TOP STORIES:

ಮಾರಕ ಕ್ಯಾನ್ಸರ್ಗೆ ಮಂಗಳೂರಿನ ಮದ್ದು…20 ವರ್ಷಗಳ ಅವಧಿಗೆ ಪೇಟೆಂಟ್


ಮಂಗಳೂರು: ನಮ್ಮಲ್ಲಿರುವ ಕೃಷಿ ತೋಟಗಳಲ್ಲಿ ದೊರಕುವ ಹಡೆ ಬಳ್ಳಿ ಮಾರಕ ಕ್ಯಾನ್ಸರ್ ರೋಗಕ್ಕೆ ಮದ್ದು ಎನ್ನುವುದನ್ನು ಮಂಗಳೂರಿನ ಸಸ್ಯ ವಿಜ್ಞಾನಿಗಳು ಸಂಶೋಧಿಸಿದ್ದಾರೆ.

ಮಂಗಳೂರಿನ ವಿಜ್ಞಾನಿಗಳು ಹಡೆ ಬಳ್ಳಿ ಮೇಲೆ ಸಂಶೋಧನೆ ನಡೆಸಿದ್ದು ಮಾತ್ರವಲ್ಲದೆ ಅದನ್ನು ಶುದ್ಧೀಕರಣ ಮಾಡಿ ಕ್ಯಾನ್ಸರ್ ಗೆ ರಾಮಬಾಣವಾಗುವ ಅಂಶವನ್ನು ಪತ್ತೆ ಹಚ್ಚಿದ್ದಾರೆ. ಇದಕ್ಕೆ ಭಾರತ ಸರಕಾರದಿಂದ ಪೇಟೆಂಟ್ ಸಹ ಪಡೆದಿದ್ದಾರೆ. ಹಡೆ ಬಳ್ಳಿ ಮೇಲೆ ನಡೆದ ದೇಶದ ಮೊದಲ ಸಂಶೋಧನೆ ಇದಾಗಿದ್ದು , ಭಾರತದ ಮೊದಲ ಪೇಟೆಂಟ್ ಸಹ ಇದಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ಸಸ್ಯ ಶಾಸ್ತ್ರ ಸಂಶೋಧಕರಾದ ಪ್ರೊ. ಕೆ. ಆರ್.ಚಂದ್ರಶೇಖರ್ ಮತ್ತು ಪ್ರೊ. ಭಾಗ್ಯ ನಕ್ರೆ ಕಲಾಯ ಹಡೆ ಬಳ್ಳಿ ಯನ್ನೂ ಸಂಶೋಧನೆ ಮಾಡಿದ್ದು,ಸದ್ಯ ಈ ಇಬ್ಬರು ವಿಜ್ಞಾನಿಗಳು ಮಂಗಳೂರು ಖಾಸಗಿ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ವಿಜ್ಞಾನಿಗಳು 2017 ರಂದು ಸಂಶೋಧನೆ ನಡೆಸಿ ಪೇಟೆಂಟ್ ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಬಹಳ ಸಮಯದ ನಂತರ ಪೇಟೆಂಟ್ ಲಭ್ಯವಾಗಿದೆ.20 ವರ್ಷಗಳ ಅವಧಿಗೆ ಪೇಟೆಂಟ್ ಲಭ್ಯವಾಗಿದ್ದು,ಈ ಸಂಶೋಧನಾ ಅಂಶ ಬಳಸಿ ಔಷಧಿ ತಯಾರಿಸಬಹುದಾಗಿದೆ. ಅಂಗಾಂಗ ಕಸಿ ಮಾಡಿದ ನಂತರ ರಾಸಾಯನಿಕ ಅಂಶ ಪತ್ತೆ ಮಾಡುವ ಸಂದರ್ಭದಲ್ಲಿ ಕ್ಯಾನ್ಸರ್ ಗೆ ಮರಕವಾಗಬಲ್ಲ ಟೆಂಟ್ರಾಡೈನ್ ಅಂಶವು ಈ ಹಡೆಬಳ್ಳಿ ಯಲ್ಲಿ ಇರುವ ಅಂಶ ಪತ್ತೆಯಾಗಿದೆ. ಭಾರತದಲ್ಲಿ ಇಲ್ಲಿಯವರೆಗೆ ಯಾರೂ ಕೂಡ ಈ ವಿಷಯದಲ್ಲಿ ಸಂಶೋಧನ ಮಾಡಿರಲಿಲ್ಲ. ಅದರಿಂದಾಗಿ ಇದು ಭಾರತದ ಮೊದಲ ಸಂಶೋಧನೆ ಎಂಬ ಹಿರಿಮೆಗೆ ಪಾತ್ರವಾಗಿದೆ. ಇದಕ್ಕೂ ಹಿಂದೆ ಚೀನಾದಲ್ಲಿ ಈ ರೀತಿಯ ಸಂಶೋಧನೆ ಮಾಡಲಾಗಿತ್ತು.ಅಲ್ಲಿನ ಬಳ್ಳಿಯಲ್ಲಿ ಟೆಂಟ್ರಾಡೈನ್ ಅಂಶವನ್ನು ಪತ್ತೆಮಾಡಿದ್ದರು. ಸಾಮಾನ್ಯವಾಗಿ ಈ ಹಡೆ ಬಳ್ಳಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಭಾಗದಲ್ಲಿ ಹೇರಳವಾಗಿ ದೊರೆಯುತ್ತವೆ. ಹಳ್ಳಿ ಜನರು ಈ ಬಳ್ಳಿಯನ್ನು ಹರೆದು ಹಣೆಗೆ ಹಚ್ಚುತ್ತಿದ್ದರು. ನೆಗಡಿ ಜ್ವರ ಶೀತ , ಮಧುಮೇಹ ಸೇರಿದಂತೆ ಹಲವು ರೋಗಗಳಿಗೆ ಇದು ಔಷಧವಾಗಿದೆ


Related Posts

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »