TOP STORIES:

FOLLOW US

ಮಾದರಿಯಾದ ಕಾರ್ಕಳ ಉತ್ಸವ – ಪದ್ಮರಾಜ್ ಆರ್.


– ಪದ್ಮರಾಜ್ ಆರ್.

ವಕೀಲರು, ಕೋಶಾಧಿಕಾರಿ ಶ್ರೀ ಗೋಕರ್ಣನಾಥ ದೇವಸ್ಥಾನ ಕುದ್ರೋಳಿ

ಮಾದರಿಯಾದ ಕಾರ್ಕಳ ಉತ್ಸವ

ಸಚಿವ ಸುನೀಲ್ ಕುಮಾರ್ ನೇತೃತದಲ್ಲಿ ನಡೆಯುತ್ತಿರುವ ಕಾರ್ಕಳ ಉತ್ಸವ ಮಾದರಿ ಉತ್ಸವವಾಗುತ್ತಿದೆ. ಜಾತಿ ಮತ, ಪಕ್ಷ ಭೇದವಿಲ್ಲದೆ ಕಾರ್ಕಳದ ಸುತ್ತಮುತ್ತದ ಜನತೆಗೆ ಹಬ್ಬದ ವಾತಾವರಣ ಸೃಷ್ಟಿಸಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಕಾರ್ಕಳದ ಕಲೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವುದಲ್ಲದೆ ರಾಜ್ಯದ ಹಾಗೂ ರಾಷ್ಟ್ರದ ವಿವಿಧ ಜನಪದ ಕಲೆ ಸಂಸ್ಕೃತಿಯನ್ನು ನಾಡಿಗೆ ಪರಿಚಯಿಸುವ ಮೂಲಕ ಹೊಸತನಕ್ಕೆ ನಾಂದಿ ಹಾಡಿರುವುದು ಶ್ಲಾಘನೀಯ. ಇಡೀ ಉತ್ಸವಕ್ಕೆ ಮೆರುಗು ಎಂಬಂತೆ ಹೆಲಿಕಾಪ್ಟರ್ ವಿಹಾರವನ್ನು ಸಚಿವರು ಪೌರ ಕಾರ್ಮಿಕರ ಜತೆ ಪಯಣಿಸುವ ಮೂಲಕ ಚಾಲನೆ ನೀಡಿ ಸಾಮಾನ್ಯರ ನಡುವಿನ ಸಚಿವ ಎನ್ನುವುದಕ್ಕೆ ಸಾಕ್ಷಿಯಾದರು. ಮಾತ್ರವಲ್ಲದೆ ಮರೆಯಾದ ಕಾರ್ಕಳದ ಸಾಧಕರನ್ನು ಸ್ಮರಿಸುವ ಕಾರ್ಯವೂ ಇಲ್ಲಿ ನಡೆದಿದೆ.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಾತ್ಮರ ಹೆಸರನ್ನು ವೇದಿಕೆ, ಮಳಿಗೆ ಸಭಾಂಗಣಗಳಿಗೆ ಹೆಸರಿಸುವ ಮೂಲಕ ಗೌರವ ನಮನ ಸಲ್ಲಿಸಿರುವುದು ಮಾದರಿ. ಜಸ್ಟೀಸ್ ಕೆ.ಎಸ್.ಹೆಗ್ಡೆ ವೇದಿಕೆ, ಕಾರ್ಕಳದ ಶಾಸಕರಾಗಿದ್ದ ಸರಳ ರಾಜಕಾರಣಿ ದಿ.ಗೋಪಾಲ ಭಂಡಾರಿ, ಶಿಲ್ಪಕಲೆಯಲ್ಲಿ ಅಗಾಧ ಪಾಂಡಿತ್ಯ ಹೊಂದಿದ್ದ ಧರ್ಮಸ್ಥಳದ ಗೊಮ್ಮಟೇಶ್ವರನ ಮೂರ್ತಿ ಕೆತ್ತಿದ ಮಹಾನ್ ಶಿಲ್ಪಿ ದಿ.ರೆಂಜಾಳ ಗೋಪಾಲಕೃಷ್ಣ, ಮೊದಲ ಶಿಲ್ಪಕಲಾ ಅಧ್ಯಕ್ಷರಾಗಿದ್ದ ಶಿಲ್ಪಿ ಶ್ಯಾಮರಾಯ ಆಚಾರ್ಯ, ಕನ್ನಡ ಸಾಹಿತ್ಯ ಲೋಕದ ಮಹಾಕವಿ ನಂದಳಿಕೆಯ ಮುದ್ದಣ್ಣ, ಕರ್ನಾಟಕದ ಏಕೀಕರಣಕ್ಕಾಗಿ ಅವಿರತ ಹೋರಾಡಿದ ಕಾಂತಾವರ ಬಾರಾಡಿ ಬೀಡಿನ ಜಿನರಾಜ ಹೆಗ್ಡೆ, ಅಡುಗೆ ಭೋಜಣ್ಣ ಎಂದೇ ಖ್ಯಾತರಾಗಿದ್ದ ಮುಡಾರು ಗ್ರಾಮದ ಭೋಜರಾಜ ಜೈನ್ ಬನ್ನಾಡಿ ಹೆಸರಲ್ಲಿ ವೇದಿಕೆ ಮಾಡುವ ಮೂಲಕ ಅಗಲಿದವರನ್ನು ನೆನಪಿಸುವ ಕಾರ್ಯ ಮಾಡಿರುವುದು ಉತ್ತಮ ಹೆಜ್ಜೆ. ಅಲ್ಲದೆ ತಾಲೂಕಿನಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸುವ ಕಾರ್ಯವೂ ನಡೆಯುತ್ತಿರುವುದು ಶ್ಲಾಘನೀಯ. ಈ ರೀತಿ ಎಲ್ಲ ರಾಜಕಾರಣಿಗಳು ಜಾತಿ ಮತ, ಪಕ್ಷ ಭೇದ ಮರೆತು ಮಾದರಿ ಕಾರ್ಯಕ್ರಮ ಆಯೋಜಿಸುವ ಪ್ರಯತ್ನ ಮಾಡಲಿ….

 

 


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »