TOP STORIES:

FOLLOW US

ಮೀಸಲಾತಿ ಕುರಿತಂತೆ ಬಿಲ್ಲವ ಸಮುದಾಯದ ಬೇಡಿಕೆಯನ್ನೂ ಪರಿಗಣಿಸಬೇಕು : ಪ್ರವೀಣ್ ಎಂ ಪೂಜಾರಿ


ಮೀಸಲಾತಿ ಕುರಿತಂತೆ ಬಿಲ್ಲವ ಸಮುದಾಯದ ಬೇಡಿಕೆಯನ್ನೂ ಪರಿಗಣಿಸಬೇಕು : ಪ್ರವೀಣ್ ಎಂ ಪೂಜಾರಿ

ಕರ್ನಾಟಕ ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿರುವ ಬಿಲ್ಲವರು ಮತ್ತು ಈಡಿಗರು ಸಂಬಂಧಿತ ಉಪಪಂಗಡಗಳು ಈ ಹಿಂದಿನಿಂದಲೂ ಮೀಸಲಾತಿ ಪ್ರವರ್ಗ2A ನಿಂದ ಪ್ರವರ್ಗ1 ರಲ್ಲಿ ಅವಕಾಶ ಒದಗಿಸುವಂತೆ ಬೇಡಿಕೆ ಸಲ್ಲಿಸುತ್ತಾ ಬಂದಿದೆ. ಬ್ರಹ್ಮಾವರದಲ್ಲಿ ಜರಗಿದ ಬೃಹತ್ ಬಿಲ್ಲವ ಸಮಾವೇಶದಲ್ಲೂ ಈ ಬೇಡಿಕೆಯನ್ನೂ ಮಂಡಿಸಲಾಗಿತ್ತು.

ಆದರೆ ಯಾವುದೇ ಸೂಕ್ತ ಕ್ರಮಕೈಗೊಳ್ಳದ ರಾಜ್ಯ ಸರ್ಕಾರ ಬಿಲ್ಲವ, ಈಡಿಗ ಸಮುದಾಯವನ್ನು ವಂಚಿಸುತ್ತಿದೆ. ಮೀಸಲಾತಿಯ ಅನುಕೂಲವನ್ನು ಬೇರೆ ಬೇರೆ ಸಮುದಾಯಕ್ಕೆ ಮಾಡ ಹೊರಟಿರುವ ಕುರಿತು ನಮ್ಮ ವಿರೋಧವಲ್ಲ. ಆದರೆ ನಿನ್ನೆಯ ಉದಯವಾಣಿ ಹಾಗೂ ಇತರ ದಿನಪತ್ರಿಕೆ ಮುಖಪುಟ ಸುದ್ದಿ ಗಮನಿಸಿದಾಗ ಸರ್ಕಾರಕ್ಕೆ ಬಿಲ್ಲವ, ಈಡಿಗ ಸಮುದಾಯದ ಕುರಿತಾಗಿರುವ ನಿರ್ಲಕ್ಷ್ಯದ ಕುರಿತು ಸ್ಪಷ್ಟವಾಗುತ್ತದೆ. ಯಾಕೆ ಈ ರೀತಿಯ ತಾತ್ಸಾರ.

ಇತ್ತೀಚಿನ ದಿನಗಳಲ್ಲಿ ಬಿಲ್ಲವರಿಗೆ, ನಮ್ಮ ಆರಾಧ್ಯ ದೈವ ಕೋಟಿ ಚೆನ್ನಯರು, ಹಿರಿಯ ಬಿಲ್ಲವ ಮುಖಂಡ ಜನಾರ್ಧನ ಪೂಜಾರಿಯವರ ಕುರಿತು ಜಗದೀಶ್ ಅಧಿಕಾರಿ ಅವಹೇಳನ ಮಾಡಿದಾಗಲೂ ಆಡಳಿತ ಪಕ್ಷ ಜಗದೀಶ್ ಅಧಿಕಾರಿರವರ ವಿರುದ್ಧ ಕ್ರಮತೆಗೆದುಕೊಳ್ಳದೆ ಇರುವುದು ನೋಡಿದಾಗ ನಾವು ಕೇವಲ ವೋಟ್ ಬ್ಯಾಂಕ್ ಗೆ ಸೀಮಿತ ಅನ್ನುವ ಹಾಗೆ ಅನಿಸುತ್ತಿದೆ ಮತ್ತು ನಮ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಿರುವುದು ಇನ್ನೊಮ್ಮೆ ಸಾಭೀತಾಗಿದೆ.

ಸರ್ಕಾರ ಬಿಲ್ಲವ, ಈಡಿಗ ಸಮುದಾಯದ ಮೀಸಲಾತಿ ಸಂಪೂರ್ಣ ನಿರ್ಲಕ್ಷಿಸುತ್ತಿದ್ದು, ಇದರ ಬಗ್ಗೆ ನಮ್ಮ ಸಮುದಾಯದ ಜನಪ್ರತಿನಿಧಿಗಳಾಗಲಿ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಾಗಲಿ ಈ ಕುರಿತು ತುಟಿ ಬಿಚ್ಚದಿರದ್ದು ವಿಷಾದನೀಯ. ಇತರ ಸಮುದಾಯವು ಸರ್ಕಾರಕ್ಕೆ ಹೇಗೆ ಪ್ರಾಮುಖ್ಯವೊ ನಮ್ಮನ್ನೂ ಆದ್ಯತೆಯಲ್ಲಿ ಪರಿಗಣಿಸಬೇಕು. ಮೀಸಲಾತಿ ಸಂಬಂಧಿಸಿ ಎಲ್ಲಾ ಸವಲತ್ತುಗಳು ನಮಗೂ ದೊರಕುವಲ್ಲಿ ಸರ್ಕಾರ ಪ್ರಯತ್ನಿಸಬೇಕೆಂದು ಒತ್ತಾಯಿಸುತ್ತೇವೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ)


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »