್ನು ಗೌರವಿಸಿದರು.

ವೇದಿಕೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇದರ ಅಧ್ಯಕ್ಷರಾದ ಸುರೇಶ್ ಸೂರ್ಯ,ಸಲಹಾ ಸಮಿತಿಯ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಕಲೆ,ಸಾಹಿತ್ಯ, ಸಾಂಸ್ಕೃತಿಕ ನಿರ್ದೇಶಕರಾದ ಹರೀಶ್ ಪೂಜಾರಿ ಬಾಕಿಲ, ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಮುಜಲ, ಮನೆಯ ಯಜಮಾನರಾದ ರಾಜೇಶ್ ಬಾಬನಕಟ್ಟೆ ಉಪಸ್ಥಿತರಿದ್ದರು. ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ. ಶುಭಹಾರೈಸಿದರು.


Related Posts

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »