TOP STORIES:

ಮಾಣಿ ಯುವವಾಹಿನಿಯ ಮನೆಮನೆಗೆ ಗುರುತತ್ವ ಸಂಚಾರದ ಸಂಪನ್ನ ಸಂಭ್ರಮ


” ಜಗತ್ತಿನ ವೈಚಾರಿಕತೆಯ ಬೆಳಕು, ಸಾಮಾಜಿಕ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಾರ್ವಕಾಲಿಕ ಮೌಲ್ಯವುಳ್ಳದ್ದು. ಸಂಘಟನೆಗಳ ಸಮಾಜಮುಖಿ ಕಾರ್ಯಗಳು ಸರ್ವರನ್ನೂ ಒಳಗೊಳ್ಳುವ ಒಲವು ಹೊಂದಿರಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡಿರುವ ಮನೆಮನೆಗೆ ಗುರುತತ್ವ ಸಂಚಾರ ಕಾರ್ಯಕ್ರಮವು ಸರ್ವಸ್ಪರ್ಶಿ ಉದ್ದೇಶವನ್ನು ಹೊಂದಿದ್ದು ನಾರಾಯಣ ಗುರುಗಳ ತತ್ವಾದರ್ಶಗಳಿಗೆ ಪೂರಕವಾಗಿವೆ ” ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಂ ಕೆ.ಬಿ.ನುಡಿದರು.ಯುವವಾಹಿನಿ (ರಿ.) ಕೇಂದ್ರ ಸಮಿತಿಯ ವಿಶುಕುಮಾರ್ ದತ್ತಿ ನಿಧಿಯ ಸಂಚಾಲಕರಾದ ಶಶಿಧರ್ ಕಿನ್ನಿಮಜಲು ಸಂಪನ್ನ ಕಾರ್ಯಕ್ರಮದ ಗುರುತತ್ವ ಉಪನ್ಯಾಸ ನೀಡಿ, ನಾರಾಯಣ ಗುರುಗಳ ಸರಳ ಜೀವನ ಮಾದರಿಯ ಅನ್ವಯ ಹಾಗೂ ಅಗತ್ಯತೆಯ ಬಗ್ಗೆ ವಿಶದೀಕರಿಸಿದರು.

ಘಟಕದ ಅಧ್ಯಕ್ಷರಾದ ಪ್ರಶಾಂತ್ ಅನಂತಾಡಿ ಹತ್ತು ಗ್ರಾಮವ್ಯಾಪ್ತಿಯಲ್ಲಿ ಗುರುತತ್ವ ಸಂಚಾರ ನಡೆದುಬಂದ ರೀತಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಯೋಜಿಕೊಂಡ ಮನೆಯವರಿಗೆ ಕೃತಜ್ಞತೆ ಸಲ್ಲಿಸಿದರು.

ಯುವವಾಹಿನಿ (ರಿ.) ಮಾಣಿ ಘಟಕವು ಕಳೆದ ಒಂದು ತಿಂಗಳಿನಿಂದ ಅನಂತಾಡಿ, ಮಾಣಿ, ಬರಿಮಾರು, ನೆಟ್ಲಮುಡ್ನೂರು, ಕೆದಿಲ,ಕಡೇಶಿವಾಲಯ, ಬಿಳಿಯೂರು,ಪೆರಾಜೆ ಗ್ರಾಮವ್ಯಾಪ್ತಿಗಳ ಹದಿಮೂರು ಕಡೆಗಳಲ್ಲಿ ಮನೆಮನೆಗೆ ಗುರುತತ್ವ ಸಂಚಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ನೂರೈವತ್ತಕ್ಕಿಂತಲೂ ಹೆಚ್ಚು ಮನೆಗಳನ್ನು ಸಂಪರ್ಕಿಸುವ ಮೂಲಕ ಗುರುತತ್ವ ಅಭಿಯಾನವನ್ನು ಯಶಸ್ಸುಗೊಳಿಸಿದೆ. ಈ ಅಭಿಯಾನದಲ್ಲಿ ಗುರುತತ್ವ ಉಪನ್ಯಾಸ ನೀಡಿದ ಶ್ರೀಮತಿ ತ್ರಿವೇಣಿ ರಮೇಶ್, ಶ್ರೀಮತಿ ರೇಣುಕಾ ಕಣಿಯೂರು, ದಿನಕರ್ ಅಂಚನ್, ರಾಜೇಶ್ ಬಲ್ಯ ಹಾಗೂ ಗುರುತತ್ವ ಸಂಚಾರದ ಸಂಚಾಲಕರಾದ ಜನಾರ್ದನ ಕೊಡಂಗೆ ಇವರುಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾನಿಧಿ ಮತ್ತು ಸ್ಪಂದನ ಯೋಜನೆಗಳ ಬಲವರ್ಧನೆಗಾಗಿ ಆಯೋಜಿಸಿದ ಸಹಾಯಧನ ಕೂಪನಿನ ಬಹುಮಾನವನ್ನು ವಿತರಿಸಲಾಯಿತು ಮತ್ತು ಸ.ಕಿ.ಪ್ರಾ.ಶಾಲೆ,ಬಂಟ್ರಿಂಜ ಇದರ ಕಟ್ಟಡ ಮತ್ತು ಮೇಲ್ಛಾವಣಿ ದುರಸ್ತಿಗೆ ಘಟಕದ ವತಿಯಿಂದ ಸ್ಪಂದನ ಯೋಜನೆಯಡಿ 5000 ರೂಪಾಯಿಯನ್ನು ಶಾಲೆಯ ಎಸ್.ಡಿ.ಎಂ.ಸಿ ಸಮಿತಿಯ ಸದಸ್ಯೆಯಾದ ಶೋಭ ರವರ ಮೂಲಕ ನೀಡಲಾಯಿತು.

ಯುವವಾಹಿನಿ ಕೇಂದ್ರ ಸಮಿತಿಯ ಎರಡನೇ ಉಪಾಧ್ಯಕ್ಷರಾದ ರಾಜೇಶ್ ಬಂಟ್ವಾಳ,ಸತೀಶ್ ಬಾಯಿಲ, ಘಟಕದ ಗೌರವ ಸಲಹೆಗಾರರಾದ ಜಯಂತ ಬರಿಮಾರು, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ,ಪೇರಮೊಗೆರು ಇದರ ಗೌರವ ಅಧ್ಯಕ್ಷರಾದ ಮಾರಪ್ಪ ಸುವರ್ಣ, ಘಟಕದ ನಿರ್ದೇಶಕರು, ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಭಾಗವಹಿಸಿದ್ದರು.ಶ್ರೀದುರ್ಗಾ ನಿಲಯದ ಶ್ರೀಮತಿ ಶೋಭಾ ರಾಜೇಶ್ ದಂಪತಿಗಳು ಹಾಗೂ ಮನೆಯ ಸದಸ್ಯರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಘಟಕದ ಕಾರ್ಯದರ್ಶಿಯಾದ ರಾಜೇಶ್ ಎಸ್ ಬಲ್ಯ ರವರು ಸ್ವಾಗತಿಸಿದರು. ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಜರ್ನಾದನ ಪೂಜಾರಿ ಕೊಡಂಗೆ ವಂದಿಸಿದರು. ವ್ಯಕ್ತಿತ್ವ ವಿಕಸನ ನಿರ್ದೇಶಕಿ ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.

ಘಟಕದ ಉಪಾಧ್ಯಕ್ಷರುಗಳಾದ ಸುಜಿತ್ ಅಂಚನ್,ರವಿಚಂದ್ರ ಬಾಬನಕಟ್ಟೆ, ನಿಕಟಪೂರ್ವ ಕಾರ್ಯದರ್ಶಿ ಶಿವರಾಜ್ ಪಿ.ಆರ್, ಮಾಜಿ ಸಲಹೆಗಾರರಾದ ಬಾಲಕೃಷ್ಣ ದೇಲಬೆಟ್ಟು, ಸಂಘಟನಾ ಕಾರ್ಯದರ್ಶಿ ಕಿರಣ್ ಗೋಳಿಕಟ್ಟೆ, ಸತೀಶ್ ಕೊಪ್ಪರಿಗೆ, ಮಾಜಿ ಕೋಶಾಧಿಕಾರಿ ವಿಶ್ವನಾಥ್ ಮುಜಲ, ಬಾಲಕೃಷ್ಣ ಮುಜಲ, ಪ್ರವೀಣ್ ಮಿತ್ತೂರು ಅತಿಥಿಗಳನ್ನು ಗೌರವಿಸಿದರು.

ವೇದಿಕೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇದರ ಅಧ್ಯಕ್ಷರಾದ ಸುರೇಶ್ ಸೂರ್ಯ,ಸಲಹಾ ಸಮಿತಿಯ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಕಲೆ,ಸಾಹಿತ್ಯ, ಸಾಂಸ್ಕೃತಿಕ ನಿರ್ದೇಶಕರಾದ ಹರೀಶ್ ಪೂಜಾರಿ ಬಾಕಿಲ, ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಮುಜಲ, ಮನೆಯ ಯಜಮಾನರಾದ ರಾಜೇಶ್ ಬಾಬನಕಟ್ಟೆ ಉಪಸ್ಥಿತರಿದ್ದರು. ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ. ಶುಭಹಾರೈಸಿದರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »