TOP STORIES:

FOLLOW US

ಮಾನವೀಯ ಮೌಲ್ಯಗೆ ಹೊಸ ಭಾಷ್ಯ ಬರೆದ ಕುದ್ರೋಳಿಯ ಗುರು ಬೆಳದಿಂಗಳು ಸೇವಾ ಸಂಸ್ಥೆ


ಮಾನವೀಯ ಮೌಲ್ಯಗೆ ಹೊಸ ಭಾಷ್ಯ ಬರೆದ ಕುದ್ರೋಳಿಯ ಗುರು ಬೆಳದಿಂಗಳು ಸೇವಾ ಸಂಸ್ಥೆ                

ಗರೋಡಿ ಅರ್ಚಕರಿಗೆ ಆಹಾರ ಸಾಮಾಗ್ರಿ ವಿತರಣೆ

  ಧಾರ್ಮಿಕ ಕ್ಷೇತ್ರಗಳನ್ನು ಮಾನವ  ಕಲ್ಯಾಣ ಕೇಂದ್ರಗಳನ್ನು  ರೂಪಿಸಬೇಕು ಎಂಬ ಮಹತ್ವದ ಉದ್ದೇಶವನ್ನು ಇಟ್ಟುಕೊಂಡ ಬ್ರಹ್ಮಶ್ರೀನಾರಾಯಣ ಗುರುಗಳಿಂದ ಸ್ಥಾಪನೆಗೊಂಡ  ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರವನ್ನು ಕೇಂದ್ರಿಕರಿಸಿಕೊಂಡು ಮಾನವತಾವಾದಿನಿಷ್ಕಲಂಕ ವ್ಯಕ್ತಿತ್ವದ ಶ್ರೀ ಬಿ.ಜನಾರ್ಧನ ಪೂಜಾರಿ ಇವರ ಮಾರ್ಗದರ್ಶನದಲ್ಲಿ ಜನಪರ ಕಾಳಜಿಯ ಬಹುಮುಖ  ವ್ಯಕ್ತಿತ್ವದನ್ಯಾಯವಾದಿ ಶ್ರೀ ಪದ್ಮರಾಜ್ ರವರ ನೇತೃತ್ವದಲ್ಲಿ  ರಚಿತವಾದ  ಸಂಸ್ಥೆಯೇ ಗುರು ಬೆಳದಿಂಗಳು ಸೇವಾ ಸಂಸ್ಥೆ .  ಕೋರೊನಾಸಂಕಷ್ಟದ ಕಾಲಘಟ್ಟದಲ್ಲಿ  ಸರಕಾರಿ ವ್ಯವಸ್ಥೆಗಳು ಜನರ ಬವಣೆಯನ್ನು ನೀಗಿಸಲು ಹಲವಾರು ಯೋಜನೆಗಳನ್ನು  ರೂಪಿಸಿದರೂಆರ್ಹ ಫಲಾನುಭವಿಗಳನ್ನು ಪೂರ್ಣ ಪ್ರಮಾಣದಲ್ಲಿ  ತಲುಪುವುದು ಅಸಾಧ್ಯವಾಗುತ್ತಿರುವುದು ಕಾಣಬಹುದಾಗಿದೆ.ಸಾಮಾಜಿಕವಾದಮಹತ್ತರವಾದ ಹೊಣೆಗಾರಿಕೆಯಿಂದ ಗುರುತಿಸಿಕೊಂಡ ಗುರುಬೆಳದಿಂಗಳು ಸಂಸ್ಥೆ ಸಾಮಾಜಿಕ ಹಾಗು ಆರ್ಥಿಕ ಮತ್ತು ಆರೋಗ್ಯಸೇವಾ ವಲಯದಲ್ಲಿ ಸಹಾಯಹಸ್ತವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ವ್ಯವಸ್ಥಿತವಾಗಿ ನೀಡುತಿದ್ದು ಸಂಕಷ್ಟಕಾಲಘಟ್ಟದಲ್ಲಿ ಗರೋಡಿಯಲ್ಲಿ ಪೂ ಪೂಜನೆಯನ್ನು ನಿರ್ವಹಿಸಿಕೊಂಡು ಬರುತ್ತಿರುವ ಪೂಜಾರಿಗಳಿಗೆ ದೈನಂದಿನ ಉಪಯೋಗಕ್ಕೆಪೂರಕವಾಗಿ ಆಹಾರ ಸಾಮಾಗ್ರಿಗಳನ್ನು ಒದಗಿಸುವ ಕುರಿತು ಸರಕಾರಿ ಆಡಳಿತಕ್ಕೆ ಸೇವಾ ಸಂಘಗಳು ಮನವಿಯನ್ನು ಸಲ್ಲಿಸಿದ್ದರೂಕೂಡಾ ಕನಿಷ್ಟ ಸ್ಪಂದನೆಯು ಸಿಗದೇ ಇರುವ ಸಮಯದಲ್ಲಿ ಗುರು ಬೆಳದಿಂಗಳ ಸಂಸ್ಥೆಯ ಉಪಾಧ್ಯಾಕ್ಷರಾದ ಶ್ರೀ ರಘುನಾಥಮಾಬಿಯಾನ್ ಇವರ ಸಮಯೋಚಿತ ನಿಲುವುಗಳನ್ನು ಶ್ರೀ ಪದ್ಮರಾಜ್ ಇವರ ಗಮನಕ್ಕೆ ತಂದಿದ್ದು, ಕ್ಷೀಪ್ರವಾಗಿ ಪ್ರತಿಕ್ರಿಯಿಸಿದಲ್ಲದೇಸಂಸ್ಥೆಯ ವತಿಯಿಂದಲೆ ಸಹಾಯ ಹಸ್ತವನ್ನು ನೀಡುವುದನ್ನು ಪ್ರಕಟಿಸಿ ಕಾರ್ಯತತ್ಪರವಾಗಿ ತಮ್ಮ ಸಂಗಡಿಗರನ್ನು ಒಡಗೂಡಿಸಿಗರೋಡಿ ಗೈಸ್ ಸಂಸ್ಥೆಯು ನೀಡಿದ ಆರ್ಹ ಪಲಾನುಭವಿಗಳ ಪಟ್ಟಿಯನ್ನು ಪರಿಗಣಿಸಿ  ಕೇವಲ 2 ದಿನಗಳಲ್ಲಿ ಸರಿ ಸುಮಾರು 72 ಕ್ಕೂಅಧಿಕ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳನ್ನು ತಯಾರಿಸಿ ದಿನಾಂಕ 30/05/2021 ರಂದು ಉಡುಪಿಯ ಕಿನ್ನಿಮೂಲ್ಕಿ ಬೆಮ್ಮೆರ್ಬೈದರ್ಲೆ ಗರೋಡಿಯಲ್ಲಿ ಹಿರಿಯರಾದ ಬನ್ನಂಜೆ ಬಾಬು ಅಮೀನ್, ಉಡುಪಿ ವೃತ್ತ ನೀರಿಕ್ಷಕರಾದ ಶ್ರೀ ಮಂಜುನಾಥ ,ಬಿಲ್ಲವ ಯುವವೇದಿಕೆಯ  ಪ್ರವೀಣ ಎಂ ಪೂಜಾರಿ ಯುವವಾಹಿನಿಯ ಪ್ರಮುಖರು ಹಾಗೂ ಗರೋಡಿ ಗೈಸ್ ಸದಸ್ಯರುಗಳ  ಸಮ್ಮುಖದಲ್ಲಿಉಡುಪಿ ಜಿಲ್ಲೆಯ ಗರೋಡಿಗಳ ಪೂ ಪೂಜನೆಯ ಅರ್ಚಕರಿಗೆ ಸಾಂಕೇತಿಕವಾಗಿ ಅಹಾರ ಸಾಮಾಗ್ರಿಗಳ ಕಿಟ್ ಗಳನ್ನುಹಸ್ತಾಂತರಿಸಲಾಯಿತು. ಗುರು ಬೆಳಂದಿಗಳ ಸೇವಾ ಸಂಸ್ಥೆಯ ವೈಶಿಷ್ಟ್ಯ ಪೂರ್ಣ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿಆರ್ಥಿಕವಾಗಿ ಸಬಲರುಳ್ಳವರು ದುರ್ಬಲ ವ್ಯಕ್ತಿಗಳಿಗೆ ಸಾಹಾಯ ಹಸ್ತ ನೀಡುವುದಲ್ಲದೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನುಸಜ್ಜುಗೊಳಿಸಿ ತರಬೇತು ನೀಡಲು ವೃತ್ತ ನಿರೀಕ್ಷಕರಾದ ಶ್ರೀ ಮಂಜುನಾಥರವರು  ಕರೆ ನೀಡಿದರು. ಶ್ರೀ ಪದ್ಮರಾಜ್ ರವರುಮಾತನಾಡುತ್ತಾ ಗುರು ಬೆಳಂದಿಗಳು ಸೇವಾ ಸಂಸ್ಥೆಯ ಮುಂದಿನ ಕಾರ್ಯ ಯೋಜನೆಯ ಬಗ್ಗೆ ವಿವರಿಸುತ್ತಾ ಸಂಸ್ಥೆಯು  ಸದಾಕಾಲದುರ್ಬಲರ ಶೋಷಿತರ ಪರವಾದ ಧ್ವನಿಯಾಗಿ  ಇರುತ್ತದೆ ಎಂಬ ಭರವಸೆಯನ್ನು ನೀಡಿದರು. ಬನ್ನಂಜೆ ಬಾಬು ಅಮೀನ್ ರವರುಮಾತನಾಡುತ್ತಾ ತುಳುನಾಡಿನ ಮಣ್ಣಿನ ಶಕ್ತಿಗಳ ಅಂತಸತ್ವದ  ಪರಿಚಯವನ್ನು ಮಾಡುತ್ತಾ ಕೊರೊನಾ ಕಾಲಘಟ್ಟದಲ್ಲಿ ಸಂಸ್ಥೆಯಸೇವಾಕಾರ್ಯವು ಬೇರೆ ಸಂಸ್ಥೆಗಳಿಗೆ ಮಾದರಿಯಾಗಲಿ  ಎಂದು ಹಾರೈಸಿದರು. ಶ್ರೀ ಭಾಸ್ಕರ ಸುವರ್ಣ ಇವರು ಕಾರ್ಯಕ್ರಮವನ್ನುನಿರ್ವಹಿಸಿ ಸ್ವಾಗತಿಸಿದರು. ಯುವವಾಹಿನಿ ಮಾಜಿ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಧನ್ಯವಾದ ಸಮರ್ಪಿಸಿದಕಾರ್ಯಕ್ರಮದಲ್ಲಿ ಯುವವಾಹಿನಿಯ ಮಾಜಿ ಅಧ್ಯಕ್ಷರಾದ ಶ್ರೀ ರವಿರಾಜ್ ಕುಮಾರ್ , ಮಂಜೇಶ್ ಕುಮಾರ್ , ಯುವವಾಹಿನಿಗರೋಡಿ ಗೈಸ್  ಗುರುಬೆಳದಿಂಗಳು ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು. ಸಾಮಾಜಿಕ ಸೇವಾ ಸಂಸ್ಥೆಯಲ್ಲಿ ಆತ್ಮ ಸಮರ್ಪಣಾಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಗುರು ಬೆಳದಿಂಗಳು ಸಂಸ್ಥೆಯ ಮಾನವೀಯ ಮೌಲ್ಯದ ಕಾರ್ಯಗಳು ಹೊಸಭಾಷ್ಯವನ್ನು ಬರೆದಂತಾಗಿದೆ.ಕಳೆದ ಕೊರೋನಾ ಲಾಕ್ ಡೌನ್ ಅವಧಿಯಲ್ಲಿ 350 ಕಿಂಟ್ವಾಲ್ ಅಕ್ಕಿ ಹಾಗೂ ಪ್ರತಿ ದಿನ 1200 ಜನರಿಗೆಊಟದ ವ್ಯವಸ್ಥೆಯನ್ನು  ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಿರ್ವಹಿಸಲ್ಪಟ್ಟಿದ್ದು ಜನಮನ್ನಣೆಗೆ ಪಾತ್ರವಾಗಿರುತ್ತದೆ. ಗುರುಬೆಳದಿಂಗಳು ಸಂಸ್ಥೆಯು ಕೇವಲ ಜಿಲ್ಲೆಗೆ ಸೀಮಿತವಾಗದೇ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಿ ಮನುಕುಲದ ಅಭಿವೃದ್ದಿಗೆನಾರಾಯಣಗುರುಗಳು ನೀಡಿದ ಕೊಡುಗೆಯನ್ನು ಮುಂದುವರೆಸುವ ಶಕ್ತಿಯಾಗಿ ಮೂಡಿಬರಲೆಂದು ಹಾರೈಸುತ್ತೇವೆ.

ಬರಹ : ಪಾಂಡು ಕೋಟ್ಯಾನ್ ಕೆಳಾರ್ಕಳಬೆಟ್ಟು

 

 


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »