TOP STORIES:

ಮಾದರಿಯಾದ ಕಾರ್ಕಳ ಉತ್ಸವ – ಪದ್ಮರಾಜ್ ಆರ್.


– ಪದ್ಮರಾಜ್ ಆರ್.

ವಕೀಲರು, ಕೋಶಾಧಿಕಾರಿ ಶ್ರೀ ಗೋಕರ್ಣನಾಥ ದೇವಸ್ಥಾನ ಕುದ್ರೋಳಿ

ಮಾದರಿಯಾದ ಕಾರ್ಕಳ ಉತ್ಸವ

ಸಚಿವ ಸುನೀಲ್ ಕುಮಾರ್ ನೇತೃತದಲ್ಲಿ ನಡೆಯುತ್ತಿರುವ ಕಾರ್ಕಳ ಉತ್ಸವ ಮಾದರಿ ಉತ್ಸವವಾಗುತ್ತಿದೆ. ಜಾತಿ ಮತ, ಪಕ್ಷ ಭೇದವಿಲ್ಲದೆ ಕಾರ್ಕಳದ ಸುತ್ತಮುತ್ತದ ಜನತೆಗೆ ಹಬ್ಬದ ವಾತಾವರಣ ಸೃಷ್ಟಿಸಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಕಾರ್ಕಳದ ಕಲೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವುದಲ್ಲದೆ ರಾಜ್ಯದ ಹಾಗೂ ರಾಷ್ಟ್ರದ ವಿವಿಧ ಜನಪದ ಕಲೆ ಸಂಸ್ಕೃತಿಯನ್ನು ನಾಡಿಗೆ ಪರಿಚಯಿಸುವ ಮೂಲಕ ಹೊಸತನಕ್ಕೆ ನಾಂದಿ ಹಾಡಿರುವುದು ಶ್ಲಾಘನೀಯ. ಇಡೀ ಉತ್ಸವಕ್ಕೆ ಮೆರುಗು ಎಂಬಂತೆ ಹೆಲಿಕಾಪ್ಟರ್ ವಿಹಾರವನ್ನು ಸಚಿವರು ಪೌರ ಕಾರ್ಮಿಕರ ಜತೆ ಪಯಣಿಸುವ ಮೂಲಕ ಚಾಲನೆ ನೀಡಿ ಸಾಮಾನ್ಯರ ನಡುವಿನ ಸಚಿವ ಎನ್ನುವುದಕ್ಕೆ ಸಾಕ್ಷಿಯಾದರು. ಮಾತ್ರವಲ್ಲದೆ ಮರೆಯಾದ ಕಾರ್ಕಳದ ಸಾಧಕರನ್ನು ಸ್ಮರಿಸುವ ಕಾರ್ಯವೂ ಇಲ್ಲಿ ನಡೆದಿದೆ.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಾತ್ಮರ ಹೆಸರನ್ನು ವೇದಿಕೆ, ಮಳಿಗೆ ಸಭಾಂಗಣಗಳಿಗೆ ಹೆಸರಿಸುವ ಮೂಲಕ ಗೌರವ ನಮನ ಸಲ್ಲಿಸಿರುವುದು ಮಾದರಿ. ಜಸ್ಟೀಸ್ ಕೆ.ಎಸ್.ಹೆಗ್ಡೆ ವೇದಿಕೆ, ಕಾರ್ಕಳದ ಶಾಸಕರಾಗಿದ್ದ ಸರಳ ರಾಜಕಾರಣಿ ದಿ.ಗೋಪಾಲ ಭಂಡಾರಿ, ಶಿಲ್ಪಕಲೆಯಲ್ಲಿ ಅಗಾಧ ಪಾಂಡಿತ್ಯ ಹೊಂದಿದ್ದ ಧರ್ಮಸ್ಥಳದ ಗೊಮ್ಮಟೇಶ್ವರನ ಮೂರ್ತಿ ಕೆತ್ತಿದ ಮಹಾನ್ ಶಿಲ್ಪಿ ದಿ.ರೆಂಜಾಳ ಗೋಪಾಲಕೃಷ್ಣ, ಮೊದಲ ಶಿಲ್ಪಕಲಾ ಅಧ್ಯಕ್ಷರಾಗಿದ್ದ ಶಿಲ್ಪಿ ಶ್ಯಾಮರಾಯ ಆಚಾರ್ಯ, ಕನ್ನಡ ಸಾಹಿತ್ಯ ಲೋಕದ ಮಹಾಕವಿ ನಂದಳಿಕೆಯ ಮುದ್ದಣ್ಣ, ಕರ್ನಾಟಕದ ಏಕೀಕರಣಕ್ಕಾಗಿ ಅವಿರತ ಹೋರಾಡಿದ ಕಾಂತಾವರ ಬಾರಾಡಿ ಬೀಡಿನ ಜಿನರಾಜ ಹೆಗ್ಡೆ, ಅಡುಗೆ ಭೋಜಣ್ಣ ಎಂದೇ ಖ್ಯಾತರಾಗಿದ್ದ ಮುಡಾರು ಗ್ರಾಮದ ಭೋಜರಾಜ ಜೈನ್ ಬನ್ನಾಡಿ ಹೆಸರಲ್ಲಿ ವೇದಿಕೆ ಮಾಡುವ ಮೂಲಕ ಅಗಲಿದವರನ್ನು ನೆನಪಿಸುವ ಕಾರ್ಯ ಮಾಡಿರುವುದು ಉತ್ತಮ ಹೆಜ್ಜೆ. ಅಲ್ಲದೆ ತಾಲೂಕಿನಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸುವ ಕಾರ್ಯವೂ ನಡೆಯುತ್ತಿರುವುದು ಶ್ಲಾಘನೀಯ. ಈ ರೀತಿ ಎಲ್ಲ ರಾಜಕಾರಣಿಗಳು ಜಾತಿ ಮತ, ಪಕ್ಷ ಭೇದ ಮರೆತು ಮಾದರಿ ಕಾರ್ಯಕ್ರಮ ಆಯೋಜಿಸುವ ಪ್ರಯತ್ನ ಮಾಡಲಿ….

 

 


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »