TOP STORIES:

ಮಾರಕ ಕ್ಯಾನ್ಸರ್ಗೆ ಮಂಗಳೂರಿನ ಮದ್ದು…20 ವರ್ಷಗಳ ಅವಧಿಗೆ ಪೇಟೆಂಟ್


ಮಂಗಳೂರು: ನಮ್ಮಲ್ಲಿರುವ ಕೃಷಿ ತೋಟಗಳಲ್ಲಿ ದೊರಕುವ ಹಡೆ ಬಳ್ಳಿ ಮಾರಕ ಕ್ಯಾನ್ಸರ್ ರೋಗಕ್ಕೆ ಮದ್ದು ಎನ್ನುವುದನ್ನು ಮಂಗಳೂರಿನ ಸಸ್ಯ ವಿಜ್ಞಾನಿಗಳು ಸಂಶೋಧಿಸಿದ್ದಾರೆ.

ಮಂಗಳೂರಿನ ವಿಜ್ಞಾನಿಗಳು ಹಡೆ ಬಳ್ಳಿ ಮೇಲೆ ಸಂಶೋಧನೆ ನಡೆಸಿದ್ದು ಮಾತ್ರವಲ್ಲದೆ ಅದನ್ನು ಶುದ್ಧೀಕರಣ ಮಾಡಿ ಕ್ಯಾನ್ಸರ್ ಗೆ ರಾಮಬಾಣವಾಗುವ ಅಂಶವನ್ನು ಪತ್ತೆ ಹಚ್ಚಿದ್ದಾರೆ. ಇದಕ್ಕೆ ಭಾರತ ಸರಕಾರದಿಂದ ಪೇಟೆಂಟ್ ಸಹ ಪಡೆದಿದ್ದಾರೆ. ಹಡೆ ಬಳ್ಳಿ ಮೇಲೆ ನಡೆದ ದೇಶದ ಮೊದಲ ಸಂಶೋಧನೆ ಇದಾಗಿದ್ದು , ಭಾರತದ ಮೊದಲ ಪೇಟೆಂಟ್ ಸಹ ಇದಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ಸಸ್ಯ ಶಾಸ್ತ್ರ ಸಂಶೋಧಕರಾದ ಪ್ರೊ. ಕೆ. ಆರ್.ಚಂದ್ರಶೇಖರ್ ಮತ್ತು ಪ್ರೊ. ಭಾಗ್ಯ ನಕ್ರೆ ಕಲಾಯ ಹಡೆ ಬಳ್ಳಿ ಯನ್ನೂ ಸಂಶೋಧನೆ ಮಾಡಿದ್ದು,ಸದ್ಯ ಈ ಇಬ್ಬರು ವಿಜ್ಞಾನಿಗಳು ಮಂಗಳೂರು ಖಾಸಗಿ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ವಿಜ್ಞಾನಿಗಳು 2017 ರಂದು ಸಂಶೋಧನೆ ನಡೆಸಿ ಪೇಟೆಂಟ್ ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಬಹಳ ಸಮಯದ ನಂತರ ಪೇಟೆಂಟ್ ಲಭ್ಯವಾಗಿದೆ.20 ವರ್ಷಗಳ ಅವಧಿಗೆ ಪೇಟೆಂಟ್ ಲಭ್ಯವಾಗಿದ್ದು,ಈ ಸಂಶೋಧನಾ ಅಂಶ ಬಳಸಿ ಔಷಧಿ ತಯಾರಿಸಬಹುದಾಗಿದೆ. ಅಂಗಾಂಗ ಕಸಿ ಮಾಡಿದ ನಂತರ ರಾಸಾಯನಿಕ ಅಂಶ ಪತ್ತೆ ಮಾಡುವ ಸಂದರ್ಭದಲ್ಲಿ ಕ್ಯಾನ್ಸರ್ ಗೆ ಮರಕವಾಗಬಲ್ಲ ಟೆಂಟ್ರಾಡೈನ್ ಅಂಶವು ಈ ಹಡೆಬಳ್ಳಿ ಯಲ್ಲಿ ಇರುವ ಅಂಶ ಪತ್ತೆಯಾಗಿದೆ. ಭಾರತದಲ್ಲಿ ಇಲ್ಲಿಯವರೆಗೆ ಯಾರೂ ಕೂಡ ಈ ವಿಷಯದಲ್ಲಿ ಸಂಶೋಧನ ಮಾಡಿರಲಿಲ್ಲ. ಅದರಿಂದಾಗಿ ಇದು ಭಾರತದ ಮೊದಲ ಸಂಶೋಧನೆ ಎಂಬ ಹಿರಿಮೆಗೆ ಪಾತ್ರವಾಗಿದೆ. ಇದಕ್ಕೂ ಹಿಂದೆ ಚೀನಾದಲ್ಲಿ ಈ ರೀತಿಯ ಸಂಶೋಧನೆ ಮಾಡಲಾಗಿತ್ತು.ಅಲ್ಲಿನ ಬಳ್ಳಿಯಲ್ಲಿ ಟೆಂಟ್ರಾಡೈನ್ ಅಂಶವನ್ನು ಪತ್ತೆಮಾಡಿದ್ದರು. ಸಾಮಾನ್ಯವಾಗಿ ಈ ಹಡೆ ಬಳ್ಳಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಭಾಗದಲ್ಲಿ ಹೇರಳವಾಗಿ ದೊರೆಯುತ್ತವೆ. ಹಳ್ಳಿ ಜನರು ಈ ಬಳ್ಳಿಯನ್ನು ಹರೆದು ಹಣೆಗೆ ಹಚ್ಚುತ್ತಿದ್ದರು. ನೆಗಡಿ ಜ್ವರ ಶೀತ , ಮಧುಮೇಹ ಸೇರಿದಂತೆ ಹಲವು ರೋಗಗಳಿಗೆ ಇದು ಔಷಧವಾಗಿದೆ


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »