TOP STORIES:

FOLLOW US

ಮಾರಕ ಕ್ಯಾನ್ಸರ್ಗೆ ಮಂಗಳೂರಿನ ಮದ್ದು…20 ವರ್ಷಗಳ ಅವಧಿಗೆ ಪೇಟೆಂಟ್


ಮಂಗಳೂರು: ನಮ್ಮಲ್ಲಿರುವ ಕೃಷಿ ತೋಟಗಳಲ್ಲಿ ದೊರಕುವ ಹಡೆ ಬಳ್ಳಿ ಮಾರಕ ಕ್ಯಾನ್ಸರ್ ರೋಗಕ್ಕೆ ಮದ್ದು ಎನ್ನುವುದನ್ನು ಮಂಗಳೂರಿನ ಸಸ್ಯ ವಿಜ್ಞಾನಿಗಳು ಸಂಶೋಧಿಸಿದ್ದಾರೆ.

ಮಂಗಳೂರಿನ ವಿಜ್ಞಾನಿಗಳು ಹಡೆ ಬಳ್ಳಿ ಮೇಲೆ ಸಂಶೋಧನೆ ನಡೆಸಿದ್ದು ಮಾತ್ರವಲ್ಲದೆ ಅದನ್ನು ಶುದ್ಧೀಕರಣ ಮಾಡಿ ಕ್ಯಾನ್ಸರ್ ಗೆ ರಾಮಬಾಣವಾಗುವ ಅಂಶವನ್ನು ಪತ್ತೆ ಹಚ್ಚಿದ್ದಾರೆ. ಇದಕ್ಕೆ ಭಾರತ ಸರಕಾರದಿಂದ ಪೇಟೆಂಟ್ ಸಹ ಪಡೆದಿದ್ದಾರೆ. ಹಡೆ ಬಳ್ಳಿ ಮೇಲೆ ನಡೆದ ದೇಶದ ಮೊದಲ ಸಂಶೋಧನೆ ಇದಾಗಿದ್ದು , ಭಾರತದ ಮೊದಲ ಪೇಟೆಂಟ್ ಸಹ ಇದಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ಸಸ್ಯ ಶಾಸ್ತ್ರ ಸಂಶೋಧಕರಾದ ಪ್ರೊ. ಕೆ. ಆರ್.ಚಂದ್ರಶೇಖರ್ ಮತ್ತು ಪ್ರೊ. ಭಾಗ್ಯ ನಕ್ರೆ ಕಲಾಯ ಹಡೆ ಬಳ್ಳಿ ಯನ್ನೂ ಸಂಶೋಧನೆ ಮಾಡಿದ್ದು,ಸದ್ಯ ಈ ಇಬ್ಬರು ವಿಜ್ಞಾನಿಗಳು ಮಂಗಳೂರು ಖಾಸಗಿ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ವಿಜ್ಞಾನಿಗಳು 2017 ರಂದು ಸಂಶೋಧನೆ ನಡೆಸಿ ಪೇಟೆಂಟ್ ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಬಹಳ ಸಮಯದ ನಂತರ ಪೇಟೆಂಟ್ ಲಭ್ಯವಾಗಿದೆ.20 ವರ್ಷಗಳ ಅವಧಿಗೆ ಪೇಟೆಂಟ್ ಲಭ್ಯವಾಗಿದ್ದು,ಈ ಸಂಶೋಧನಾ ಅಂಶ ಬಳಸಿ ಔಷಧಿ ತಯಾರಿಸಬಹುದಾಗಿದೆ. ಅಂಗಾಂಗ ಕಸಿ ಮಾಡಿದ ನಂತರ ರಾಸಾಯನಿಕ ಅಂಶ ಪತ್ತೆ ಮಾಡುವ ಸಂದರ್ಭದಲ್ಲಿ ಕ್ಯಾನ್ಸರ್ ಗೆ ಮರಕವಾಗಬಲ್ಲ ಟೆಂಟ್ರಾಡೈನ್ ಅಂಶವು ಈ ಹಡೆಬಳ್ಳಿ ಯಲ್ಲಿ ಇರುವ ಅಂಶ ಪತ್ತೆಯಾಗಿದೆ. ಭಾರತದಲ್ಲಿ ಇಲ್ಲಿಯವರೆಗೆ ಯಾರೂ ಕೂಡ ಈ ವಿಷಯದಲ್ಲಿ ಸಂಶೋಧನ ಮಾಡಿರಲಿಲ್ಲ. ಅದರಿಂದಾಗಿ ಇದು ಭಾರತದ ಮೊದಲ ಸಂಶೋಧನೆ ಎಂಬ ಹಿರಿಮೆಗೆ ಪಾತ್ರವಾಗಿದೆ. ಇದಕ್ಕೂ ಹಿಂದೆ ಚೀನಾದಲ್ಲಿ ಈ ರೀತಿಯ ಸಂಶೋಧನೆ ಮಾಡಲಾಗಿತ್ತು.ಅಲ್ಲಿನ ಬಳ್ಳಿಯಲ್ಲಿ ಟೆಂಟ್ರಾಡೈನ್ ಅಂಶವನ್ನು ಪತ್ತೆಮಾಡಿದ್ದರು. ಸಾಮಾನ್ಯವಾಗಿ ಈ ಹಡೆ ಬಳ್ಳಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಭಾಗದಲ್ಲಿ ಹೇರಳವಾಗಿ ದೊರೆಯುತ್ತವೆ. ಹಳ್ಳಿ ಜನರು ಈ ಬಳ್ಳಿಯನ್ನು ಹರೆದು ಹಣೆಗೆ ಹಚ್ಚುತ್ತಿದ್ದರು. ನೆಗಡಿ ಜ್ವರ ಶೀತ , ಮಧುಮೇಹ ಸೇರಿದಂತೆ ಹಲವು ರೋಗಗಳಿಗೆ ಇದು ಔಷಧವಾಗಿದೆ


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »