TOP STORIES:

ಮೀಸಲಾತಿ ಕುರಿತಂತೆ ಬಿಲ್ಲವ ಸಮುದಾಯದ ಬೇಡಿಕೆಯನ್ನೂ ಪರಿಗಣಿಸಬೇಕು : ಪ್ರವೀಣ್ ಎಂ ಪೂಜಾರಿ


ಮೀಸಲಾತಿ ಕುರಿತಂತೆ ಬಿಲ್ಲವ ಸಮುದಾಯದ ಬೇಡಿಕೆಯನ್ನೂ ಪರಿಗಣಿಸಬೇಕು : ಪ್ರವೀಣ್ ಎಂ ಪೂಜಾರಿ

ಕರ್ನಾಟಕ ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿರುವ ಬಿಲ್ಲವರು ಮತ್ತು ಈಡಿಗರು ಸಂಬಂಧಿತ ಉಪಪಂಗಡಗಳು ಈ ಹಿಂದಿನಿಂದಲೂ ಮೀಸಲಾತಿ ಪ್ರವರ್ಗ2A ನಿಂದ ಪ್ರವರ್ಗ1 ರಲ್ಲಿ ಅವಕಾಶ ಒದಗಿಸುವಂತೆ ಬೇಡಿಕೆ ಸಲ್ಲಿಸುತ್ತಾ ಬಂದಿದೆ. ಬ್ರಹ್ಮಾವರದಲ್ಲಿ ಜರಗಿದ ಬೃಹತ್ ಬಿಲ್ಲವ ಸಮಾವೇಶದಲ್ಲೂ ಈ ಬೇಡಿಕೆಯನ್ನೂ ಮಂಡಿಸಲಾಗಿತ್ತು.

ಆದರೆ ಯಾವುದೇ ಸೂಕ್ತ ಕ್ರಮಕೈಗೊಳ್ಳದ ರಾಜ್ಯ ಸರ್ಕಾರ ಬಿಲ್ಲವ, ಈಡಿಗ ಸಮುದಾಯವನ್ನು ವಂಚಿಸುತ್ತಿದೆ. ಮೀಸಲಾತಿಯ ಅನುಕೂಲವನ್ನು ಬೇರೆ ಬೇರೆ ಸಮುದಾಯಕ್ಕೆ ಮಾಡ ಹೊರಟಿರುವ ಕುರಿತು ನಮ್ಮ ವಿರೋಧವಲ್ಲ. ಆದರೆ ನಿನ್ನೆಯ ಉದಯವಾಣಿ ಹಾಗೂ ಇತರ ದಿನಪತ್ರಿಕೆ ಮುಖಪುಟ ಸುದ್ದಿ ಗಮನಿಸಿದಾಗ ಸರ್ಕಾರಕ್ಕೆ ಬಿಲ್ಲವ, ಈಡಿಗ ಸಮುದಾಯದ ಕುರಿತಾಗಿರುವ ನಿರ್ಲಕ್ಷ್ಯದ ಕುರಿತು ಸ್ಪಷ್ಟವಾಗುತ್ತದೆ. ಯಾಕೆ ಈ ರೀತಿಯ ತಾತ್ಸಾರ.

ಇತ್ತೀಚಿನ ದಿನಗಳಲ್ಲಿ ಬಿಲ್ಲವರಿಗೆ, ನಮ್ಮ ಆರಾಧ್ಯ ದೈವ ಕೋಟಿ ಚೆನ್ನಯರು, ಹಿರಿಯ ಬಿಲ್ಲವ ಮುಖಂಡ ಜನಾರ್ಧನ ಪೂಜಾರಿಯವರ ಕುರಿತು ಜಗದೀಶ್ ಅಧಿಕಾರಿ ಅವಹೇಳನ ಮಾಡಿದಾಗಲೂ ಆಡಳಿತ ಪಕ್ಷ ಜಗದೀಶ್ ಅಧಿಕಾರಿರವರ ವಿರುದ್ಧ ಕ್ರಮತೆಗೆದುಕೊಳ್ಳದೆ ಇರುವುದು ನೋಡಿದಾಗ ನಾವು ಕೇವಲ ವೋಟ್ ಬ್ಯಾಂಕ್ ಗೆ ಸೀಮಿತ ಅನ್ನುವ ಹಾಗೆ ಅನಿಸುತ್ತಿದೆ ಮತ್ತು ನಮ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಿರುವುದು ಇನ್ನೊಮ್ಮೆ ಸಾಭೀತಾಗಿದೆ.

ಸರ್ಕಾರ ಬಿಲ್ಲವ, ಈಡಿಗ ಸಮುದಾಯದ ಮೀಸಲಾತಿ ಸಂಪೂರ್ಣ ನಿರ್ಲಕ್ಷಿಸುತ್ತಿದ್ದು, ಇದರ ಬಗ್ಗೆ ನಮ್ಮ ಸಮುದಾಯದ ಜನಪ್ರತಿನಿಧಿಗಳಾಗಲಿ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಾಗಲಿ ಈ ಕುರಿತು ತುಟಿ ಬಿಚ್ಚದಿರದ್ದು ವಿಷಾದನೀಯ. ಇತರ ಸಮುದಾಯವು ಸರ್ಕಾರಕ್ಕೆ ಹೇಗೆ ಪ್ರಾಮುಖ್ಯವೊ ನಮ್ಮನ್ನೂ ಆದ್ಯತೆಯಲ್ಲಿ ಪರಿಗಣಿಸಬೇಕು. ಮೀಸಲಾತಿ ಸಂಬಂಧಿಸಿ ಎಲ್ಲಾ ಸವಲತ್ತುಗಳು ನಮಗೂ ದೊರಕುವಲ್ಲಿ ಸರ್ಕಾರ ಪ್ರಯತ್ನಿಸಬೇಕೆಂದು ಒತ್ತಾಯಿಸುತ್ತೇವೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ)


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »